<p>ಪ್ರಜಾವಾಣಿ ವಾರ್ತೆ</p>.<p><strong>ಹಲಗೂರು</strong>: ‘ಲಯನ್ಸ್ ಕ್ಲಬ್ ವತಿಯಿಂದ ಭಾನುವಾರ (ಡಿ.29) ಚರ್ಮ ರೋಗ ಉಚಿತ ತಪಾಸಣಾ ಶಿಬಿರವನ್ನು ಅಯೋಜಿಸಲಾಗಿದ್ದು, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಕ್ಲಬ್ ಅಧ್ಯಕ್ಷ ನಂದೀಪುರ ಕುಮಾರ್ ತಿಳಿಸಿದರು.</p>.<p>‘ಇಲ್ಲಿನ ಚನ್ನಪಟ್ಟಣ ರಸ್ತೆಯಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘದ ಹಿಂಭಾಗದ ಲಯನ್ಸ್ ಭವನದಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಬೆಂಗಳೂರು ಮೂಲದ ಚರ್ಮರೋಗ ತಜ್ಞ ಚಂದ್ರಶೇಖರ್ ತಪಾಸಣೆ ನಡೆಸಲಿದ್ದಾರೆ’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಅಲರ್ಜಿ, ಮೊಡವೆ, ತೊನ್ನು, ಕೂದಲು ಉದುರುವಿಕೆ, ಉಗುರಿನ ಸಮಸ್ಯೆ, ಉಳಕಡ್ಡಿ/ಗಜಕರ್ಣ, ಮೈನವೆ, ಸೊರಿಯಾಸಿಸ್ ಸೇರಿದಂತೆ ಎಲ್ಲಾ ತರಹದ ಅಲರ್ಜಿಗಳಿಗೆ ಉಚಿತ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುವುದು’ ಎಂದು ಹೇಳಿದರು.</p>.<p>ಲಯನ್ಸ್ ಕ್ಲಬ್ ಕಾರ್ಯದರ್ಶಿ ಡಿ.ಎಲ್. ಮಾದೇಗೌಡ, ಖಜಾಂಚಿ ಶಿವರಾಜು, ಕ್ಲಬ್ ಸದಸ್ಯರಾದ ಕೃಷ್ಣ, ಗುರುಸಿದ್ದು, ಎ.ಎಸ್.ದೇವರಾಜು, ಬಸವರಾಜು, ಜಯಣ್ಣ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಹಲಗೂರು</strong>: ‘ಲಯನ್ಸ್ ಕ್ಲಬ್ ವತಿಯಿಂದ ಭಾನುವಾರ (ಡಿ.29) ಚರ್ಮ ರೋಗ ಉಚಿತ ತಪಾಸಣಾ ಶಿಬಿರವನ್ನು ಅಯೋಜಿಸಲಾಗಿದ್ದು, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಕ್ಲಬ್ ಅಧ್ಯಕ್ಷ ನಂದೀಪುರ ಕುಮಾರ್ ತಿಳಿಸಿದರು.</p>.<p>‘ಇಲ್ಲಿನ ಚನ್ನಪಟ್ಟಣ ರಸ್ತೆಯಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘದ ಹಿಂಭಾಗದ ಲಯನ್ಸ್ ಭವನದಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಬೆಂಗಳೂರು ಮೂಲದ ಚರ್ಮರೋಗ ತಜ್ಞ ಚಂದ್ರಶೇಖರ್ ತಪಾಸಣೆ ನಡೆಸಲಿದ್ದಾರೆ’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಅಲರ್ಜಿ, ಮೊಡವೆ, ತೊನ್ನು, ಕೂದಲು ಉದುರುವಿಕೆ, ಉಗುರಿನ ಸಮಸ್ಯೆ, ಉಳಕಡ್ಡಿ/ಗಜಕರ್ಣ, ಮೈನವೆ, ಸೊರಿಯಾಸಿಸ್ ಸೇರಿದಂತೆ ಎಲ್ಲಾ ತರಹದ ಅಲರ್ಜಿಗಳಿಗೆ ಉಚಿತ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುವುದು’ ಎಂದು ಹೇಳಿದರು.</p>.<p>ಲಯನ್ಸ್ ಕ್ಲಬ್ ಕಾರ್ಯದರ್ಶಿ ಡಿ.ಎಲ್. ಮಾದೇಗೌಡ, ಖಜಾಂಚಿ ಶಿವರಾಜು, ಕ್ಲಬ್ ಸದಸ್ಯರಾದ ಕೃಷ್ಣ, ಗುರುಸಿದ್ದು, ಎ.ಎಸ್.ದೇವರಾಜು, ಬಸವರಾಜು, ಜಯಣ್ಣ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>