<p><strong>ಮಂಡ್ಯ</strong>: ರಜೆ ಮೇಲೆ ಬಂದಿದ್ದ ಯೋಧ ರಾಘವೇಂದ್ರ ಅವರು ಭಾರತೀಯ ಸೇನೆಯ ತುರ್ತು ಕರೆಯ ಮೇರೆಗೆ ಭಾನುವಾರ ಕರ್ತವ್ಯಕ್ಕೆ ತೆರಳಿದರು.</p>.<p>ತಾಲ್ಲೂಕಿನ ಹಲ್ಲೇಗೆರೆ ಗ್ರಾಮದ ಸುಬ್ಬೇಗೌಡ ಹಾಗೂ ನಿಂಗಮ್ಮ ದಂಪತಿ ಎರಡನೇ ಪುತ್ರರಾದ ಇವರು ಮೊದಲಿಗೆ 2011ರ ಮಾ. 16ರಂದು ಗುಜರಾತ್ನ ಗಾಂಧಿಧಾಮ್ನಲ್ಲಿ ಮೊದಲು ಕರ್ತವ್ಯ ನಿರ್ವಹಿಸಿದ್ದರು. ನಂತರ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು.</p>.<p>ಮಹಾರಾಜ ನಗರ ಬಡಾವಣೆಯಲ್ಲಿ ಗೃಹಪ್ರವೇಶ ಇದ್ದುದರಿಂದ ಮೇ 12ರವರೆಗೂ ರಜೆ ಹಾಕಿ ಬಂದಿದ್ದರು. ಈಗ ಜಮ್ಮು ಕಾಶ್ಮೀರದ ಗಡಿ ಭಾಗ ಲಡಾಕ್ಗೆ ರಾಘವೇಂದ್ರ ಅವರನ್ನು ನಿಯೋಜಿಸಿದ್ದು, ಕರ್ತವ್ಯಕ್ಕೆ ತೆರಳಿದ ಇವರನ್ನು ಕುಟುಂಬದವರು ಹಾಗೂ ಬಡಾವಣೆಯ ನಿವಾಸಿಗಳು ಶುಭ ಹಾರೈಸಿ ಕಳುಹಿಸಿಕೊಟ್ಟರು.</p>.<p>ಬಡಾವಣೆಯ ಕಿರಣ್, ಲತಾ, ಸುನೀತಾ, ಅಶೋಕ್, ಗೋವಿಂದರಾಜು, ಕೃಷ್ಣಪ್ಪ, ರಾಮಲಿಂಗಯ್ಯ, ಮಹದೇವಸ್ವಾಮಿ, ನಟರಾಜು, ಕುಮಾರ್, ಕೆಂಪರಾಜು, ವೆಂಕಟರಾಮು, ರಾಘು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ರಜೆ ಮೇಲೆ ಬಂದಿದ್ದ ಯೋಧ ರಾಘವೇಂದ್ರ ಅವರು ಭಾರತೀಯ ಸೇನೆಯ ತುರ್ತು ಕರೆಯ ಮೇರೆಗೆ ಭಾನುವಾರ ಕರ್ತವ್ಯಕ್ಕೆ ತೆರಳಿದರು.</p>.<p>ತಾಲ್ಲೂಕಿನ ಹಲ್ಲೇಗೆರೆ ಗ್ರಾಮದ ಸುಬ್ಬೇಗೌಡ ಹಾಗೂ ನಿಂಗಮ್ಮ ದಂಪತಿ ಎರಡನೇ ಪುತ್ರರಾದ ಇವರು ಮೊದಲಿಗೆ 2011ರ ಮಾ. 16ರಂದು ಗುಜರಾತ್ನ ಗಾಂಧಿಧಾಮ್ನಲ್ಲಿ ಮೊದಲು ಕರ್ತವ್ಯ ನಿರ್ವಹಿಸಿದ್ದರು. ನಂತರ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು.</p>.<p>ಮಹಾರಾಜ ನಗರ ಬಡಾವಣೆಯಲ್ಲಿ ಗೃಹಪ್ರವೇಶ ಇದ್ದುದರಿಂದ ಮೇ 12ರವರೆಗೂ ರಜೆ ಹಾಕಿ ಬಂದಿದ್ದರು. ಈಗ ಜಮ್ಮು ಕಾಶ್ಮೀರದ ಗಡಿ ಭಾಗ ಲಡಾಕ್ಗೆ ರಾಘವೇಂದ್ರ ಅವರನ್ನು ನಿಯೋಜಿಸಿದ್ದು, ಕರ್ತವ್ಯಕ್ಕೆ ತೆರಳಿದ ಇವರನ್ನು ಕುಟುಂಬದವರು ಹಾಗೂ ಬಡಾವಣೆಯ ನಿವಾಸಿಗಳು ಶುಭ ಹಾರೈಸಿ ಕಳುಹಿಸಿಕೊಟ್ಟರು.</p>.<p>ಬಡಾವಣೆಯ ಕಿರಣ್, ಲತಾ, ಸುನೀತಾ, ಅಶೋಕ್, ಗೋವಿಂದರಾಜು, ಕೃಷ್ಣಪ್ಪ, ರಾಮಲಿಂಗಯ್ಯ, ಮಹದೇವಸ್ವಾಮಿ, ನಟರಾಜು, ಕುಮಾರ್, ಕೆಂಪರಾಜು, ವೆಂಕಟರಾಮು, ರಾಘು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>