<p><strong>ಮಳವಳ್ಳಿ: </strong>ಪಟ್ಟಣದಲ್ಲಿ ಜಾರಿಯಲ್ಲಿ ಇರುವ 24X7 ಕುಡಿಯುವ ನೀರಿನ ಯೋಜನೆಯಲ್ಲಿ ಸಮರ್ಪಕವಾಗಿ ನೀರು ಪೂರೈಕೆ ಆಗದ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬರುತ್ತಿರುವ ಕಾರಣ ಶಾಸಕ ಡಾ.ಕೆ.ಅನ್ನದಾನಿ ಶುಕ್ರವಾರ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು.</p>.<p>ಪಟ್ಟಣದ ಪುರಸಭೆ 3 ಮತ್ತು 4ನೇ ವಾರ್ಡ್ಗಳಿಗೆ ಬೆಳಿಗ್ಗೆ 6 ಗಂಟೆಗೆ ತೆರಳಿದ ಶಾಸಕರು, ನಲ್ಲಿಗಳಲ್ಲಿ ನೀರಿನ ಪ್ರಮಾಣ ಪರೀಕ್ಷಿಸಿದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದರು.</p>.<p>ಶಾಸಕರ ಭೇಟಿ ವೇಳೆ ಬಹುತೇಕ ನಿವಾಸಿಗಳು ನೀರಿನ ಸಮಸ್ಯೆ ಬಗ್ಗೆ ಗಮನ ಸೆಳೆದರು. ನಮಗೆ ಕನಿಷ್ಠ ದಿನಕ್ಕೆ ಒಂದು ಗಂಟೆಯೂ ಕುಡಿಯುವ ನೀರು ಬರುತ್ತಿಲ್ಲ ಎಂದು ಅಳಲು ತೋಡಿಕೊಂಡರು.</p>.<p>ಶಾಸಕ ಡಾ.ಕೆ.ಅನ್ನದಾನಿ ಮಾತ ನಾಡಿ, ಪೈಪ್ ಲೈನ್ ಸಮಸ್ಯೆಯಿಂದ ಈ ರೀತಿ ಆಗಿದೆ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದ್ದು, ಶಾಶ್ವತವಾಗಿ ಸಮಸ್ಯೆಗೆ ಬಗೆಹರಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಪಟ್ಟಣದ ಯಾವುದೇ ವಾರ್ಡ್ಗಳಲ್ಲಿ ಇಂಥ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.</p>.<p>ಎಲ್ಲ ವಾರ್ಡ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಕಾಮಗಾರಿಗಳ ನೆಪದಲ್ಲಿ ಯಾವುದೇ ರಸ್ತೆಗಳನ್ನು ಅಗೆದರೂ, ಅದೇ ಇಲಾಖೆಯವರೇ ರಸ್ತೆ ಸರಿಪಡಿಸಬೇಕು. ಇಲ್ಲದೆ ಇದ್ದರೆ ಅವರಿಂದ ಹಣ ವಸೂಲಿ ಮಾಡಿ ರಸ್ತೆ ಅಭಿವೃದ್ಧಿ ಪಡಿಸಲಾಗುವುದು ಎಂದರು.</p>.<p>ಪುರಸಭೆ ಉಪಾಧ್ಯಕ್ಷ ಟಿ.ನಂದ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಪುಟ್ಟಸ್ವಾಮಿ, ಮುಖ್ಯಾಧಿಕಾರಿ ಕೆ.ಎಂ.ಪವನ್ ಕುಮಾರ್, ಎಂಜಿನಿಯರ್ ಪುಟ್ಟಯ್ಯ, ಮುಖಂಡರಾದ ನಾಗರಾಜು, ಕೃಷ್ಣ, ಕುಮಾರ್ ಈ ಸಂದರ್ಭದಲ್ಲಿ ಇದ್ದರು.</p>.<p class="Briefhead">ನೀರು ಹರಿಸಿ</p>.<p>ಮಳವಳ್ಳಿ: ಈ ಬಾರಿ ಉತ್ತಮ ಮಳೆಯಿಂದಾಗಿ ಕೆಆರ್ಎಸ್ ಜಲಾಶಯ ತುಂಬಿದ್ದು, ಹಾಲಿ ಇರುವ ಬೆಳೆಗಳು ಒಣಗುತ್ತಿವೆ. ಹೀಗಾಗಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ನಾಲೆಗಳಿಗೆ ನೀರು ಹರಿಸಬೇಕು ಎಂದು ಶಾಸಕ ಡಾ.ಕೆ.ಅನ್ನದಾನಿ ಆಗ್ರಹಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳೆಗಳು ಒಣಗುವ ಸ್ಥಿತಿಯ ಲ್ಲಿದ್ದು, ಎಲ್ಲ ನಾಲೆಗಳಿಗೆ ನೀರು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ: </strong>ಪಟ್ಟಣದಲ್ಲಿ ಜಾರಿಯಲ್ಲಿ ಇರುವ 24X7 ಕುಡಿಯುವ ನೀರಿನ ಯೋಜನೆಯಲ್ಲಿ ಸಮರ್ಪಕವಾಗಿ ನೀರು ಪೂರೈಕೆ ಆಗದ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬರುತ್ತಿರುವ ಕಾರಣ ಶಾಸಕ ಡಾ.ಕೆ.ಅನ್ನದಾನಿ ಶುಕ್ರವಾರ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು.</p>.<p>ಪಟ್ಟಣದ ಪುರಸಭೆ 3 ಮತ್ತು 4ನೇ ವಾರ್ಡ್ಗಳಿಗೆ ಬೆಳಿಗ್ಗೆ 6 ಗಂಟೆಗೆ ತೆರಳಿದ ಶಾಸಕರು, ನಲ್ಲಿಗಳಲ್ಲಿ ನೀರಿನ ಪ್ರಮಾಣ ಪರೀಕ್ಷಿಸಿದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದರು.</p>.<p>ಶಾಸಕರ ಭೇಟಿ ವೇಳೆ ಬಹುತೇಕ ನಿವಾಸಿಗಳು ನೀರಿನ ಸಮಸ್ಯೆ ಬಗ್ಗೆ ಗಮನ ಸೆಳೆದರು. ನಮಗೆ ಕನಿಷ್ಠ ದಿನಕ್ಕೆ ಒಂದು ಗಂಟೆಯೂ ಕುಡಿಯುವ ನೀರು ಬರುತ್ತಿಲ್ಲ ಎಂದು ಅಳಲು ತೋಡಿಕೊಂಡರು.</p>.<p>ಶಾಸಕ ಡಾ.ಕೆ.ಅನ್ನದಾನಿ ಮಾತ ನಾಡಿ, ಪೈಪ್ ಲೈನ್ ಸಮಸ್ಯೆಯಿಂದ ಈ ರೀತಿ ಆಗಿದೆ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದ್ದು, ಶಾಶ್ವತವಾಗಿ ಸಮಸ್ಯೆಗೆ ಬಗೆಹರಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಪಟ್ಟಣದ ಯಾವುದೇ ವಾರ್ಡ್ಗಳಲ್ಲಿ ಇಂಥ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.</p>.<p>ಎಲ್ಲ ವಾರ್ಡ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಕಾಮಗಾರಿಗಳ ನೆಪದಲ್ಲಿ ಯಾವುದೇ ರಸ್ತೆಗಳನ್ನು ಅಗೆದರೂ, ಅದೇ ಇಲಾಖೆಯವರೇ ರಸ್ತೆ ಸರಿಪಡಿಸಬೇಕು. ಇಲ್ಲದೆ ಇದ್ದರೆ ಅವರಿಂದ ಹಣ ವಸೂಲಿ ಮಾಡಿ ರಸ್ತೆ ಅಭಿವೃದ್ಧಿ ಪಡಿಸಲಾಗುವುದು ಎಂದರು.</p>.<p>ಪುರಸಭೆ ಉಪಾಧ್ಯಕ್ಷ ಟಿ.ನಂದ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಪುಟ್ಟಸ್ವಾಮಿ, ಮುಖ್ಯಾಧಿಕಾರಿ ಕೆ.ಎಂ.ಪವನ್ ಕುಮಾರ್, ಎಂಜಿನಿಯರ್ ಪುಟ್ಟಯ್ಯ, ಮುಖಂಡರಾದ ನಾಗರಾಜು, ಕೃಷ್ಣ, ಕುಮಾರ್ ಈ ಸಂದರ್ಭದಲ್ಲಿ ಇದ್ದರು.</p>.<p class="Briefhead">ನೀರು ಹರಿಸಿ</p>.<p>ಮಳವಳ್ಳಿ: ಈ ಬಾರಿ ಉತ್ತಮ ಮಳೆಯಿಂದಾಗಿ ಕೆಆರ್ಎಸ್ ಜಲಾಶಯ ತುಂಬಿದ್ದು, ಹಾಲಿ ಇರುವ ಬೆಳೆಗಳು ಒಣಗುತ್ತಿವೆ. ಹೀಗಾಗಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ನಾಲೆಗಳಿಗೆ ನೀರು ಹರಿಸಬೇಕು ಎಂದು ಶಾಸಕ ಡಾ.ಕೆ.ಅನ್ನದಾನಿ ಆಗ್ರಹಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳೆಗಳು ಒಣಗುವ ಸ್ಥಿತಿಯ ಲ್ಲಿದ್ದು, ಎಲ್ಲ ನಾಲೆಗಳಿಗೆ ನೀರು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>