<p><strong>ಕಿಕ್ಕೇರಿ:</strong> ಹೋಬಳಿಯ ಸಾಸಲು ಗ್ರಾಮದ ಮುಜರಾಯಿ ಸ್ವಾಮ್ಯದ ಸೋಮೇಶ್ವರ, ಶಂಭುಲಿಂಗೇಶ್ವರ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಶನಿವಾರ ಜರುಗಿತು.</p>.<p> ಒಂದು ತಿಂಗಳ ಅವಧಿಯಲ್ಲಿ ಭಕ್ತರು ಒಪ್ಪಿಸಿದ ಕಾಣಿಕೆ ಒಟ್ಟು ₹6,10,275 ಸಂಗ್ರಹದಲ್ಲಿತ್ತು. ಹಣವನ್ನು ಕೆ.ಆರ್. ಪೇಟೆಯ ಬ್ಯಾಂಕ್ ಆಫ್ ಬರೋಡಾ ಶಾಖೆಯ ಮುಜರಾಯಿ ಅಕೌಂಟ್ಗೆ ಜಮಾ ಮಾಡಲಾಯಿತು.<br> ತಹಶೀಲ್ದಾರ್ ಅಶೋಕ್ ಮಾರ್ಗದರ್ಶನದಲ್ಲಿ ಕಿಕ್ಕೇರಿ ನಾಡಕಚೇರಿ ಉಪತಹಶೀಲ್ದಾರ್ ವೀಣಾ ನೇತೃತ್ವದಲ್ಲಿ ಎಣಿಕೆ ನಡೆಯಿತು. ದೇಗುಲ ಜೀರ್ಣೋದ್ಧಾರ ನಡೆಯುತ್ತಿದೆ. ಹುಂಡಿ ರಕ್ಷಣೆಗಾಗಿ ತಿಂಗಳಿಗೊಮ್ಮೆ ಎಣಿಕೆ ಮಾಡಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂದು ವೀಣಾ ತಿಳಿಸಿದರು.</p>.<p> ರಾಜಸ್ವ ನಿರೀಕ್ಷಕ ನರೇಂದ್ರ, ಗ್ರಾಮ ಆಡಳಿತಾಧಿಕಾರಿಗಳಾದ ಪ್ರಸನ್ನ, ಸೋಮಾಚಾರ್, ತಿಪ್ಪೇಶ್, ಸುನಿಲ್ ಗಾಣಿಗೇರ, ಹರ್ಷಿತ, ವನಜಾಕ್ಷಿ, ಬ್ಯಾಂಕ್ ಆಫ್ ಬರೋಡದ ಪ್ರಕಾಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಿಕ್ಕೇರಿ:</strong> ಹೋಬಳಿಯ ಸಾಸಲು ಗ್ರಾಮದ ಮುಜರಾಯಿ ಸ್ವಾಮ್ಯದ ಸೋಮೇಶ್ವರ, ಶಂಭುಲಿಂಗೇಶ್ವರ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಶನಿವಾರ ಜರುಗಿತು.</p>.<p> ಒಂದು ತಿಂಗಳ ಅವಧಿಯಲ್ಲಿ ಭಕ್ತರು ಒಪ್ಪಿಸಿದ ಕಾಣಿಕೆ ಒಟ್ಟು ₹6,10,275 ಸಂಗ್ರಹದಲ್ಲಿತ್ತು. ಹಣವನ್ನು ಕೆ.ಆರ್. ಪೇಟೆಯ ಬ್ಯಾಂಕ್ ಆಫ್ ಬರೋಡಾ ಶಾಖೆಯ ಮುಜರಾಯಿ ಅಕೌಂಟ್ಗೆ ಜಮಾ ಮಾಡಲಾಯಿತು.<br> ತಹಶೀಲ್ದಾರ್ ಅಶೋಕ್ ಮಾರ್ಗದರ್ಶನದಲ್ಲಿ ಕಿಕ್ಕೇರಿ ನಾಡಕಚೇರಿ ಉಪತಹಶೀಲ್ದಾರ್ ವೀಣಾ ನೇತೃತ್ವದಲ್ಲಿ ಎಣಿಕೆ ನಡೆಯಿತು. ದೇಗುಲ ಜೀರ್ಣೋದ್ಧಾರ ನಡೆಯುತ್ತಿದೆ. ಹುಂಡಿ ರಕ್ಷಣೆಗಾಗಿ ತಿಂಗಳಿಗೊಮ್ಮೆ ಎಣಿಕೆ ಮಾಡಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂದು ವೀಣಾ ತಿಳಿಸಿದರು.</p>.<p> ರಾಜಸ್ವ ನಿರೀಕ್ಷಕ ನರೇಂದ್ರ, ಗ್ರಾಮ ಆಡಳಿತಾಧಿಕಾರಿಗಳಾದ ಪ್ರಸನ್ನ, ಸೋಮಾಚಾರ್, ತಿಪ್ಪೇಶ್, ಸುನಿಲ್ ಗಾಣಿಗೇರ, ಹರ್ಷಿತ, ವನಜಾಕ್ಷಿ, ಬ್ಯಾಂಕ್ ಆಫ್ ಬರೋಡದ ಪ್ರಕಾಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>