<p><strong>ಶ್ರೀರಂಗಪಟ್ಟಣ: ‘</strong>ಪಟ್ಟಣಕ್ಕೆ ದೇಶ, ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸಲು ಸಂಕ್ರಾಂತಿ ವೇಳೆಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು’ ಎಂದು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರುತಿ ಹೇಳಿದರು.</p>.<p>ಪಟ್ಟಣದಲ್ಲಿ ಗುರುವಾರ ಅಂಬಾರಿ ವಾಹನದಲ್ಲಿ ಕುಳಿತು ವಿವಿಧ ತಾಣ ವೀಕ್ಷಿಸಿ ಅವರು ಮಾತನಾಡಿದರು.</p>.<p>‘ಮೊದಲ ಹಂತವಾಗಿ ಪ್ರವಾಸಿಗರು ಐತಿಹಾಸಿಕ ಮತ್ತು ಪ್ರಾಕೃತಿಕ ತಾಣ ಗಳನ್ನು ಸುಲಭವಾಗಿ ವೀಕ್ಷಿಸಲು ಅನು ಕೂಲ ಆಗುವಂತೆ ಡಬಲ್ ಡೆಕ್ಕರ್ ವಾಹನ ಸಿದ್ಧಪಡಿಸಲಾಗಿದೆ. ಅಂಬಾರಿ ಎಂದು ಹೆಸರಿಡಲಾಗಿದೆ. ಶ್ರೀರಂಗ ಪಟ್ಟಣದಿಂದ ಈ ವಾಹನವನ್ನು ಪರಿ ಚಯಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘27 ವರ್ಷಗಳಿಂದ ಚಲನಚಿತ್ರಗಳಲ್ಲಿ ನಟಿಸುತ್ತಿದ್ದು, 100ಕ್ಕೂ ಹೆಚ್ಚು ಚಿತ್ರಗಳು ಈ ಊರಿನ ಆಸುಪಾಸಿನಲ್ಲಿ ಚಿತ್ರೀಕರಣಗೊಂಡಿವೆ. ಹಾಗಾಗಿ ಈ ಸ್ಥಳದ ಮಹತ್ವ ಗೊತ್ತಿದೆ. ಇಲ್ಲಿ ವರ್ಷ ಪೂರ್ತಿ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವ ಆಲೋಚನೆ ಇದೆ. ಅಧಿಕಾರಿಗಳ ಜತೆ ಈಗಾಗಲೇ ಚರ್ಚೆ ನಡೆದಿದೆ. ಈ ಊರಿನ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಲು ಅಗತ್ಯ ಕಾರ್ಯಕ್ರಮ ರೂಪಿಸ ಲಾಗುವುದು’ ಎಂದರು.</p>.<p>‘ಮುಖ್ಯಮಂತ್ರಿ ಯಡಿಯೂರಪ್ಪ ಇದೇ ಜಿಲ್ಲೆಯವರಾಗಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೆ ಎಲ್ಲ ರೀತಿಯ ನೆರವು ನೀಡುವ ಭರವಸೆ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಸಹಕಾರವೂ ಇದೆ’ ಎಂದರು.</p>.<p>‘ಶ್ರೀರಂಗನಾಥಸ್ವಾಮಿ ದೇವಾಲಯ ಬಳಿ ಖಾಲಿ ಬಿದ್ದಿರುವ ಪ್ರವಾಸೋದ್ಯಮ ಇಲಾಖೆಯ ಕಟ್ಟಡವನ್ನು ಬಳಕೆಗೆ ಯೋಗ್ಯವಾಗುವಂತೆ ಸಿದ್ಧಗೊಳಿಸಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಡಬಲ್ ಡೆಕ್ಕರ್ ಬಸ್ನಲ್ಲಿ ಕುಳಿತು ಆನೆಕೋಟೆ, ಶ್ರೀರಂಗನಾಥಸ್ವಾಮಿ ದೇಗುಲ, ಸೋಪಾನಕಟ್ಟೆ ಸ್ಥಳಗಳನ್ನು ಅಧಿಕಾರಿಗಳು ಹಾಗೂ ಸ್ಥಳೀಯ ಬಿಜೆಪಿ ಮುಖಂಡರ ಜತೆಗೂಡಿ ವೀಕ್ಷಿಸಿದರು.</p>.<p>ಉಪ ವಿಭಾಗಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ತಹಶೀಲ್ದಾರ್ ಎಂ.ವಿ.ರೂಪಾ, ನಟಿ ಜಯಂತಿ ಅವರ ಪುತ್ರ ಕೃಷ್ಣಕುಮಾರ್, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧಿಕಾರಿಗಳಾದ ವೇಣುಗೋಪಾಲ್, ಶ್ರೀನಿವಾಸ್, ಯೋಗೇಶ್, ಬಿಜೆಪಿ ಮುಖಂಡರಾದ ಟಿ.ಶ್ರೀಧರ್, ಎಸ್.ಕೆ.ಮಂಜುನಾಥ್, ಪುಟ್ಟರಾಮು, ಇಂದ್ರಕುಮಾರ್, ವಿದ್ಯಾ ಉಮೇಶ್ ಜತೆಗಿದ್ದರು.</p>.<p class="Subhead">ಚಂದ್ರವನದಲ್ಲಿ ಮಡಿಲಕ್ಕಿ: ಶೃತಿ ಅವರು ಚಂದ್ರವನ ಆಶ್ರಮಕ್ಕೆ ಭೇಟಿ ನೀಡಿದರು. ಆಶ್ರಮದ ಪೀಠಾಧ್ಯಕ್ಷ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಅವರಿಂದ ಸನ್ಮಾನ ಮತ್ತು ಮಡಿಲಕ್ಕಿ ಸ್ವೀಕರಿಸಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ, ಸ್ವಾಮೀಜಿ ಜತೆ ಪ್ರವಾ ಸೋದ್ಯಮ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ಆಶ್ರಮದ ಕಾರ್ಯದರ್ಶಿ ಟ.ಪಿ.ಶಿವಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ: ‘</strong>ಪಟ್ಟಣಕ್ಕೆ ದೇಶ, ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸಲು ಸಂಕ್ರಾಂತಿ ವೇಳೆಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು’ ಎಂದು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರುತಿ ಹೇಳಿದರು.</p>.<p>ಪಟ್ಟಣದಲ್ಲಿ ಗುರುವಾರ ಅಂಬಾರಿ ವಾಹನದಲ್ಲಿ ಕುಳಿತು ವಿವಿಧ ತಾಣ ವೀಕ್ಷಿಸಿ ಅವರು ಮಾತನಾಡಿದರು.</p>.<p>‘ಮೊದಲ ಹಂತವಾಗಿ ಪ್ರವಾಸಿಗರು ಐತಿಹಾಸಿಕ ಮತ್ತು ಪ್ರಾಕೃತಿಕ ತಾಣ ಗಳನ್ನು ಸುಲಭವಾಗಿ ವೀಕ್ಷಿಸಲು ಅನು ಕೂಲ ಆಗುವಂತೆ ಡಬಲ್ ಡೆಕ್ಕರ್ ವಾಹನ ಸಿದ್ಧಪಡಿಸಲಾಗಿದೆ. ಅಂಬಾರಿ ಎಂದು ಹೆಸರಿಡಲಾಗಿದೆ. ಶ್ರೀರಂಗ ಪಟ್ಟಣದಿಂದ ಈ ವಾಹನವನ್ನು ಪರಿ ಚಯಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘27 ವರ್ಷಗಳಿಂದ ಚಲನಚಿತ್ರಗಳಲ್ಲಿ ನಟಿಸುತ್ತಿದ್ದು, 100ಕ್ಕೂ ಹೆಚ್ಚು ಚಿತ್ರಗಳು ಈ ಊರಿನ ಆಸುಪಾಸಿನಲ್ಲಿ ಚಿತ್ರೀಕರಣಗೊಂಡಿವೆ. ಹಾಗಾಗಿ ಈ ಸ್ಥಳದ ಮಹತ್ವ ಗೊತ್ತಿದೆ. ಇಲ್ಲಿ ವರ್ಷ ಪೂರ್ತಿ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವ ಆಲೋಚನೆ ಇದೆ. ಅಧಿಕಾರಿಗಳ ಜತೆ ಈಗಾಗಲೇ ಚರ್ಚೆ ನಡೆದಿದೆ. ಈ ಊರಿನ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಲು ಅಗತ್ಯ ಕಾರ್ಯಕ್ರಮ ರೂಪಿಸ ಲಾಗುವುದು’ ಎಂದರು.</p>.<p>‘ಮುಖ್ಯಮಂತ್ರಿ ಯಡಿಯೂರಪ್ಪ ಇದೇ ಜಿಲ್ಲೆಯವರಾಗಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೆ ಎಲ್ಲ ರೀತಿಯ ನೆರವು ನೀಡುವ ಭರವಸೆ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಸಹಕಾರವೂ ಇದೆ’ ಎಂದರು.</p>.<p>‘ಶ್ರೀರಂಗನಾಥಸ್ವಾಮಿ ದೇವಾಲಯ ಬಳಿ ಖಾಲಿ ಬಿದ್ದಿರುವ ಪ್ರವಾಸೋದ್ಯಮ ಇಲಾಖೆಯ ಕಟ್ಟಡವನ್ನು ಬಳಕೆಗೆ ಯೋಗ್ಯವಾಗುವಂತೆ ಸಿದ್ಧಗೊಳಿಸಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಡಬಲ್ ಡೆಕ್ಕರ್ ಬಸ್ನಲ್ಲಿ ಕುಳಿತು ಆನೆಕೋಟೆ, ಶ್ರೀರಂಗನಾಥಸ್ವಾಮಿ ದೇಗುಲ, ಸೋಪಾನಕಟ್ಟೆ ಸ್ಥಳಗಳನ್ನು ಅಧಿಕಾರಿಗಳು ಹಾಗೂ ಸ್ಥಳೀಯ ಬಿಜೆಪಿ ಮುಖಂಡರ ಜತೆಗೂಡಿ ವೀಕ್ಷಿಸಿದರು.</p>.<p>ಉಪ ವಿಭಾಗಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ತಹಶೀಲ್ದಾರ್ ಎಂ.ವಿ.ರೂಪಾ, ನಟಿ ಜಯಂತಿ ಅವರ ಪುತ್ರ ಕೃಷ್ಣಕುಮಾರ್, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧಿಕಾರಿಗಳಾದ ವೇಣುಗೋಪಾಲ್, ಶ್ರೀನಿವಾಸ್, ಯೋಗೇಶ್, ಬಿಜೆಪಿ ಮುಖಂಡರಾದ ಟಿ.ಶ್ರೀಧರ್, ಎಸ್.ಕೆ.ಮಂಜುನಾಥ್, ಪುಟ್ಟರಾಮು, ಇಂದ್ರಕುಮಾರ್, ವಿದ್ಯಾ ಉಮೇಶ್ ಜತೆಗಿದ್ದರು.</p>.<p class="Subhead">ಚಂದ್ರವನದಲ್ಲಿ ಮಡಿಲಕ್ಕಿ: ಶೃತಿ ಅವರು ಚಂದ್ರವನ ಆಶ್ರಮಕ್ಕೆ ಭೇಟಿ ನೀಡಿದರು. ಆಶ್ರಮದ ಪೀಠಾಧ್ಯಕ್ಷ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಅವರಿಂದ ಸನ್ಮಾನ ಮತ್ತು ಮಡಿಲಕ್ಕಿ ಸ್ವೀಕರಿಸಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ, ಸ್ವಾಮೀಜಿ ಜತೆ ಪ್ರವಾ ಸೋದ್ಯಮ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ಆಶ್ರಮದ ಕಾರ್ಯದರ್ಶಿ ಟ.ಪಿ.ಶಿವಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>