<p><strong>ಮದ್ದೂರು:</strong> ಪಟ್ಟಣದ ಸಂಜಯ ಚಿತ್ರಮಂದಿರದಲ್ಲಿ ‘ಭರಾಟೆ’ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಈ ಚಿತ್ರಮಂದಿರಕ್ಕೆ ಚಿತ್ರದ ನಾಯಕ ನಟ ಶ್ರೀಮುರಳಿ, ನಾಯಕ ನಟಿ ಶ್ರೀಲೀಲಾ, ನಿರ್ದೇಶಕ ಚೇತನ್ ಕುಮಾರ್ ಭಾನುವಾರ ಭೇಟಿ ನೀಡಿದ್ದರು.</p>.<p>ಶ್ರೀಮುರಳಿ ಬಂದಿರುವ ವಿಷಯ ತಿಳಿಯುತ್ತಿದ್ದಂತೆ ಅಭಿಮಾನಿಗಳು ಅವರನ್ನು ಸುತ್ತುವರಿದರು. ಚಿತ್ರಮಂದಿರ ದಲ್ಲಿದ್ದ ಅಭಿಮಾನಿಗಳು ಹೊರಗೆ ಬಂದು ತಮ್ಮ ನೆಚ್ಚಿನ ನಾಯಕ ನಟನನ್ನು ಕಣ್ತುಂಬಿಕೊಂಡರು. ಶ್ರೀಮುರಳಿ ಅವರಿಗೆ ಹೂವಿನ ಹಾರಗಳನ್ನು ಹಾಕಿ ಸಂಭ್ರಮಿಸಿದರು.</p>.<p>ಅಭಿಮಾನಿಗಳ ಒತ್ತಾಯದ ಮೇರೆಗೆ ಶ್ರೀಮುರಳಿ ಅವರು ‘ಭರಾಟೆ’ ಚಿತ್ರದ ಹಾಡೊಂದಕ್ಕೆ ತಮ್ಮ ಫಾರ್ಚುನರ್ ಕಾರಿನ ಮೇಲೆ ನಿಂತು ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.</p>.<p>ಶ್ರೀಲೀಲಾ, ಚೇತನ್ ಕುಮಾರ್ ಅವರು ಚಿತ್ರಮಂದಿರದೊಳಗೆ ಹೋಗಿ ಅಭಿಮಾನಿಗಳೊಂದಿಗೆ ಸ್ವಲ್ಪ ಹೊತ್ತು ಚಿತ್ರವನ್ನು ವೀಕ್ಷಿಸಿದರು.</p>.<p>ಭರಾಟೆ ಚಿತ್ರಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಎಲ್ಲ ಕಡೆಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ ಎಂದು ಶ್ರೀಮುರಳಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಪಟ್ಟಣದ ಸಂಜಯ ಚಿತ್ರಮಂದಿರದಲ್ಲಿ ‘ಭರಾಟೆ’ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಈ ಚಿತ್ರಮಂದಿರಕ್ಕೆ ಚಿತ್ರದ ನಾಯಕ ನಟ ಶ್ರೀಮುರಳಿ, ನಾಯಕ ನಟಿ ಶ್ರೀಲೀಲಾ, ನಿರ್ದೇಶಕ ಚೇತನ್ ಕುಮಾರ್ ಭಾನುವಾರ ಭೇಟಿ ನೀಡಿದ್ದರು.</p>.<p>ಶ್ರೀಮುರಳಿ ಬಂದಿರುವ ವಿಷಯ ತಿಳಿಯುತ್ತಿದ್ದಂತೆ ಅಭಿಮಾನಿಗಳು ಅವರನ್ನು ಸುತ್ತುವರಿದರು. ಚಿತ್ರಮಂದಿರ ದಲ್ಲಿದ್ದ ಅಭಿಮಾನಿಗಳು ಹೊರಗೆ ಬಂದು ತಮ್ಮ ನೆಚ್ಚಿನ ನಾಯಕ ನಟನನ್ನು ಕಣ್ತುಂಬಿಕೊಂಡರು. ಶ್ರೀಮುರಳಿ ಅವರಿಗೆ ಹೂವಿನ ಹಾರಗಳನ್ನು ಹಾಕಿ ಸಂಭ್ರಮಿಸಿದರು.</p>.<p>ಅಭಿಮಾನಿಗಳ ಒತ್ತಾಯದ ಮೇರೆಗೆ ಶ್ರೀಮುರಳಿ ಅವರು ‘ಭರಾಟೆ’ ಚಿತ್ರದ ಹಾಡೊಂದಕ್ಕೆ ತಮ್ಮ ಫಾರ್ಚುನರ್ ಕಾರಿನ ಮೇಲೆ ನಿಂತು ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.</p>.<p>ಶ್ರೀಲೀಲಾ, ಚೇತನ್ ಕುಮಾರ್ ಅವರು ಚಿತ್ರಮಂದಿರದೊಳಗೆ ಹೋಗಿ ಅಭಿಮಾನಿಗಳೊಂದಿಗೆ ಸ್ವಲ್ಪ ಹೊತ್ತು ಚಿತ್ರವನ್ನು ವೀಕ್ಷಿಸಿದರು.</p>.<p>ಭರಾಟೆ ಚಿತ್ರಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಎಲ್ಲ ಕಡೆಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ ಎಂದು ಶ್ರೀಮುರಳಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>