<p><strong>ನಾಗಮಂಗಲ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ರಾಮನವಮಿಯ ಅಂಗವಾಗಿ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಿದವು.</p>.<p>ವಿವಿಧ ಗ್ರಾಮಗಳಲ್ಲಿರುವ ರಾಮಮಂದಿರ ಮತ್ತು ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿಶೇಷ ಅಲಂಕಾರ, ಕೈಂಕರ್ಯಗಳು ಭಕ್ತರ ಸಮ್ಮುಖದಲ್ಲಿ ಜರುಗಿದವು.</p>.<p>ಪಟ್ಟಣದ ಹಲ್ಲೇಸಳೆ ಆಂಜನೇಯ, ರಾಘವೇಂದ್ರ ಸ್ವಾಮಿ ದೇವಾಲಯ, ಉಪ್ಪಾರಹಳ್ಳಿ ಆಂಜನೇಯ ಸ್ವಾಮಿ ದೇವಾಲಯ ಮತ್ತು ರಾಮಮಂದಿರ ಸೇರಿದಂತೆ ಐತಿಹಾಸಿಕ ಕೋದಂಡರಾಮ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದಲೇ ಪೂಜಾ ಕಾರ್ಯಕ್ರಮ ಜರುಗಿದವು. ಭಕ್ತರು ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು.</p>.<p>ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಶ್ರೀರಾಮ ದೇವರ ಫೋಟೊ ಇಟ್ಟು ಭಕ್ತರು ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಕಂಡು ಬಂತು.</p>.<p>ತಾಲ್ಲೂಕಿನ ಪುರಾಣ ಪ್ರಸಿದ್ಧ ಹದ್ದಿನಕಲ್ಲು ಮತ್ತು ಕಂಬದಹಳ್ಳಿ ಆಂಜನೇಯ ಸ್ವಾಮಿ ಬೆಟ್ಟಗಳಲ್ಲೂ ವಿಶೇಷ ಪೂಜೆ ಇದ್ದ ಕಾರಣ ಭಕ್ತರು ಬೆಟ್ಟಕ್ಕೆ ಹೋಗಿ ಪೂಜೆ ಸಲ್ಲಿಸಿದರು. ದೇವಾಲಯಗಳಲ್ಲಿ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. </p>.<p>ತಾಲ್ಲೂಕಿನ ಎಲ್ಲಾ ದೇವಾಲಯಗಳಲ್ಲೂ ದೊಡ್ಡ ದೊಡ್ಡ ಪಾತ್ರೆಗಳಲ್ಲಿ ಪಾನಕ, ಮಜ್ಜಿಗೆ, ಕೋಸಂಬರಿ, ಹೆಸರುಬೇಳೆ, ಹಣ್ಣಿನ ರಸಾಯನ ಸೇರಿದಂತೆ ವಿವಿಧ ಬಗೆಯ ಪ್ರಸಾದವನ್ನು ಭಕ್ತರಿಗೆ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ರಾಮನವಮಿಯ ಅಂಗವಾಗಿ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಿದವು.</p>.<p>ವಿವಿಧ ಗ್ರಾಮಗಳಲ್ಲಿರುವ ರಾಮಮಂದಿರ ಮತ್ತು ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿಶೇಷ ಅಲಂಕಾರ, ಕೈಂಕರ್ಯಗಳು ಭಕ್ತರ ಸಮ್ಮುಖದಲ್ಲಿ ಜರುಗಿದವು.</p>.<p>ಪಟ್ಟಣದ ಹಲ್ಲೇಸಳೆ ಆಂಜನೇಯ, ರಾಘವೇಂದ್ರ ಸ್ವಾಮಿ ದೇವಾಲಯ, ಉಪ್ಪಾರಹಳ್ಳಿ ಆಂಜನೇಯ ಸ್ವಾಮಿ ದೇವಾಲಯ ಮತ್ತು ರಾಮಮಂದಿರ ಸೇರಿದಂತೆ ಐತಿಹಾಸಿಕ ಕೋದಂಡರಾಮ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದಲೇ ಪೂಜಾ ಕಾರ್ಯಕ್ರಮ ಜರುಗಿದವು. ಭಕ್ತರು ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು.</p>.<p>ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಶ್ರೀರಾಮ ದೇವರ ಫೋಟೊ ಇಟ್ಟು ಭಕ್ತರು ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಕಂಡು ಬಂತು.</p>.<p>ತಾಲ್ಲೂಕಿನ ಪುರಾಣ ಪ್ರಸಿದ್ಧ ಹದ್ದಿನಕಲ್ಲು ಮತ್ತು ಕಂಬದಹಳ್ಳಿ ಆಂಜನೇಯ ಸ್ವಾಮಿ ಬೆಟ್ಟಗಳಲ್ಲೂ ವಿಶೇಷ ಪೂಜೆ ಇದ್ದ ಕಾರಣ ಭಕ್ತರು ಬೆಟ್ಟಕ್ಕೆ ಹೋಗಿ ಪೂಜೆ ಸಲ್ಲಿಸಿದರು. ದೇವಾಲಯಗಳಲ್ಲಿ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. </p>.<p>ತಾಲ್ಲೂಕಿನ ಎಲ್ಲಾ ದೇವಾಲಯಗಳಲ್ಲೂ ದೊಡ್ಡ ದೊಡ್ಡ ಪಾತ್ರೆಗಳಲ್ಲಿ ಪಾನಕ, ಮಜ್ಜಿಗೆ, ಕೋಸಂಬರಿ, ಹೆಸರುಬೇಳೆ, ಹಣ್ಣಿನ ರಸಾಯನ ಸೇರಿದಂತೆ ವಿವಿಧ ಬಗೆಯ ಪ್ರಸಾದವನ್ನು ಭಕ್ತರಿಗೆ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>