ಶ್ರೀದೇವಿ ಮತ್ತು ಭೂದೇವಿ ಅಮ್ಮನವರ ಸಮೇತ ಗರುಡಾರೂಢ ನಾದ ಚೆಲುವನಾರಾಯಣ ಸ್ವಾಮಿಗೆ ವಜ್ರಖಚಿತ ಕೃಷ್ಣರಾಜಮುಡಿ ಕಿರೀಟ ಧಾರಣೆ ಮಾಡಲಾಯಿತು. ವಿವಿಧ ಆಭರಣ, ಹೂಗಳಿಂದ ಸ್ವಾಮಿಯನ್ನು ಅಲಂಕರಿಸಲಾಗಿತ್ತು. ಗರುಡದೇವನಿಗೆ ಮೆರವಣಿಗೆ ಮಾಡಿದ ನಂತರ ಮಹಾ ಮಂಗಳಾರತಿ ನೆರವೇರಿಸಿ, ಕೃಷ್ಣ ರಾಜಮುಡಿ ಉತ್ಸವಕ್ಕೆ ಚಾಲನೆ ನೀಡ ಲಾಯಿತು. ಉಪ ವಿಭಾಗಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ, ತಹಶೀಲ್ದಾರ್ ಎಸ್.ಎಲ್.ನಯನಾ, ದೇವಾಲಯದ ಇಒ ಮಂಗಳಮ್ಮ ಇದ್ದರು.