<p>ಶ್ರೀರಂಗಪಟ್ಟಣ: ‘ಪಟ್ಟಣದ ಜಯಲಕ್ಷ್ಮಿ ಕಲ್ಯಾಣ ಮಂಟಪದ ಬಳಿಯ ವೃತ್ತಕ್ಕೆ ಬಸವಣ್ಣನ ಹೆಸರು ನಾಮಕರಣ ಮಾಡುವಂತೆ ಎರಡು ವರ್ಷಗಳಿಂದ ಒತ್ತಾಯಿಸುತ್ತಿದ್ದು, ಸ್ಥಳೀಯ ಪುರಸಭೆ ಆ ಹೆಸರನ್ನು ಅಧಿಕೃತಗೊಳಿಸಬೇಕು’ ಎಂದು ಪ್ರಜ್ಞಾವಂತರ ವೇದಿಕೆ ಸಂಚಾಲಕ ಹಾಗೂ ವಕೀಲ ಸಿ.ಎಸ್. ವೆಂಕಟೇಶ್ ಆಗ್ರಹಿಸಿದರು. ಪಟ್ಟಣದ ಜಯಲಕ್ಷ್ಮಿ ಕಲ್ಯಾಣ ಮಂಟಪದ ಬಳಿ ಪ್ರಜ್ಞಾವಂತರ ವೇದಿಕೆ ಬರೆಸಿರುವ ಫಲಕದ ಬಳಿ ಸೋಮವಾರ ನಡೆದ ಬಸವ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>ಮುಖಂಡರಾದ ಪಟೇಲ್ ಶಿವರಾಮೇಗೌಡ, ಕ್ಯಾತನಹಳ್ಳಿ ಚಂದ್ರಣ್ಣ, ಕೆ.ಟಿ.ರಂಗಯ್ಯ, ಎಸ್.ಎಂ. ಶಿವಕುಮಾರ್, ಸುಜಾತ ಅರಸ್, ಚಿಕ್ಕತಮ್ಮೇಗೌಡ, ಕೆ.ಎಸ್. ಸುರೇಶ್, ಅಯೂಬ್, ಜಯಸ್ವಾಮಿ, ಬಿ.ಟಿ. ದಾಸಪ್ರಕಾಶ್, ಸೋಮಶೇಖರ್, ಎಸ್.ಡಿ. ಬೆನ್ನೂರ, ನಾಗರಾಜು ಬಸವಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.</p>.<p>ಸಾರ್ವಜನಿಕ ಆಸ್ಪತ್ರೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಬಸವ ಜಯಂತಿಯನ್ನು ಆಚರಿಸಲಾಯಿತು. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಿ.ಎಂ. ಶ್ರೀಧರ್ ಮತ್ತು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಬಸವಣ್ಣ ಅವರ ವಚನಗಳ ಸಾರವನ್ನು ತಿಳಿಸಿದರು. ಶಸ್ತ್ರಚಿಕಿತ್ಸಕ ಡಾ.ಶ್ರೀನಿವಾಸ್, ಶುಶ್ರೂಣಾಧಿಕಾರಿ ಕುಸುಮಾ, ಶಿಲ್ಪಾ ಎನ್. ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-40-935957333</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀರಂಗಪಟ್ಟಣ: ‘ಪಟ್ಟಣದ ಜಯಲಕ್ಷ್ಮಿ ಕಲ್ಯಾಣ ಮಂಟಪದ ಬಳಿಯ ವೃತ್ತಕ್ಕೆ ಬಸವಣ್ಣನ ಹೆಸರು ನಾಮಕರಣ ಮಾಡುವಂತೆ ಎರಡು ವರ್ಷಗಳಿಂದ ಒತ್ತಾಯಿಸುತ್ತಿದ್ದು, ಸ್ಥಳೀಯ ಪುರಸಭೆ ಆ ಹೆಸರನ್ನು ಅಧಿಕೃತಗೊಳಿಸಬೇಕು’ ಎಂದು ಪ್ರಜ್ಞಾವಂತರ ವೇದಿಕೆ ಸಂಚಾಲಕ ಹಾಗೂ ವಕೀಲ ಸಿ.ಎಸ್. ವೆಂಕಟೇಶ್ ಆಗ್ರಹಿಸಿದರು. ಪಟ್ಟಣದ ಜಯಲಕ್ಷ್ಮಿ ಕಲ್ಯಾಣ ಮಂಟಪದ ಬಳಿ ಪ್ರಜ್ಞಾವಂತರ ವೇದಿಕೆ ಬರೆಸಿರುವ ಫಲಕದ ಬಳಿ ಸೋಮವಾರ ನಡೆದ ಬಸವ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>ಮುಖಂಡರಾದ ಪಟೇಲ್ ಶಿವರಾಮೇಗೌಡ, ಕ್ಯಾತನಹಳ್ಳಿ ಚಂದ್ರಣ್ಣ, ಕೆ.ಟಿ.ರಂಗಯ್ಯ, ಎಸ್.ಎಂ. ಶಿವಕುಮಾರ್, ಸುಜಾತ ಅರಸ್, ಚಿಕ್ಕತಮ್ಮೇಗೌಡ, ಕೆ.ಎಸ್. ಸುರೇಶ್, ಅಯೂಬ್, ಜಯಸ್ವಾಮಿ, ಬಿ.ಟಿ. ದಾಸಪ್ರಕಾಶ್, ಸೋಮಶೇಖರ್, ಎಸ್.ಡಿ. ಬೆನ್ನೂರ, ನಾಗರಾಜು ಬಸವಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.</p>.<p>ಸಾರ್ವಜನಿಕ ಆಸ್ಪತ್ರೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಬಸವ ಜಯಂತಿಯನ್ನು ಆಚರಿಸಲಾಯಿತು. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಿ.ಎಂ. ಶ್ರೀಧರ್ ಮತ್ತು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಬಸವಣ್ಣ ಅವರ ವಚನಗಳ ಸಾರವನ್ನು ತಿಳಿಸಿದರು. ಶಸ್ತ್ರಚಿಕಿತ್ಸಕ ಡಾ.ಶ್ರೀನಿವಾಸ್, ಶುಶ್ರೂಣಾಧಿಕಾರಿ ಕುಸುಮಾ, ಶಿಲ್ಪಾ ಎನ್. ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-40-935957333</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>