ವಾದ್ಯ, ಧ್ವನಿವರ್ಧಕ ಬಂದ್ ಮಾಡಿದ ನಂತರ ಆನೆ ಸಮಾಧಾನಗೊಂಡಿತು. ಆದರೂ ಮುನ್ನೆಚ್ಚರಿಕೆಯ ದೃಷ್ಟಿಯಿಂದ ಜಂಬೂಸವಾರಿಯನ್ನು ಸ್ಥಗಿತಗೊಳಿಸಲಾಯಿತು. ಅಂಬಾರಿಯಲ್ಲಿದ್ದ ದೇವಿ ವಿಗ್ರಹವನ್ನು ಬೆಳ್ಳಿ ರಥದಲ್ಲಿ ಕೂರಿಸಿ ಮೆರವಣಿಗೆ ಮುಂದುವರಿಸಲಾಯಿತು. ಕಲಾತಂಡಗಳೊಂದಿಗೆ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ ಮೂಲಕ ಮೆರವಣಿಗೆ ರಂಗನಾಥಸ್ವಾಮಿ ದೇವಾಲಯದ ಆವರಣ ಪ್ರವೇಶಿಸಿತು.