<p><strong>ಶ್ರೀರಂಗಪಟ್ಟಣ:</strong> ಕಿರಂಗೂರು ಬನ್ನಿಮಂಟಪದಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಶನಿವಾರ ಶ್ರೀರಂಗಪಟ್ಟಣ ದಸರಾಕ್ಕೆ ಚಾಲನೆ ನೀಡಿದರು.</p>.<p>ಆದರೆ, ಅಂಬಾರಿ ಹೊತ್ತ ಆನೆ ‘ಗೋಪಾಲಸ್ವಾಮಿ’ ಪಟಾಕಿ ಹಾಗೂ ವಾದ್ಯಗಳ ಸದ್ದಿಗೆ ಬೆದರಿದ ಕಾರಣ ಜಂಬೂಸವಾರಿಯನ್ನು ಸ್ಥಗಿತಗೊಳಿಸಲಾಯಿತು. ನಂತರ ದೇವಿಯನ್ನು ಬೆಳ್ಳಿರಥದಲ್ಲಿ ಕೂರಿಸಿ ದಸರಾ ಮೆರವಣಿಗೆ ಮುಂದುವರಿಸಲಾಯಿತು.</p>.<p>ಗೋಪಾಲಸ್ವಾಮಿ ಆನೆಗೆ ಕಾವೇರಿ ಆನೆ ಸಾಥ್ ನೀಡಿತ್ತು. ಜಂಬೂಸವಾರಿ ಆರಂಭವಾದ ಕೆಲವೇ ಕ್ಷಣಗಳಲ್ಲಿ ಆನೆಗಳು ಬೆದರಿದವು, ಗೋಪಾಲಸ್ವಾಮಿ ಆನೆ ನಿಂತಲೇ ಹಿಂದಕ್ಕೆ ಸುತ್ತು ಹಾಕಿತು. ಇದರಿಂದ ಗಾಬರಿಗೊಂಡ ಜನರು ಚೆಲ್ಲಾಪಿಲ್ಲಿಯಾಗಿ ಓಡಿದರು. ನೂಕುನುಗ್ಗಲು ಉಂಟಾಗಿ ಕೆಲವರು ನೆಲಕ್ಕೆ ಬಿದ್ದರು.</p>.<p>ಆನೆ ವೈದ್ಯರು, ಮಾವುತರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಯಾವುದೇ ತೊಂದರೆಯಾಗಲಿಲ್ಲ.</p>.<p>ವಾದ್ಯ, ಧ್ವನಿವರ್ಧಕ ಬಂದ್ ಮಾಡಿದ ನಂತರ ಆನೆ ಸಮಾಧಾನಗೊಂಡಿತು. ಆದರೂ ಮುನ್ನೆಚ್ಚರಿಕೆಯ ದೃಷ್ಟಿಯಿಂದ ಜಂಬೂಸವಾರಿಯನ್ನು ಸ್ಥಗಿತಗೊಳಿಸಲಾಯಿತು. ಅಂಬಾರಿಯಲ್ಲಿದ್ದ ದೇವಿ ವಿಗ್ರಹವನ್ನು ಬೆಳ್ಳಿ ರಥದಲ್ಲಿ ಕೂರಿಸಿ ಮೆರವಣಿಗೆ ಮುಂದುವರಿಸಲಾಯಿತು. ಕಲಾತಂಡಗಳೊಂದಿಗೆ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ ಮೂಲಕ ಮೆರವಣಿಗೆ ರಂಗನಾಥಸ್ವಾಮಿ ದೇವಾಲಯದ ಆವರಣ ಪ್ರವೇಶಿಸಿತು.</p>.<p>‘ಮೈಸೂರಿನಲ್ಲಿ ಪಿರಂಗಿ ತಾಲೀಮಿನ ವೇಳೆಯಲ್ಲೂ ಆನೆ ಗೋಪಾಲಸ್ವಾಮಿ ಬೆದರಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಜಂಬೂಸವಾರಿ ಸ್ಥಗಿತಗೊಳಿಸಲಾಯಿತು’ ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ಕಿರಂಗೂರು ಬನ್ನಿಮಂಟಪದಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಶನಿವಾರ ಶ್ರೀರಂಗಪಟ್ಟಣ ದಸರಾಕ್ಕೆ ಚಾಲನೆ ನೀಡಿದರು.</p>.<p>ಆದರೆ, ಅಂಬಾರಿ ಹೊತ್ತ ಆನೆ ‘ಗೋಪಾಲಸ್ವಾಮಿ’ ಪಟಾಕಿ ಹಾಗೂ ವಾದ್ಯಗಳ ಸದ್ದಿಗೆ ಬೆದರಿದ ಕಾರಣ ಜಂಬೂಸವಾರಿಯನ್ನು ಸ್ಥಗಿತಗೊಳಿಸಲಾಯಿತು. ನಂತರ ದೇವಿಯನ್ನು ಬೆಳ್ಳಿರಥದಲ್ಲಿ ಕೂರಿಸಿ ದಸರಾ ಮೆರವಣಿಗೆ ಮುಂದುವರಿಸಲಾಯಿತು.</p>.<p>ಗೋಪಾಲಸ್ವಾಮಿ ಆನೆಗೆ ಕಾವೇರಿ ಆನೆ ಸಾಥ್ ನೀಡಿತ್ತು. ಜಂಬೂಸವಾರಿ ಆರಂಭವಾದ ಕೆಲವೇ ಕ್ಷಣಗಳಲ್ಲಿ ಆನೆಗಳು ಬೆದರಿದವು, ಗೋಪಾಲಸ್ವಾಮಿ ಆನೆ ನಿಂತಲೇ ಹಿಂದಕ್ಕೆ ಸುತ್ತು ಹಾಕಿತು. ಇದರಿಂದ ಗಾಬರಿಗೊಂಡ ಜನರು ಚೆಲ್ಲಾಪಿಲ್ಲಿಯಾಗಿ ಓಡಿದರು. ನೂಕುನುಗ್ಗಲು ಉಂಟಾಗಿ ಕೆಲವರು ನೆಲಕ್ಕೆ ಬಿದ್ದರು.</p>.<p>ಆನೆ ವೈದ್ಯರು, ಮಾವುತರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಯಾವುದೇ ತೊಂದರೆಯಾಗಲಿಲ್ಲ.</p>.<p>ವಾದ್ಯ, ಧ್ವನಿವರ್ಧಕ ಬಂದ್ ಮಾಡಿದ ನಂತರ ಆನೆ ಸಮಾಧಾನಗೊಂಡಿತು. ಆದರೂ ಮುನ್ನೆಚ್ಚರಿಕೆಯ ದೃಷ್ಟಿಯಿಂದ ಜಂಬೂಸವಾರಿಯನ್ನು ಸ್ಥಗಿತಗೊಳಿಸಲಾಯಿತು. ಅಂಬಾರಿಯಲ್ಲಿದ್ದ ದೇವಿ ವಿಗ್ರಹವನ್ನು ಬೆಳ್ಳಿ ರಥದಲ್ಲಿ ಕೂರಿಸಿ ಮೆರವಣಿಗೆ ಮುಂದುವರಿಸಲಾಯಿತು. ಕಲಾತಂಡಗಳೊಂದಿಗೆ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ ಮೂಲಕ ಮೆರವಣಿಗೆ ರಂಗನಾಥಸ್ವಾಮಿ ದೇವಾಲಯದ ಆವರಣ ಪ್ರವೇಶಿಸಿತು.</p>.<p>‘ಮೈಸೂರಿನಲ್ಲಿ ಪಿರಂಗಿ ತಾಲೀಮಿನ ವೇಳೆಯಲ್ಲೂ ಆನೆ ಗೋಪಾಲಸ್ವಾಮಿ ಬೆದರಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಜಂಬೂಸವಾರಿ ಸ್ಥಗಿತಗೊಳಿಸಲಾಯಿತು’ ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>