<p>ಶ್ರೀರಂಗಪಟ್ಟಣ: ‘ಗ್ರಾಹಕರು ವಿದ್ಯುತ್ ಮಿತವಾಗಿ ಬಳಸುವ ಮೂಲಕ ಅನಗತ್ಯ ವೆಚ್ಚ ಮತ್ತು ವಿದ್ಯುತ್ ಉಳಿತಾಯಕ್ಕೆ ಸಹಕರಿಸಬೇಕು’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಮನವಿ ಮಾಡಿದರು.</p>.<p>ತಾಲ್ಲೂಕಿನ ಮಹದೇವಪುರ ಗ್ರಾಮದಲ್ಲಿ ಸೆಸ್ಕ್ ಮಾದರಿ ಗ್ರಾಮ ಯೋಜನೆಗೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು. ‘ತಾಲ್ಲೂಕಿನಲ್ಲಿ 6 ಗ್ರಾಮಗಳನ್ನು ಸೆಸ್ಕ್ ಮಾದರಿ ಗ್ರಾಮ ಯೋಜನೆಗೆ ಆಯ್ಕೆ ಮಾಡಲಾಗಿದ್ದು, ₹50 ಲಕ್ಷ ವೆಚ್ಚದಲ್ಲಿ ಸುಧಾರಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಶಿಥಿಲ ವಿದ್ಯುತ್ ಕಂಬಗಳ ಬದಲಾವಣೆ, ವಿದ್ಯುತ್ ಪರಿವರ್ತಕಗಳ ಅಳವಡಿಕೆ ಸೇರಿದಂತೆ ವಿದ್ಯುತ್ ಸರಬರಾಜಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮಗಳನ್ನು ವಹಿಸಲಾಗುವುದು’ ಎಂದು ಹೇಳಿದರು.</p>.<p>‘ಮಹದೇವಪುರ ಗ್ರಾಮದಲ್ಲಿ ಕಾಳಮ್ಮ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ಕೆ ಅನುದಾನ ನೀಡಲಾಗಿದೆ. ಅಗತ್ಯ ಬಿದ್ದರೆ ಮತ್ತಷ್ಟು ಅನುದಾನ ಕೊಡಲಾಗುವುದು’ ಎಂದು ಅವರು ಭರವಸೆ ನೀಡಿದರು.</p>.<p>ತಹಶೀಲ್ದಾರ್ ಚೇತನಾ ಯಾದವ್, ಎಂಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಬಸವರಾಜು, ತಾ.ಪಂ. ಮಾಜಿ ಸದಸ್ಯ ಎಸ್. ಕಾಳೇಗೌಡ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ರವಿಕುಮಾರ್, ಜವನೇಗೌಡ, ಮುಖಂಡ ಪ್ರಸನ್ನ, ಸೆಸ್ಕ್ ಜೂನಿಯರ್ಎಂಜಿನಿಯರ್ ವೀರಭದ್ರಸ್ವಾಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-40-303582858</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀರಂಗಪಟ್ಟಣ: ‘ಗ್ರಾಹಕರು ವಿದ್ಯುತ್ ಮಿತವಾಗಿ ಬಳಸುವ ಮೂಲಕ ಅನಗತ್ಯ ವೆಚ್ಚ ಮತ್ತು ವಿದ್ಯುತ್ ಉಳಿತಾಯಕ್ಕೆ ಸಹಕರಿಸಬೇಕು’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಮನವಿ ಮಾಡಿದರು.</p>.<p>ತಾಲ್ಲೂಕಿನ ಮಹದೇವಪುರ ಗ್ರಾಮದಲ್ಲಿ ಸೆಸ್ಕ್ ಮಾದರಿ ಗ್ರಾಮ ಯೋಜನೆಗೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು. ‘ತಾಲ್ಲೂಕಿನಲ್ಲಿ 6 ಗ್ರಾಮಗಳನ್ನು ಸೆಸ್ಕ್ ಮಾದರಿ ಗ್ರಾಮ ಯೋಜನೆಗೆ ಆಯ್ಕೆ ಮಾಡಲಾಗಿದ್ದು, ₹50 ಲಕ್ಷ ವೆಚ್ಚದಲ್ಲಿ ಸುಧಾರಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಶಿಥಿಲ ವಿದ್ಯುತ್ ಕಂಬಗಳ ಬದಲಾವಣೆ, ವಿದ್ಯುತ್ ಪರಿವರ್ತಕಗಳ ಅಳವಡಿಕೆ ಸೇರಿದಂತೆ ವಿದ್ಯುತ್ ಸರಬರಾಜಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮಗಳನ್ನು ವಹಿಸಲಾಗುವುದು’ ಎಂದು ಹೇಳಿದರು.</p>.<p>‘ಮಹದೇವಪುರ ಗ್ರಾಮದಲ್ಲಿ ಕಾಳಮ್ಮ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ಕೆ ಅನುದಾನ ನೀಡಲಾಗಿದೆ. ಅಗತ್ಯ ಬಿದ್ದರೆ ಮತ್ತಷ್ಟು ಅನುದಾನ ಕೊಡಲಾಗುವುದು’ ಎಂದು ಅವರು ಭರವಸೆ ನೀಡಿದರು.</p>.<p>ತಹಶೀಲ್ದಾರ್ ಚೇತನಾ ಯಾದವ್, ಎಂಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಬಸವರಾಜು, ತಾ.ಪಂ. ಮಾಜಿ ಸದಸ್ಯ ಎಸ್. ಕಾಳೇಗೌಡ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ರವಿಕುಮಾರ್, ಜವನೇಗೌಡ, ಮುಖಂಡ ಪ್ರಸನ್ನ, ಸೆಸ್ಕ್ ಜೂನಿಯರ್ಎಂಜಿನಿಯರ್ ವೀರಭದ್ರಸ್ವಾಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-40-303582858</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>