<p><strong>ಶ್ರೀರಂಗಪಟ್ಟಣ(ಮಂಡ್ಯ):</strong> ತಾಲ್ಲೂಕಿನ ಚಂದಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೇರಿದ ಜಾಗದ ಪಹಣಿಯಲ್ಲಿ ‘ವಕ್ಫ್’ ಎಂದು ನಮೂದಾಗಿರುವುದನ್ನು ಖಂಡಿಸಿ ಗ್ರಾಮಸ್ಥರು ಶನಿವಾರ ಶಾಲೆಯ ಎದುರು ಪ್ರತಿಭಟನೆ ನಡೆಸಿದರು.</p>.<p>ಶಾಲೆಯ ಕಟ್ಟಡ ಮತ್ತು ಆಟದ ಮೈದಾನ ಸೇರಿ ಸ.ನಂ. 215ರಲ್ಲಿ 30 ಗುಂಟೆ ಜಾಗವಿದೆ. ಈ ಜಾಗದ ಪಹಣಿಯ 9ನೇ ಕಾಲಂನಲ್ಲಿ ‘ಖಬರ ಸ್ಥಾನ ವಕ್ಫ್’ ಎಂದು ನಮೂದಾಗಿದೆ. ಇದೇ ಪಹಣಿಯ 11ನೇ ಕಾಲಂನಲ್ಲಿ ‘ಕರ್ನಾಟಕ ರಾಜ್ಯ ವಕ್ಫ್ ಮಂಡಳಿ’ ಎಂದು ಬರುತ್ತಿದೆ. ಈ ವಿಷಯ ತಿಳಿದ ಗ್ರಾಮಸ್ಥರು ಕಂದಾಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಚಂದಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೂ ಖಬರಸ್ಥಾನಕ್ಕೂ ಸಂಬಂಧವೇ ಇಲ್ಲ. ಈ ಊರಲ್ಲಿ ಮುಸ್ಲಿಂ ಜನಾಂಗ ವಾಸವಾಗಿಲ್ಲ. ಹಿಂದೆಯೂ ಇರಲಿಲ್ಲ. ಹೀಗಿರುವಾಗ ಶಾಲೆಗೆ ಸೇರಿದ ಜಾಗದ ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿದ್ದಾರೂ ಹೇಗೆ? ಗ್ರಾ.ಪಂ. ಸದಸ್ಯ ರಮೇಶ್ ಪ್ರಶ್ನಿಸಿದರು.</p>.<p>ಸರ್ಕಾರಿ ಶಾಲೆಯ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವುದು ಅಚ್ಚರಿ ಮೂಡಿಸಿದೆ. ಕಂದಾಯ ಇಲಾಖೆ ಅಧಿಕಾರಿಗಳು ತಕ್ಷಣ ಈ ತಪ್ಪನ್ನು ಸರಿಪಡಿಸಬೇಕು ಎಂದು ಮುಖಂಡ ರಾಮಚಂದ್ರು ಆಗ್ರಹಿಸಿದರು. ಜಗದೀಶ್, ನಾಗೇಶ್, ಪ್ರಸನ್ನ, ರಾಮಚಂದ್ರೇಗೌಡ, ಶಂಕರ್, ಶಿವಣ್ಣ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ(ಮಂಡ್ಯ):</strong> ತಾಲ್ಲೂಕಿನ ಚಂದಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೇರಿದ ಜಾಗದ ಪಹಣಿಯಲ್ಲಿ ‘ವಕ್ಫ್’ ಎಂದು ನಮೂದಾಗಿರುವುದನ್ನು ಖಂಡಿಸಿ ಗ್ರಾಮಸ್ಥರು ಶನಿವಾರ ಶಾಲೆಯ ಎದುರು ಪ್ರತಿಭಟನೆ ನಡೆಸಿದರು.</p>.<p>ಶಾಲೆಯ ಕಟ್ಟಡ ಮತ್ತು ಆಟದ ಮೈದಾನ ಸೇರಿ ಸ.ನಂ. 215ರಲ್ಲಿ 30 ಗುಂಟೆ ಜಾಗವಿದೆ. ಈ ಜಾಗದ ಪಹಣಿಯ 9ನೇ ಕಾಲಂನಲ್ಲಿ ‘ಖಬರ ಸ್ಥಾನ ವಕ್ಫ್’ ಎಂದು ನಮೂದಾಗಿದೆ. ಇದೇ ಪಹಣಿಯ 11ನೇ ಕಾಲಂನಲ್ಲಿ ‘ಕರ್ನಾಟಕ ರಾಜ್ಯ ವಕ್ಫ್ ಮಂಡಳಿ’ ಎಂದು ಬರುತ್ತಿದೆ. ಈ ವಿಷಯ ತಿಳಿದ ಗ್ರಾಮಸ್ಥರು ಕಂದಾಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಚಂದಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೂ ಖಬರಸ್ಥಾನಕ್ಕೂ ಸಂಬಂಧವೇ ಇಲ್ಲ. ಈ ಊರಲ್ಲಿ ಮುಸ್ಲಿಂ ಜನಾಂಗ ವಾಸವಾಗಿಲ್ಲ. ಹಿಂದೆಯೂ ಇರಲಿಲ್ಲ. ಹೀಗಿರುವಾಗ ಶಾಲೆಗೆ ಸೇರಿದ ಜಾಗದ ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿದ್ದಾರೂ ಹೇಗೆ? ಗ್ರಾ.ಪಂ. ಸದಸ್ಯ ರಮೇಶ್ ಪ್ರಶ್ನಿಸಿದರು.</p>.<p>ಸರ್ಕಾರಿ ಶಾಲೆಯ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವುದು ಅಚ್ಚರಿ ಮೂಡಿಸಿದೆ. ಕಂದಾಯ ಇಲಾಖೆ ಅಧಿಕಾರಿಗಳು ತಕ್ಷಣ ಈ ತಪ್ಪನ್ನು ಸರಿಪಡಿಸಬೇಕು ಎಂದು ಮುಖಂಡ ರಾಮಚಂದ್ರು ಆಗ್ರಹಿಸಿದರು. ಜಗದೀಶ್, ನಾಗೇಶ್, ಪ್ರಸನ್ನ, ರಾಮಚಂದ್ರೇಗೌಡ, ಶಂಕರ್, ಶಿವಣ್ಣ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>