<p><strong>ಶ್ರೀರಂಗಪಟ್ಟಣ</strong>; ಕತೆ, ಕವನ, ನಾಟಕ ಇತರ ಪ್ರಕಾರದ ಸಾಹಿತ್ಯ ರಚನೆಗೆ ಸೃಜಶೀಲ ದೃಷ್ಟಿಕೋನ ಬಹಳ ಮುಖ್ಯ ಎಂದು ಸಾಹಿತಿ ನೀ.ಗೂ. ರಮೇಶ್ ಹೇಳಿದರು.</p>.<p>ತಾಲ್ಲೂಕಿನ ಕೆಆರ್ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ನಡೆದ ‘ಸಾಹಿತ್ಯ ರಚನಾ ಕಮ್ಮಟ’ದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬರಲ್ಲೂ ಪ್ರತಿಭೆ ಅಂತರ್ಗತ ವಾಗಿರುತ್ತದೆ. ಅದು ಪ್ರಕಾಶಮಾನಕ್ಕೆ ಬರಬೇಕಾದರೆ ಪ್ರೇರಣೆ ಮತ್ತು ಮಾರ್ಗದರ್ಶನ ಬೇಕು. ಈ ದಿಸೆಯಲ್ಲಿ ಸಾಹಿತ್ಯ ಕಮ್ಮಟಗಳು ಪ್ರತಿಭೆಗಳನ್ನು ಬೆಳಕಿಗೆ ತರಲು ಸಹಕಾರಿಯಾಗಿವೆ ಎಂದರು. ಇದೇ ವೇಳೆ ಅವರು ಕವನ ವಾಚಿಸುವ ಮೂಲಕ ಕನ್ನಡ ಸಂಘವನ್ನು ಉದ್ಘಾಟಿಸಿದರು.</p>.<p>ಕಾಲೇಜಿ ಕನ್ನಡ ವಿಭಾಗದಿಂದ ‘ಬೃಂದಾವನ’ ಹೆಸರಿನ ಗೋಡೆ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಪದಬಂಧ, ಚುಟುಕು, ಕತೆ, ಕವನ ರಚನಾ ಕಮ್ಮಟ ನಡೆಯಿತು.</p>.<p>ಕನ್ನಡ ವಿಭಾಗದ ಮುಖ್ಯಸ್ಥೆ ಹಾಗೂ ಐಕ್ಯೂಎಸಿ ಸಂಚಾಲಕರಾದ ಎಚ್.ವಿ. ಶಿಲ್ಪಶ್ರೀ ಪ್ರಾಸ್ತಾವಿಕ ಮಾತುಗಳಾಡಿದರು. ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥ ಪ್ರಸಾದ್, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಇಂದಿರಾ ಇದ್ದರು. ವಿದ್ಯಾರ್ಥಿಗಳು ಸ್ವರಚಿತ ಸಾಹಿತ್ಯ ಪ್ರಕಾರಗಳನ್ನು ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>; ಕತೆ, ಕವನ, ನಾಟಕ ಇತರ ಪ್ರಕಾರದ ಸಾಹಿತ್ಯ ರಚನೆಗೆ ಸೃಜಶೀಲ ದೃಷ್ಟಿಕೋನ ಬಹಳ ಮುಖ್ಯ ಎಂದು ಸಾಹಿತಿ ನೀ.ಗೂ. ರಮೇಶ್ ಹೇಳಿದರು.</p>.<p>ತಾಲ್ಲೂಕಿನ ಕೆಆರ್ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ನಡೆದ ‘ಸಾಹಿತ್ಯ ರಚನಾ ಕಮ್ಮಟ’ದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬರಲ್ಲೂ ಪ್ರತಿಭೆ ಅಂತರ್ಗತ ವಾಗಿರುತ್ತದೆ. ಅದು ಪ್ರಕಾಶಮಾನಕ್ಕೆ ಬರಬೇಕಾದರೆ ಪ್ರೇರಣೆ ಮತ್ತು ಮಾರ್ಗದರ್ಶನ ಬೇಕು. ಈ ದಿಸೆಯಲ್ಲಿ ಸಾಹಿತ್ಯ ಕಮ್ಮಟಗಳು ಪ್ರತಿಭೆಗಳನ್ನು ಬೆಳಕಿಗೆ ತರಲು ಸಹಕಾರಿಯಾಗಿವೆ ಎಂದರು. ಇದೇ ವೇಳೆ ಅವರು ಕವನ ವಾಚಿಸುವ ಮೂಲಕ ಕನ್ನಡ ಸಂಘವನ್ನು ಉದ್ಘಾಟಿಸಿದರು.</p>.<p>ಕಾಲೇಜಿ ಕನ್ನಡ ವಿಭಾಗದಿಂದ ‘ಬೃಂದಾವನ’ ಹೆಸರಿನ ಗೋಡೆ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಪದಬಂಧ, ಚುಟುಕು, ಕತೆ, ಕವನ ರಚನಾ ಕಮ್ಮಟ ನಡೆಯಿತು.</p>.<p>ಕನ್ನಡ ವಿಭಾಗದ ಮುಖ್ಯಸ್ಥೆ ಹಾಗೂ ಐಕ್ಯೂಎಸಿ ಸಂಚಾಲಕರಾದ ಎಚ್.ವಿ. ಶಿಲ್ಪಶ್ರೀ ಪ್ರಾಸ್ತಾವಿಕ ಮಾತುಗಳಾಡಿದರು. ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥ ಪ್ರಸಾದ್, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಇಂದಿರಾ ಇದ್ದರು. ವಿದ್ಯಾರ್ಥಿಗಳು ಸ್ವರಚಿತ ಸಾಹಿತ್ಯ ಪ್ರಕಾರಗಳನ್ನು ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>