‘ನೀರಿನ ಸಮಸ್ಯೆ ಬಗ್ಗೆ ಗಮನವಿರಲಿ’
‘ಬೇಸಿಗೆ ಸಮೀಪಿಸುತ್ತಿದ್ದು ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಗ್ರಾಮ ಪಂಚಾಯಿತಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕೊಳವೆ ಬಾವಿಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಜನರಿಂದ ದೂರು ಬಂದ ತಕ್ಷಣ ಸ್ಪಂದಿಸಬೇಕು. ಅಧಿಕಾರಿಗಳು ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಸಾರ್ವಜನಿಕರು ನನ್ನ ಗಮನಕ್ಕೆ ತರಬೇಕು’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು.