<p>ಶ್ರೀರಂಗಪಟ್ಟಣ: ‘ಕ್ಷಯ ವಾಸಿಯಾಗಬಲ್ಲ ಕಾಯಿಲೆಯಾಗಿದ್ದು, ರೋಗದ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಚಿಕಿತ್ಸೆ ಪಡೆದರೆ ಶೇ 100ರಷ್ಟು ಗುಣವಾಗಬಹುದು’ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಹೇಳಿದರು.</p>.<p>ಪಟ್ಟಣದ ರೈಲ್ವೆ ನಿಲ್ದಾಣದ ಬಳಿ ತಾಲ್ಲೂಕು ಆರೋಗ್ಯಾಧಿಕಾರಿಯವರ ಕಚೇರಿ ಹಾಗೂ ಸ್ಥಳೀಯ ನಮ್ಮ ಕ್ಲಿನಿಕ್ ವತಿಯಿಂದ ವಿಶ್ವ ಕ್ಷಯರೋಗ ದಿನಾಚರಣೆ ನಿಮಿತ್ತ ಬುಧವಾರ ನಡೆದ ‘ಟಿಬಿ ಮುಕ್ತ ಭಾರತ ಅಭಿಯಾನ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕ್ಷಯ ಬ್ಯಾಕ್ಟೀರಿಯಾದಿಂದ ಬರುವ ರೋಗವಾಗಿದ್ದು ಶ್ವಾಸಕೋಶಕ್ಕೆ ಸಮಸ್ಯೆಯಾಗುತ್ತದೆ. ರೋಗಿಯು ಕೆಮ್ಮುವಾಗ, ಸೀನುವಾಗ ಇತರರಿಗೆ ಹರಡುತ್ತದೆ. ಹಾಗಾಗಿ ಈ ರೋಗ ಇರುವರು ಪ್ರತ್ಯೇಕವಾಗಿ ಇದ್ದು ಚಿಕಿತ್ಸೆ ಪಡೆಯಬೇಕು. ಈ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ 100 ದಿನಗಳ ಕಾಲ ಟಿಬಿ ಮುಕ್ತ ಭಾರತ ಅಭಿಯಾನ ಹಮ್ಮಿಕೊಂಡಿದ್ದು ಸಂಘ, ಸಂಸ್ಥೆಗಳು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ. ಮೋಹನ್ ಮಾತನಾಡಿ, ‘ಒಂದು ವಾರಕ್ಕಿಂತ ಹೆಚ್ಚು ದಿನ ಕೆಮ್ಮು, ಕಫದಲ್ಲಿ ರಕ್ತ, ಸಂಜೆ ವೇಳೆ ಜ್ವರ ಬರುವುದು, ಹಸಿವಾಗದಿರುವುದು, ತೂಕ ಕಡಿಮೆಯಾಗುವುದು ಕ್ಷಯರೋಗದ ಪ್ರಮುಖ ಲಕ್ಷಣಗಲಾಗಿವೆ. ಈ ಕಾಯಿಲೆಗೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕಸಾಪ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಎಂ.ಬಿ. ಕುಮಾರ್, ಕ್ಷಯರೋಗ ಮೇಲ್ವಿಚಾರಕ ಮಹೇಶ್, ನಮ್ಮ ಕ್ಲಿನಿಕ್ ಆರೋಗ್ಯ ನಿರೀಕ್ಷಣಾಧಿಕಾರಿ ಮೇಘನಾ, ಶುಶ್ರೂಷಣಾಧಿಕಾರಿ ಕೋಮಲ, ಮುಖಂಡರಾದ ರವಿಕುಮಾರ್, ವೆಂಕಟೇಶ್, ರಚರ್ಡ್, ಹರೀಶ್ ಪಾಲ್ಗೊಂಡಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-40-456320840</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀರಂಗಪಟ್ಟಣ: ‘ಕ್ಷಯ ವಾಸಿಯಾಗಬಲ್ಲ ಕಾಯಿಲೆಯಾಗಿದ್ದು, ರೋಗದ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಚಿಕಿತ್ಸೆ ಪಡೆದರೆ ಶೇ 100ರಷ್ಟು ಗುಣವಾಗಬಹುದು’ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಹೇಳಿದರು.</p>.<p>ಪಟ್ಟಣದ ರೈಲ್ವೆ ನಿಲ್ದಾಣದ ಬಳಿ ತಾಲ್ಲೂಕು ಆರೋಗ್ಯಾಧಿಕಾರಿಯವರ ಕಚೇರಿ ಹಾಗೂ ಸ್ಥಳೀಯ ನಮ್ಮ ಕ್ಲಿನಿಕ್ ವತಿಯಿಂದ ವಿಶ್ವ ಕ್ಷಯರೋಗ ದಿನಾಚರಣೆ ನಿಮಿತ್ತ ಬುಧವಾರ ನಡೆದ ‘ಟಿಬಿ ಮುಕ್ತ ಭಾರತ ಅಭಿಯಾನ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕ್ಷಯ ಬ್ಯಾಕ್ಟೀರಿಯಾದಿಂದ ಬರುವ ರೋಗವಾಗಿದ್ದು ಶ್ವಾಸಕೋಶಕ್ಕೆ ಸಮಸ್ಯೆಯಾಗುತ್ತದೆ. ರೋಗಿಯು ಕೆಮ್ಮುವಾಗ, ಸೀನುವಾಗ ಇತರರಿಗೆ ಹರಡುತ್ತದೆ. ಹಾಗಾಗಿ ಈ ರೋಗ ಇರುವರು ಪ್ರತ್ಯೇಕವಾಗಿ ಇದ್ದು ಚಿಕಿತ್ಸೆ ಪಡೆಯಬೇಕು. ಈ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ 100 ದಿನಗಳ ಕಾಲ ಟಿಬಿ ಮುಕ್ತ ಭಾರತ ಅಭಿಯಾನ ಹಮ್ಮಿಕೊಂಡಿದ್ದು ಸಂಘ, ಸಂಸ್ಥೆಗಳು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ. ಮೋಹನ್ ಮಾತನಾಡಿ, ‘ಒಂದು ವಾರಕ್ಕಿಂತ ಹೆಚ್ಚು ದಿನ ಕೆಮ್ಮು, ಕಫದಲ್ಲಿ ರಕ್ತ, ಸಂಜೆ ವೇಳೆ ಜ್ವರ ಬರುವುದು, ಹಸಿವಾಗದಿರುವುದು, ತೂಕ ಕಡಿಮೆಯಾಗುವುದು ಕ್ಷಯರೋಗದ ಪ್ರಮುಖ ಲಕ್ಷಣಗಲಾಗಿವೆ. ಈ ಕಾಯಿಲೆಗೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕಸಾಪ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಎಂ.ಬಿ. ಕುಮಾರ್, ಕ್ಷಯರೋಗ ಮೇಲ್ವಿಚಾರಕ ಮಹೇಶ್, ನಮ್ಮ ಕ್ಲಿನಿಕ್ ಆರೋಗ್ಯ ನಿರೀಕ್ಷಣಾಧಿಕಾರಿ ಮೇಘನಾ, ಶುಶ್ರೂಷಣಾಧಿಕಾರಿ ಕೋಮಲ, ಮುಖಂಡರಾದ ರವಿಕುಮಾರ್, ವೆಂಕಟೇಶ್, ರಚರ್ಡ್, ಹರೀಶ್ ಪಾಲ್ಗೊಂಡಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-40-456320840</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>