<p><strong>ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ):</strong> ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಸಮೀಪ ವಿಶ್ವೇಶ್ವರಯ್ಯ ನಾಲೆಗೆ ಹೊಂದಿಕೊಂಡಿರುವ ಹೊಂಡದಲ್ಲಿ ಮುಳುಗಿ ಮೈಸೂರಿನ ಮೂವರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.</p><p>ಮೈಸೂರಿನ ಗೌಸಿಯಾ ನಗರದ ನಿವಾಸಿ ಇಮ್ರಾನ್ ಅವರ ಪುತ್ರಿ ಸೋನು (17), ರಿಜ್ವಾನ್ ಅವರ ಪುತ್ರಿ ಸಿಮ್ರಾನ್ (16) ಹಾಗೂ ಸೈಯ್ಯದ್ ನಾಸಿರ್ ಗೌಸ್ ಅವರ ಪುತ್ರ ಸಿದ್ದಿಕ್ (9) ಮೃತಪಟ್ಟಿದ್ದಾರೆ.</p><p>ಸೋನು, ಸಿಮ್ರಾನ್ ಮತ್ತು ಸಿದ್ದಿಕ್ ರಕ್ತ ಸಂಬಂಧಿಗಳಾಗಿದ್ದು, ಪಾಂಡವಪುರ ತಾಲ್ಲೂಕಿನ ಚಿಕ್ಕಾಯರಹಳ್ಳಿ ಗ್ರಾಮದ ತಮ್ಮ ಬಂಧುಗಳ ಮನೆಗೆ ಬಂದಿದ್ದರು.</p><p>ನಾರ್ತ್ ಬ್ಯಾಂಕ್ ಗ್ರಾಮದ ಸಮೀಪ ವಿಶ್ವೇಶ್ವರಯ್ಯ ನಾಲೆಗೆ ಹೊಂದಿಕೊಂಡಂತೆ ಇರುವ ಕಟ್ಟೆ ಮಾದರಿಯ ಹೊಂಡದ ಬಳಿ ಬಂದಾಗ ಸಿದ್ದಿಕ್ ಕಾಲು ಜಾರಿ ಬಿದ್ದಿದ್ದಾನೆ. ಆತನನ್ನು ರಕ್ಷಿಸಲು ಮುಂದಾದ ಸೋನು ಮತ್ತು ಸಿಮ್ರಾನ್ ಕೂಡ ನೀರಿನಲ್ಲಿ ಮುಳುಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಕೆ.ಆರ್.ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ):</strong> ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಸಮೀಪ ವಿಶ್ವೇಶ್ವರಯ್ಯ ನಾಲೆಗೆ ಹೊಂದಿಕೊಂಡಿರುವ ಹೊಂಡದಲ್ಲಿ ಮುಳುಗಿ ಮೈಸೂರಿನ ಮೂವರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.</p><p>ಮೈಸೂರಿನ ಗೌಸಿಯಾ ನಗರದ ನಿವಾಸಿ ಇಮ್ರಾನ್ ಅವರ ಪುತ್ರಿ ಸೋನು (17), ರಿಜ್ವಾನ್ ಅವರ ಪುತ್ರಿ ಸಿಮ್ರಾನ್ (16) ಹಾಗೂ ಸೈಯ್ಯದ್ ನಾಸಿರ್ ಗೌಸ್ ಅವರ ಪುತ್ರ ಸಿದ್ದಿಕ್ (9) ಮೃತಪಟ್ಟಿದ್ದಾರೆ.</p><p>ಸೋನು, ಸಿಮ್ರಾನ್ ಮತ್ತು ಸಿದ್ದಿಕ್ ರಕ್ತ ಸಂಬಂಧಿಗಳಾಗಿದ್ದು, ಪಾಂಡವಪುರ ತಾಲ್ಲೂಕಿನ ಚಿಕ್ಕಾಯರಹಳ್ಳಿ ಗ್ರಾಮದ ತಮ್ಮ ಬಂಧುಗಳ ಮನೆಗೆ ಬಂದಿದ್ದರು.</p><p>ನಾರ್ತ್ ಬ್ಯಾಂಕ್ ಗ್ರಾಮದ ಸಮೀಪ ವಿಶ್ವೇಶ್ವರಯ್ಯ ನಾಲೆಗೆ ಹೊಂದಿಕೊಂಡಂತೆ ಇರುವ ಕಟ್ಟೆ ಮಾದರಿಯ ಹೊಂಡದ ಬಳಿ ಬಂದಾಗ ಸಿದ್ದಿಕ್ ಕಾಲು ಜಾರಿ ಬಿದ್ದಿದ್ದಾನೆ. ಆತನನ್ನು ರಕ್ಷಿಸಲು ಮುಂದಾದ ಸೋನು ಮತ್ತು ಸಿಮ್ರಾನ್ ಕೂಡ ನೀರಿನಲ್ಲಿ ಮುಳುಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಕೆ.ಆರ್.ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>