ಕೆಆರ್ಎಸ್ ಅಣೆಕಟ್ಟೆಯ ದಕ್ಷಿಣ ದ್ವಾರದ ಬಳಿ ಪ್ರತಿಭಟನೆ ನಡೆಸಿ ಅಣೆಕಟ್ಟೆಯತ್ತ ತೆರಳುತ್ತಿದ್ದ ವಾಟಾಳ್ ನಾಗರಾಜ್, ಕನ್ನಡ ಸೇನೆ ರಾಜ್ಯ ಘಟಕದ ಅಧ್ಯಕ್ಷ ಕೆ.ಆರ್. ಕುಮಾರ್, ದಲಿತ ಸಂಘರ್ಷ ಸಮಿತಿಯ ಎ.ಎನ್. ಮೂರ್ತಿ, ರೂಪೇಶ್ ರಾಜಣ್ಣ, ಗಿರೀಶ್ಗೌಡ, ಪಾರ್ಥಸಾರಥಿ ಇತರರನ್ನು ಪೊಲೀಸರು ವಶಕ್ಕೆ ಪಡೆದರು. ತಮ್ಮನ್ನು ಬಂಧಿಸಲು ಮುಂದಾದ ಪೊಲೀಸರ ವಿರುದ್ಧ ವಾಟಾಳ್ ನಾಗರಾಜ್ ಹರಿಹಾಯ್ದರು. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಬಾವಚಿತ್ರವನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದರು.