ಈ ಮೊದಲು ಅ.3ರಿಂದ 6 ರವರೆಗೆ ದಸರಾ ನಡೆಸಲು ನಿರ್ಧರಿಸಲಾಗಿತ್ತು. ಕಾರ್ಯಕ್ರಮ ಆಯೋಜನೆ, ಸಂಪನ್ಮೂಲ ಕ್ರೋಡೀಕರಣ, ಪೂರ್ವ ಸಿದ್ಧತೆ ದೃಷ್ಟಿಯಿಂದ 3 ದಿನಗಳವರೆಗೆ ಮಾತ್ರ ನಡೆಸಲು ತೀರ್ಮಾನಿಸಲಾಗಿದೆ. ಅ.3ರಂದು ಮಧ್ಯಾಹ್ನ ಉತ್ಸವಕ್ಕೆ ಚಾಲನೆ ಸಿಗಲಿದೆ. ಚಾಲನೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಹ್ವಾನಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ್ ಸೇರಿ ಐದಾರು ಮಂತ್ರಿಗಳು ಹಾಗೂ ಜಿಲ್ಲೆಯ ಎಲ್ಲ ಶಾಸಕರು ಪಾಲ್ಗೊಳ್ಳಲಿದ್ದಾರೆ’ ಎಂದು ಹೇಳಿದರು.