<p>ಪ್ರಜಾವಾಣಿ ವಾರ್ತೆ</p>.<p><strong>ಪಾಂಡವಪುರ</strong>: ಪಟ್ಟಣದ ಹೇಮಾವತಿ ಬಡಾವಣೆ ಸಮೀಪದ ಬನ್ನಿಮಂಟಪ ವೃತ್ತದಲ್ಲಿ ಹಾರೋಹಳ್ಳಿ ಲಕ್ಷ್ಮೀದೇವಿ ಯುವಕರ ಬಳಗದ ವತಿಯಿಂದ ಜ.31ರಂದು ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ.</p>.<p>ತಾಲ್ಲೂಕಿನ ಕೆ.ಬೆಟ್ಟಹಳ್ಳಿ ಲಕ್ಷ್ಮೀದೇವಿ ಹಬ್ಬ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಪಂದ್ಯಾವಳಿ ಆಯೋಜಿಸಿದ್ದು, ವಾಲಿಬಾಲ್ ಪ್ರೇಮಿಗಳು, ಹಾರೋಹಳ್ಳಿ ಗ್ರಾಮಸ್ಥರು, ಯುವಕರು ಪಂದ್ಯಾವಳಿ ಯಶಸ್ವಿಗೆ ಸಹಕರಿಸಬೇಕು ಎಂದು ಆಯೋಜಕ ಎಚ್.ಸಿ.ಕೃಷ್ಣೇಗೌಡ (ಪಟೇಲ್) ಮನವಿ ಮಾಡಿದ್ದಾರೆ.</p>.<p>ಪಂದ್ಯಾವಳಿಯಲ್ಲಿ ಭಾಗವಹಿಸುವ ಪ್ರತಿ ತಂಡಕ್ಕೂ ₹999 ಪ್ರವೇಶ ಶುಲ್ಕ ನಿಗದಿಪಡಿಸಿದ್ದು, ಪ್ರಥಮ ಬಹುಮಾನ ₹30 ಸಾವಿರ, ದ್ವಿತೀಯ ಬಹುಮಾನ ₹ 20ಸಾವಿರ, ತೃತೀಯ ಬಹುಮಾನ ₹10ಸಾವಿರ ಹಾಗೂ ಚತುರ್ಥ ಸ್ಥಾನಕ್ಕೆ ₹7ಸಾವಿರ ನಗದು ಬಹುಮಾನ ಮತ್ತು ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ಆಸಕ್ತರು ಹೆಚ್ಚಿನ ಮಾಹಿತಿ ಹಾಗೂ ತಂಡದ ಹೆಸರು ನೋಂದಾಯಿಸಿಕೊಳ್ಳಲು ವರುಣ್ –76767 90717, ಕಾರ್ತಿಕ್–98865 40630, ರವಿ–70267 35697, ಮೇಘರಾಜು (ಅಪ್ಪು) –99642 28990 ಅವರನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.</p>
<p>ಪ್ರಜಾವಾಣಿ ವಾರ್ತೆ</p>.<p><strong>ಪಾಂಡವಪುರ</strong>: ಪಟ್ಟಣದ ಹೇಮಾವತಿ ಬಡಾವಣೆ ಸಮೀಪದ ಬನ್ನಿಮಂಟಪ ವೃತ್ತದಲ್ಲಿ ಹಾರೋಹಳ್ಳಿ ಲಕ್ಷ್ಮೀದೇವಿ ಯುವಕರ ಬಳಗದ ವತಿಯಿಂದ ಜ.31ರಂದು ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ.</p>.<p>ತಾಲ್ಲೂಕಿನ ಕೆ.ಬೆಟ್ಟಹಳ್ಳಿ ಲಕ್ಷ್ಮೀದೇವಿ ಹಬ್ಬ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಪಂದ್ಯಾವಳಿ ಆಯೋಜಿಸಿದ್ದು, ವಾಲಿಬಾಲ್ ಪ್ರೇಮಿಗಳು, ಹಾರೋಹಳ್ಳಿ ಗ್ರಾಮಸ್ಥರು, ಯುವಕರು ಪಂದ್ಯಾವಳಿ ಯಶಸ್ವಿಗೆ ಸಹಕರಿಸಬೇಕು ಎಂದು ಆಯೋಜಕ ಎಚ್.ಸಿ.ಕೃಷ್ಣೇಗೌಡ (ಪಟೇಲ್) ಮನವಿ ಮಾಡಿದ್ದಾರೆ.</p>.<p>ಪಂದ್ಯಾವಳಿಯಲ್ಲಿ ಭಾಗವಹಿಸುವ ಪ್ರತಿ ತಂಡಕ್ಕೂ ₹999 ಪ್ರವೇಶ ಶುಲ್ಕ ನಿಗದಿಪಡಿಸಿದ್ದು, ಪ್ರಥಮ ಬಹುಮಾನ ₹30 ಸಾವಿರ, ದ್ವಿತೀಯ ಬಹುಮಾನ ₹ 20ಸಾವಿರ, ತೃತೀಯ ಬಹುಮಾನ ₹10ಸಾವಿರ ಹಾಗೂ ಚತುರ್ಥ ಸ್ಥಾನಕ್ಕೆ ₹7ಸಾವಿರ ನಗದು ಬಹುಮಾನ ಮತ್ತು ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ಆಸಕ್ತರು ಹೆಚ್ಚಿನ ಮಾಹಿತಿ ಹಾಗೂ ತಂಡದ ಹೆಸರು ನೋಂದಾಯಿಸಿಕೊಳ್ಳಲು ವರುಣ್ –76767 90717, ಕಾರ್ತಿಕ್–98865 40630, ರವಿ–70267 35697, ಮೇಘರಾಜು (ಅಪ್ಪು) –99642 28990 ಅವರನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.</p>