ಗ್ರಾಮೀಣ ಭಾಗದಲ್ಲಿ ಜನಪದ ಸಾಹಿತ್ಯ ಉಳಿಯಬೇಕು. ಜನಪದದಲ್ಲಿ ಹಲವು ಗಾದೆ ಮಾತುಗಳು ಲೋಕರೂಢಿಯಲ್ಲಿವೆ. ಅವುಗಳನ್ನು ವಿದ್ಯಾರ್ಥಿಗಳು ಗಮನಿಸಬೇಕು. ಜನಪದವು ಸಾಹಿತ್ಯ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡಿದೆ. ವಿದ್ಯಾರ್ಥಿಗಳು ತಮ್ಮ ತಂದೆ, ತಾಯಂದಿರ ಮಾತುಗಳನ್ನು ಆಲಿಸಿ ಅವರ ಅಣತಿಯಂತೆ ನಡೆಯಬೇಕು. ಕೋಲಾಟ, ತಮಟೆ, ನಗಾರಿ, ಕಂಸಾಳೆ ಸೇರಿದಂತೆ ಎಷ್ಟೋ ಕಲೆಗಳಿವೆ, ಅವುಗಳನ್ನು ಶ್ರದ್ಧೆಯಿಂದ ಕಲಿತುಕೊಂಡರೆ ನಿಮ್ಮ ಭವಿಷ್ಯ ಉಜ್ವಲಗೊಳ್ಳಲು ಸಹಾಯವಾಗುತ್ತದೆ ಎಂದು ಸಲಹೆ ನೀಡಿದರು.