‘ಜಾತಿ, ಧರ್ಮ, ಭಾಷೆ, ಗಡಿಗಳ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆಯುವ ಹಿಂಸೆ, ಅತ್ಯಾಚಾರಗಳು ನಿಲ್ಲಬೇಕು. ಸರ್ವರ ಸಮಾನತೆ, ಏಳಿಗೆಯನ್ನು ಸಾಧಿಸಲು ಹಲವು ಪರಿಣಾಮಕಾರಿ ಕ್ರಮ ರೂಪಿಸಬೇಕು ಎಂಬ ಉದ್ದೇಶದೊಂದಿಗೆ ಸಮಾವೇಶ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳ ಲೇಖಕಿಯರು, ಮಹಿಳಾ ಚಿಂತಕಿಯರು ಭಾಗವಹಿಸಲಿದ್ದಾರೆ’ ಎಂದರು.