<p><strong>ಮದ್ದೂರು:</strong> ತಾಲ್ಲೂಕು ವ್ಯಾಪ್ತಿಯಲ್ಲಿ ಶಿಥಿಲಗೊಂಡಿರುವ ಕಟ್ಟಡಗಳ ಬದಲಿ ಸೇರಿದಂತೆ ಸುಮಾರು 50 ನೂತನ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲು ಕ್ರಮ ಕೈಗೊಂಡಿದ್ದೇನೆ ಎಂದು ಶಾಸಕ ಕೆ. ಎಂ ಉದಯ್ ತಿಳಿಸಿದರು.</p>.<p>ತಾಲ್ಲೂಕು ಕೊಕ್ಕರೆ ಬೆಳ್ಳೂರು ಸಮೀಪದ ಅರುವನಹಳ್ಳಿ ಗ್ರಾಮದಲ್ಲಿ ಮಂಗಳವಾರ ₹20 ಲಕ್ಷ ವೆಚ್ಚದ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಹಾಗೂ ₹12 ಲಕ್ಷ ರೂ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.</p>.<p>ಈಗಾಗಲೇ ಗ್ರಾಮೀಣ ಭಾಗದ ರಸ್ತೆ, ಚರಂಡಿ, ನೀರಾವರಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನೂರಾರು ಕೋಟಿ ರೂಪಾಯಿ ಅನುದಾನವನ್ನು ತಂದು ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ ಎಂದರು.</p>.<p>ಮನ್ ಮುಲ್ ನಿರ್ದೇಶಕ ಹರೀಶ್, ಮುಖಂಡರಾದ ಅರುವನಹಳ್ಳಿ ಸಿದ್ದರಾಜು, ಕೂಳಗೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆಂಪರಾಜು, ಗಿರಿಸಿದ್ದರಾಜು, ಅಪ್ಪರಾಜು, ಕೀರ್ತಿರಾಜು ನಾಗೇಶ್, ಅನಂತರಾಜು, ಎಸ್ಸಿ–ಎಸ್ಟಿ ಜಾಗೃತಿ ಸಮಿತಿ ಸದಸ್ಯರಾದ ಚಿದಂಬರಮೂರ್ತಿ, ಅಮೀನ್ ಶಿವಲಿಂಗಯ್ಯ ಸೇರಿದಂತೆ ಹಲವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ತಾಲ್ಲೂಕು ವ್ಯಾಪ್ತಿಯಲ್ಲಿ ಶಿಥಿಲಗೊಂಡಿರುವ ಕಟ್ಟಡಗಳ ಬದಲಿ ಸೇರಿದಂತೆ ಸುಮಾರು 50 ನೂತನ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲು ಕ್ರಮ ಕೈಗೊಂಡಿದ್ದೇನೆ ಎಂದು ಶಾಸಕ ಕೆ. ಎಂ ಉದಯ್ ತಿಳಿಸಿದರು.</p>.<p>ತಾಲ್ಲೂಕು ಕೊಕ್ಕರೆ ಬೆಳ್ಳೂರು ಸಮೀಪದ ಅರುವನಹಳ್ಳಿ ಗ್ರಾಮದಲ್ಲಿ ಮಂಗಳವಾರ ₹20 ಲಕ್ಷ ವೆಚ್ಚದ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಹಾಗೂ ₹12 ಲಕ್ಷ ರೂ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.</p>.<p>ಈಗಾಗಲೇ ಗ್ರಾಮೀಣ ಭಾಗದ ರಸ್ತೆ, ಚರಂಡಿ, ನೀರಾವರಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನೂರಾರು ಕೋಟಿ ರೂಪಾಯಿ ಅನುದಾನವನ್ನು ತಂದು ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ ಎಂದರು.</p>.<p>ಮನ್ ಮುಲ್ ನಿರ್ದೇಶಕ ಹರೀಶ್, ಮುಖಂಡರಾದ ಅರುವನಹಳ್ಳಿ ಸಿದ್ದರಾಜು, ಕೂಳಗೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆಂಪರಾಜು, ಗಿರಿಸಿದ್ದರಾಜು, ಅಪ್ಪರಾಜು, ಕೀರ್ತಿರಾಜು ನಾಗೇಶ್, ಅನಂತರಾಜು, ಎಸ್ಸಿ–ಎಸ್ಟಿ ಜಾಗೃತಿ ಸಮಿತಿ ಸದಸ್ಯರಾದ ಚಿದಂಬರಮೂರ್ತಿ, ಅಮೀನ್ ಶಿವಲಿಂಗಯ್ಯ ಸೇರಿದಂತೆ ಹಲವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>