ಯವತಿಯರ ಜತೆಯಲ್ಲಿ ಇದ್ದ ಈಶ್ವರಮ್ಮ ಎಂಬವವರು ಒಂದು ಪರ್ಲಾಂಗು ದೂರದ ಕಾಳೇನಹಳ್ಳಿ ಶೆಡ್ಡು ಗ್ರಾಮಕ್ಕೆ ಬಂದು ವಿಷಯ ತಿಳಿಸಿದ್ದು, ಜನರು ಅಲ್ಲಿಗೆ ಹೋಗುವಷ್ಟರಲ್ಲಿ ಯುವತಿಯರ ಮೃತಪಟ್ಟಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಶವಗಳನ್ನು ನೀರಿನಿಂದ ಮೇಲೆ ತೆಗೆದಿದ್ದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಸಿಪಿಐ ಬಿ.ಜಿ. ಕುಮಾರ್ ಭೇಟಿ ನೀಡಿದ್ದರು.