ತಾಲ್ಲೂಕಿನ ಹಂಗರಹಳ್ಳಿ, ಮುಂಡುಗದೊರೆ ಚಿಕ್ಕಪಾಳ್ಯ, ದೊಡ್ಡಪಾಳ್ಯ, ಟಿ.ಎಂ. ಹೊಸೂರು ಭಾಗದಲ್ಲಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, ಅಧಿಕಾರಿ ಗಳು ಪರೋಕ್ಷವಾಗಿ ನೆರವು ನೀಡುತ್ತಿದ್ದಾರೆ. ಸ್ವಹಿತದ ದೃಷ್ಟಿಯಿಂದ ಅಕ್ರಮ ಕಲ್ಲು ಗಣಿ ದಂಧೆಗೆ ಸಹಕರಿಸುತ್ತಿದ್ದಾರೆ. ಕೇವಲ ಎರಡು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಪ್ರತಿದಿನ ₹20 ಕೋಟಿಗೂ ಹೆಚ್ಚು ಗಣಿ ಸಂಪತ್ತು ಲೂಟಿಯಾಗುತ್ತಿದೆ. ಅಧಿಕಾರಿಗಳುನ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಆರೋಪಿಸಿದರು.