<p><strong>ಶ್ರೀರಂಗಪಟ್ಟಣ</strong>: ತಾಲ್ಲೂಕಿನ ಅರಕೆರೆ ಗ್ರಾಮದ ಕೆ. ರಾಜು ಅವರು ವಡಿಯಾಂಡಹಳ್ಳಿ ಬಳಿ ಎರಡೂವರೆ ಎಕರೆಯಲ್ಲಿ ಬೆಳೆದಿದ್ದ ಬಾಳೆ ಬೆಳೆ ಮಂಗಳವಾರ ಸಂಜೆ ಬೀಸಿದ ಭಾರಿ ಬಿರುಗಾಳಿಗೆ ನಾಶವಾಗಿದೆ.</p>.<p>ತೋಟದಲ್ಲಿ ಶೇ 90ರಷ್ಟು ಬಾಳೆ ಗಿಡಗಳು ಮುರಿದು ಬಿದ್ದಿವೆ. 20 ದಿನಗಳಲ್ಲಿ ಕಟಾವು ಮಾಡಬೇಕಿದ್ದ ಏಲಕ್ಕಿ ತಳಿಯ ಬಾಳೆ ಗೊನೆಗಳು ನೆಲ ಕಚ್ಚಿವೆ. ಅಂತರ ಬೆಳೆಯಾಗಿ ಬೆಳೆದಿದ್ದ ಪಪ್ಪಾಯ ಸಸಿಗಳು ಕೂಡ ಮುರಿದಿವೆ. ಅದರ ಕಾಯಿಗಳು ಜಮೀನಿನಲ್ಲಿ ಚೆಲ್ಲಾಡುತ್ತಿವೆ.</p>.<p>‘ಸುಮಾರು ₹2 ಲಕ್ಷ ಖರ್ಚು ಮಾಡಿ ಬಾಳೆ ಮತ್ತು ಪಪ್ಪಾಯ ಬೆಳೆದಿದ್ದೆ. ಬಿರುಗಾಳಿಯಿಂದ ಬೆಳೆ ಸಂಪೂರ್ಣ ನಾಶವಾಗಿದ್ದು, ಅಧಿಕಾರಿಗಳು ಸೂಕ್ತ ಪರಿಹಾರ ಕೊಡಿಸಬೇಕು’ ಎಂದು ಕೆ. ರಾಜು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>: ತಾಲ್ಲೂಕಿನ ಅರಕೆರೆ ಗ್ರಾಮದ ಕೆ. ರಾಜು ಅವರು ವಡಿಯಾಂಡಹಳ್ಳಿ ಬಳಿ ಎರಡೂವರೆ ಎಕರೆಯಲ್ಲಿ ಬೆಳೆದಿದ್ದ ಬಾಳೆ ಬೆಳೆ ಮಂಗಳವಾರ ಸಂಜೆ ಬೀಸಿದ ಭಾರಿ ಬಿರುಗಾಳಿಗೆ ನಾಶವಾಗಿದೆ.</p>.<p>ತೋಟದಲ್ಲಿ ಶೇ 90ರಷ್ಟು ಬಾಳೆ ಗಿಡಗಳು ಮುರಿದು ಬಿದ್ದಿವೆ. 20 ದಿನಗಳಲ್ಲಿ ಕಟಾವು ಮಾಡಬೇಕಿದ್ದ ಏಲಕ್ಕಿ ತಳಿಯ ಬಾಳೆ ಗೊನೆಗಳು ನೆಲ ಕಚ್ಚಿವೆ. ಅಂತರ ಬೆಳೆಯಾಗಿ ಬೆಳೆದಿದ್ದ ಪಪ್ಪಾಯ ಸಸಿಗಳು ಕೂಡ ಮುರಿದಿವೆ. ಅದರ ಕಾಯಿಗಳು ಜಮೀನಿನಲ್ಲಿ ಚೆಲ್ಲಾಡುತ್ತಿವೆ.</p>.<p>‘ಸುಮಾರು ₹2 ಲಕ್ಷ ಖರ್ಚು ಮಾಡಿ ಬಾಳೆ ಮತ್ತು ಪಪ್ಪಾಯ ಬೆಳೆದಿದ್ದೆ. ಬಿರುಗಾಳಿಯಿಂದ ಬೆಳೆ ಸಂಪೂರ್ಣ ನಾಶವಾಗಿದ್ದು, ಅಧಿಕಾರಿಗಳು ಸೂಕ್ತ ಪರಿಹಾರ ಕೊಡಿಸಬೇಕು’ ಎಂದು ಕೆ. ರಾಜು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>