<p><strong>ನಾಗಮಂಗಲ:</strong> ಮಂಡ್ಯ ಜಿಲ್ಲೆಯಲ್ಲಿ ಪೊಲೀಸ್ ಮತ್ತು ಸಾರ್ವಜನಿಕರ ನಡುವಿನ ಬೀದಿ ಜಗಳ ಮುಂದುವರಿದಿದೆ. </p><p>ಪಾಂಡವಪುರ ಠಾಣೆ ಬಳಿ ನಡೆದ ಜಟಾಪಟಿ ಮಾಸುವ ಮುನ್ನವೇ ನಾಗಮಂಗಲದಲ್ಲಿ ಪೊಲೀಸ್ ಮತ್ತು ಆರೋಪಿ ನಡುವೆ ಬೀದಿಜಗಳವಾಗಿ ನಡುಬೀದಿಯಲ್ಲಿ ಹೊರಳಾಡಿರುವ ಘಟನೆ ಶನಿವಾರ ನಡೆದಿದೆ.</p><p><strong>ಏನಿದು ಘಟನೆ?:</strong></p><p>ತಾಯಿಯೊಬ್ಬರು ಮಗನ ವಿರುದ್ಧ ಕಿರುಕುಳ ನೀಡುತ್ತಿರುವ ಕುರಿತು ದೂರು ನೀಡಿದ ಹಿನ್ನೆಲೆಯಲ್ಲಿ ಆತನನ್ನು ಠಾಣೆಗೆ ಕರೆದೊಯ್ಯಲು ಬಂದ ಎ.ಎಸ್.ಐ ಜೊತೆಗೆ ಆರೋಪಿಯು ಹೊಡೆದಾಡಿಕೊಂಡಿದ್ದು, ರಸ್ತೆಯಲ್ಲಿ ಬಿದ್ದು ಹೊರಳಾಡಿದ್ದಾರೆ.</p><p>ಪಟ್ಟಣದ ಟಿ.ಬಿ.ವೃತ್ತದ ಬಳಿಯ ನ್ಯಾಯಾಲಯದ ಮುಂಭಾಗದ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ಆರೋಪಿ ಮಜ್ಜನಕೊಪ್ಪಲು ಪೂಜಾರಿ ಕೃಷ್ಣನನ್ನು ಅವನ ತಾಯಿ ಮರಿಯಮ್ಮ ನೀಡಿರುವ ದೂರಿನ ಮೇರೆಗೆ ವಿಚಾರಣೆ ನಡೆಸಲು ಠಾಣೆಗೆ ಕರೆದೊಯ್ಯಲು ಗ್ರಾಮಾಂತರ ಠಾಣೆಯ ಎ.ಎಸ್.ಐ ರಾಜು ಬಂದಿದ್ದಾರೆ.</p><p> ಆರೋಪಿಯು ಬರಲು ಒಪ್ಪದಿದ್ದಾಗ ಬಲವಂತವಾಗಿ ಆಟೊ ಹತ್ತಿಸಲು ಎ.ಎಸ್.ಐ ಮುಂದಾದಾಗ ಇಬ್ಬರ ನಡುವೆ ವಾಗ್ವಾದ ನಡೆದಿದೆ.</p><p> ನಂತರ ಆರೋಪಿ ಮತ್ತು ಪೊಲೀಸ್ ಅಧಿಕಾರಿಯು ಪರಸ್ಪರ ಕೊರಳಪಟ್ಟಿ ಹಿಡಿದು ಎಳೆದಾಡಿದ್ದು, ಇಬ್ಬರ ನಡುವೆ ಮಾರಾಮಾರಿ ನಡೆದಿದೆ.</p><p>ಆರೋಪಿಯು "ದೂರು ಬಂದಿದ್ದರೆ ಎಫ್.ಐ.ಆರ್ ಹಾಕಿ ನಾನು ಠಾಣೆಗೆ ಬರುವುದಿಲ್ಲ" ಎಂದು ಎ.ಎಸ್.ಐ ಗೆ ಬೈದಿದ್ದಾನೆ ಎನ್ನಲಾಗಿದೆ.</p><p>ನಂತರ ಇಬ್ಬರು ಕೊರಳಪಟ್ಟಿ ಹಿಡಿದು ಹೊಡೆದಾಟ ನಡೆಯುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಕಾರ್ಯ ನಿರತ ಪೊಲೀಸ್ ಅಧಿಕಾರಿಯ ಮೇಲೆ ಕೈ ಮಾಡಿ ಎಳೆದಾಡಿದ ಪೂಜಾರಿ ಕೃಷ್ಣನಿಗೆ ತರಾಟೆ ತೆಗೆದುಕೊಂಡು ಜಗಳವನ್ನು ಬಿಡಿಸಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. </p><p>ಘಟನೆ ಬಳಿಕ ಪೂಜಾರಿ ಕೃಷ್ಣನ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗದ ವಶಕ್ಕೆ ನೀಡಲಾಗಿದೆ.</p><p>ಬೀದಿಜಗಳ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ:</strong> ಮಂಡ್ಯ ಜಿಲ್ಲೆಯಲ್ಲಿ ಪೊಲೀಸ್ ಮತ್ತು ಸಾರ್ವಜನಿಕರ ನಡುವಿನ ಬೀದಿ ಜಗಳ ಮುಂದುವರಿದಿದೆ. </p><p>ಪಾಂಡವಪುರ ಠಾಣೆ ಬಳಿ ನಡೆದ ಜಟಾಪಟಿ ಮಾಸುವ ಮುನ್ನವೇ ನಾಗಮಂಗಲದಲ್ಲಿ ಪೊಲೀಸ್ ಮತ್ತು ಆರೋಪಿ ನಡುವೆ ಬೀದಿಜಗಳವಾಗಿ ನಡುಬೀದಿಯಲ್ಲಿ ಹೊರಳಾಡಿರುವ ಘಟನೆ ಶನಿವಾರ ನಡೆದಿದೆ.</p><p><strong>ಏನಿದು ಘಟನೆ?:</strong></p><p>ತಾಯಿಯೊಬ್ಬರು ಮಗನ ವಿರುದ್ಧ ಕಿರುಕುಳ ನೀಡುತ್ತಿರುವ ಕುರಿತು ದೂರು ನೀಡಿದ ಹಿನ್ನೆಲೆಯಲ್ಲಿ ಆತನನ್ನು ಠಾಣೆಗೆ ಕರೆದೊಯ್ಯಲು ಬಂದ ಎ.ಎಸ್.ಐ ಜೊತೆಗೆ ಆರೋಪಿಯು ಹೊಡೆದಾಡಿಕೊಂಡಿದ್ದು, ರಸ್ತೆಯಲ್ಲಿ ಬಿದ್ದು ಹೊರಳಾಡಿದ್ದಾರೆ.</p><p>ಪಟ್ಟಣದ ಟಿ.ಬಿ.ವೃತ್ತದ ಬಳಿಯ ನ್ಯಾಯಾಲಯದ ಮುಂಭಾಗದ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ಆರೋಪಿ ಮಜ್ಜನಕೊಪ್ಪಲು ಪೂಜಾರಿ ಕೃಷ್ಣನನ್ನು ಅವನ ತಾಯಿ ಮರಿಯಮ್ಮ ನೀಡಿರುವ ದೂರಿನ ಮೇರೆಗೆ ವಿಚಾರಣೆ ನಡೆಸಲು ಠಾಣೆಗೆ ಕರೆದೊಯ್ಯಲು ಗ್ರಾಮಾಂತರ ಠಾಣೆಯ ಎ.ಎಸ್.ಐ ರಾಜು ಬಂದಿದ್ದಾರೆ.</p><p> ಆರೋಪಿಯು ಬರಲು ಒಪ್ಪದಿದ್ದಾಗ ಬಲವಂತವಾಗಿ ಆಟೊ ಹತ್ತಿಸಲು ಎ.ಎಸ್.ಐ ಮುಂದಾದಾಗ ಇಬ್ಬರ ನಡುವೆ ವಾಗ್ವಾದ ನಡೆದಿದೆ.</p><p> ನಂತರ ಆರೋಪಿ ಮತ್ತು ಪೊಲೀಸ್ ಅಧಿಕಾರಿಯು ಪರಸ್ಪರ ಕೊರಳಪಟ್ಟಿ ಹಿಡಿದು ಎಳೆದಾಡಿದ್ದು, ಇಬ್ಬರ ನಡುವೆ ಮಾರಾಮಾರಿ ನಡೆದಿದೆ.</p><p>ಆರೋಪಿಯು "ದೂರು ಬಂದಿದ್ದರೆ ಎಫ್.ಐ.ಆರ್ ಹಾಕಿ ನಾನು ಠಾಣೆಗೆ ಬರುವುದಿಲ್ಲ" ಎಂದು ಎ.ಎಸ್.ಐ ಗೆ ಬೈದಿದ್ದಾನೆ ಎನ್ನಲಾಗಿದೆ.</p><p>ನಂತರ ಇಬ್ಬರು ಕೊರಳಪಟ್ಟಿ ಹಿಡಿದು ಹೊಡೆದಾಟ ನಡೆಯುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಕಾರ್ಯ ನಿರತ ಪೊಲೀಸ್ ಅಧಿಕಾರಿಯ ಮೇಲೆ ಕೈ ಮಾಡಿ ಎಳೆದಾಡಿದ ಪೂಜಾರಿ ಕೃಷ್ಣನಿಗೆ ತರಾಟೆ ತೆಗೆದುಕೊಂಡು ಜಗಳವನ್ನು ಬಿಡಿಸಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. </p><p>ಘಟನೆ ಬಳಿಕ ಪೂಜಾರಿ ಕೃಷ್ಣನ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗದ ವಶಕ್ಕೆ ನೀಡಲಾಗಿದೆ.</p><p>ಬೀದಿಜಗಳ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>