<p><strong>ನಾಗಮಂಗಲ</strong>: ಸಂತೆ, ಜಾತ್ರೆಗಳಲ್ಲಿ ಮಕ್ಕಳ ಆಟದ ಸಾಮಗ್ರಿಗಳನ್ನು ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದ ಸಾಮಗ್ರಿ ತುಂಬಿದ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು ₹7 ಲಕ್ಷ ನಷ್ಟವಾಗಿದೆ.</p>.<p>ತಾಲ್ಲೂಕಿನ ಬೆಳ್ಳೂರ್ ಕ್ರಾಸ್ ಬಳಿಯ ಕೆಂಬಾರೆ ಗ್ರಾಮದ ನಿವಾಸಿ ಗೀತಾ ಮಹೇಶ್ ದಂಪತಿಗೆ ಸೇರಿದ್ದ ಅಶೋಕ್ ಲೈಲ್ಯಾಂಡ್ ವಾಹನ ಮತ್ತು ಅದರಲ್ಲಿದ್ದ ₹2 ಲಕ್ಷಕ್ಕೂ ಅಧಿಕ ಮೌಲ್ಯದ ಸಾಮಗ್ರಿಗಳಿಗೆ ಗುರುವಾರ ರಾತ್ರಿ 2.30ರ ಸುಮಾರಿನಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.</p>.<p>ದಂಪತಿ ವ್ಯಾಪಾರಕ್ಕಾಗಿ ಸಾಲ ಮಾಡಿ ಸಾಮಗ್ರಿಗಳನ್ನು ಖರೀದಿಸಿದ್ದರು. ಅನಾಹುತದಲ್ಲಿ ಜೀವನಾಧಾರವಾಗಿದ್ದ ಸಾಮಗ್ರಿಗಳು ನಾಶವಾಗಿದ್ದು, ಕುಟುಂಬವು ರೋದಿಸುತ್ತಿದೆ. 15 ದಿನಗಳ ಹಿಂದೆ ಇದೇ ಊರಿನಲ್ಲಿ ಕಿಡಿಗೇಡಿಗಳು ಪಲ್ಸರ್ ಬೈಕ್ಗೆ ಬೆಂಕಿ ಹಚ್ಚಿದ್ದರು ಎಂದು ಸ್ಥಳೀಯರು ಹೇಳಿದರು.</p>.<p>‘ಸಾಲ ಮಾಡಿ ಅಶೋಕ ಲೈಲ್ಯಾಂಡ್ ವಾಹನವನ್ನು ಖರೀದಿಸಿದ್ದೆ. ಹಬ್ಬದ ಪ್ರಯುಕ್ತ ಗುರುವಾರ ವ್ಯಾಪಾರ ಮುಗಿಸಿ ಮನೆ ಮುಂದೆ ವಾಹನ ನಿಲ್ಲಿಸಿದ್ದೆ. ಆದರೆ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ನಮ್ಮ ಕುಟುಂಬಕ್ಕೆ ನ್ಯಾಯ ಬೇಕು’ ವ್ಯಾಪಾರಿ ಮಹೇಶ್ ಮನವಿ ಮಾಡಿದರು.</p>.<p>ಬೆಳ್ಳೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ</strong>: ಸಂತೆ, ಜಾತ್ರೆಗಳಲ್ಲಿ ಮಕ್ಕಳ ಆಟದ ಸಾಮಗ್ರಿಗಳನ್ನು ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದ ಸಾಮಗ್ರಿ ತುಂಬಿದ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು ₹7 ಲಕ್ಷ ನಷ್ಟವಾಗಿದೆ.</p>.<p>ತಾಲ್ಲೂಕಿನ ಬೆಳ್ಳೂರ್ ಕ್ರಾಸ್ ಬಳಿಯ ಕೆಂಬಾರೆ ಗ್ರಾಮದ ನಿವಾಸಿ ಗೀತಾ ಮಹೇಶ್ ದಂಪತಿಗೆ ಸೇರಿದ್ದ ಅಶೋಕ್ ಲೈಲ್ಯಾಂಡ್ ವಾಹನ ಮತ್ತು ಅದರಲ್ಲಿದ್ದ ₹2 ಲಕ್ಷಕ್ಕೂ ಅಧಿಕ ಮೌಲ್ಯದ ಸಾಮಗ್ರಿಗಳಿಗೆ ಗುರುವಾರ ರಾತ್ರಿ 2.30ರ ಸುಮಾರಿನಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.</p>.<p>ದಂಪತಿ ವ್ಯಾಪಾರಕ್ಕಾಗಿ ಸಾಲ ಮಾಡಿ ಸಾಮಗ್ರಿಗಳನ್ನು ಖರೀದಿಸಿದ್ದರು. ಅನಾಹುತದಲ್ಲಿ ಜೀವನಾಧಾರವಾಗಿದ್ದ ಸಾಮಗ್ರಿಗಳು ನಾಶವಾಗಿದ್ದು, ಕುಟುಂಬವು ರೋದಿಸುತ್ತಿದೆ. 15 ದಿನಗಳ ಹಿಂದೆ ಇದೇ ಊರಿನಲ್ಲಿ ಕಿಡಿಗೇಡಿಗಳು ಪಲ್ಸರ್ ಬೈಕ್ಗೆ ಬೆಂಕಿ ಹಚ್ಚಿದ್ದರು ಎಂದು ಸ್ಥಳೀಯರು ಹೇಳಿದರು.</p>.<p>‘ಸಾಲ ಮಾಡಿ ಅಶೋಕ ಲೈಲ್ಯಾಂಡ್ ವಾಹನವನ್ನು ಖರೀದಿಸಿದ್ದೆ. ಹಬ್ಬದ ಪ್ರಯುಕ್ತ ಗುರುವಾರ ವ್ಯಾಪಾರ ಮುಗಿಸಿ ಮನೆ ಮುಂದೆ ವಾಹನ ನಿಲ್ಲಿಸಿದ್ದೆ. ಆದರೆ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ನಮ್ಮ ಕುಟುಂಬಕ್ಕೆ ನ್ಯಾಯ ಬೇಕು’ ವ್ಯಾಪಾರಿ ಮಹೇಶ್ ಮನವಿ ಮಾಡಿದರು.</p>.<p>ಬೆಳ್ಳೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>