<p><strong>ಮಂಡ್ಯ</strong>: ‘ಹದಿಹರೆಯದ ಮಕ್ಕಳು ಮಾನಸಿಕ ಸ್ಥಿರತೆ ಕಾಪಾಡಲು ಶೈಕ್ಷಣಿಕ ಸಂಸ್ಥೆಗಳಲ್ಲಿ ಆಪ್ತ ಸಮಾಲೋಚನಾ (ಕೌನ್ಸೆಲಿಂಗ್) ಕೊಠಡಿ ಆರಂಭಿಸಿ. ಪ್ರತಿ ಶಾಲೆಯಲ್ಲಿ ಶಿಕ್ಷಕರಿಗೆ ಮಾನಸಿಕ ಒತ್ತಡ ನಿವಾರಣೆ ಕುರಿತು ಮನೋವೈದ್ಯರಿಂದ ತರಬೇತಿ ಕೊಡಿಸಿ’ ಎಂದು ಜಿಲ್ಲಾಧಿಕಾರಿ ಕುಮಾರ ಸಲಹೆ ನೀಡಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಕ್ಕಳ ಮಾನಸಿಕ ಸ್ಥಿರತೆ ಮತ್ತು ದೈಹಿಕ ಯೋಗಕ್ಷೇಮ ಮೇಲ್ವಿಚಾರಣೆಯ ಸಂಬಂಧ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಹದಿಹರೆಯದ ಮಕ್ಕಳು ಮಾನಸಿಕ ಸ್ಥಿರತೆ ಕಳೆದುಕೊಂಡು ಸಣ್ಣ ಸಣ್ಣ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ದುರಂತವಾಗಿದೆ. ಇದನ್ನು ತಪ್ಪಿಸಲು ಒಬ್ಬರು ಶಿಕ್ಷಕರಿಗೆ ಮನೋವೈದ್ಯರಿಂದ ವಿಶೇಷ ತರಬೇತಿ ಕೊಡಿಸಿ, ಮಕ್ಕಳಿಗೆ ಮಾನಸಿಕ ಒತ್ತಡ ನಿವಾರಣೆ ಕುರಿತ ಸಲಹೆ ಸೂಚನೆಗಳನ್ನು ನೀಡುವಂತಾಗಬೇಕು’ ಎಂದು ತಿಳಿಸಿದರು.</p>.<p>ಶಾಲೆಯಲ್ಲಿ ದುರ್ಬಲ ಮನಸ್ಥಿತಿ ಹೊಂದಿರುವ ವಿದ್ಯಾರ್ಥಿಗಳನ್ನು ತರಬೇತಿ ಪಡೆದ ಶಿಕ್ಷಕರು ಗುರುತಿಸಿ ಅವರಿಗೆ ವಾರಕ್ಕೆ ಒಂದು ದಿನ ವಿಶೇಷ ಆಪ್ತ ಸಮಾಲೋಚನಾ ನಡೆಸಬೇಕು. ಶಾಲಾ ಕಾಲೇಜುಗಳು ಈ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಸೂಚಿಸಿದರು.</p>.<p>ತಾಲ್ಲೂಕು ಮಟ್ಟದಲ್ಲಿ ಮಕ್ಕಳ ಮೇಲ್ವಿಚಾರಣೆ ಸಮಿತಿ ರಚಿಸಿ. ಆತ್ಮಹತ್ಯೆಗೆ ಯತ್ನಿಸುವ ಮಕ್ಕಳ ಕುರಿತು ವಿಶೇಷ ಕಾಳಜಿ ವಹಿಸಿ, ಜೀವ ಉಳಿಸುವುದು. ಹದಿಹರೆಯದ ಮಕ್ಕಳಿಗೆ ಸೂಕ್ತ ತಿಳಿವಳಿಕೆ ಮತ್ತು ಅವರ ಮನಃಪರಿರ್ವತನೆ ಮಾಡಬೇಕು ಎಂದರು.</p>.<p> ಡಿಡಿಪಿಐ ಲೋಕೇಶ್, ಡಿಎಚ್ಒ ಡಾ.ಕೆ.ಮೋಹನ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಂಜುಳಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ಹದಿಹರೆಯದ ಮಕ್ಕಳು ಮಾನಸಿಕ ಸ್ಥಿರತೆ ಕಾಪಾಡಲು ಶೈಕ್ಷಣಿಕ ಸಂಸ್ಥೆಗಳಲ್ಲಿ ಆಪ್ತ ಸಮಾಲೋಚನಾ (ಕೌನ್ಸೆಲಿಂಗ್) ಕೊಠಡಿ ಆರಂಭಿಸಿ. ಪ್ರತಿ ಶಾಲೆಯಲ್ಲಿ ಶಿಕ್ಷಕರಿಗೆ ಮಾನಸಿಕ ಒತ್ತಡ ನಿವಾರಣೆ ಕುರಿತು ಮನೋವೈದ್ಯರಿಂದ ತರಬೇತಿ ಕೊಡಿಸಿ’ ಎಂದು ಜಿಲ್ಲಾಧಿಕಾರಿ ಕುಮಾರ ಸಲಹೆ ನೀಡಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಕ್ಕಳ ಮಾನಸಿಕ ಸ್ಥಿರತೆ ಮತ್ತು ದೈಹಿಕ ಯೋಗಕ್ಷೇಮ ಮೇಲ್ವಿಚಾರಣೆಯ ಸಂಬಂಧ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಹದಿಹರೆಯದ ಮಕ್ಕಳು ಮಾನಸಿಕ ಸ್ಥಿರತೆ ಕಳೆದುಕೊಂಡು ಸಣ್ಣ ಸಣ್ಣ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ದುರಂತವಾಗಿದೆ. ಇದನ್ನು ತಪ್ಪಿಸಲು ಒಬ್ಬರು ಶಿಕ್ಷಕರಿಗೆ ಮನೋವೈದ್ಯರಿಂದ ವಿಶೇಷ ತರಬೇತಿ ಕೊಡಿಸಿ, ಮಕ್ಕಳಿಗೆ ಮಾನಸಿಕ ಒತ್ತಡ ನಿವಾರಣೆ ಕುರಿತ ಸಲಹೆ ಸೂಚನೆಗಳನ್ನು ನೀಡುವಂತಾಗಬೇಕು’ ಎಂದು ತಿಳಿಸಿದರು.</p>.<p>ಶಾಲೆಯಲ್ಲಿ ದುರ್ಬಲ ಮನಸ್ಥಿತಿ ಹೊಂದಿರುವ ವಿದ್ಯಾರ್ಥಿಗಳನ್ನು ತರಬೇತಿ ಪಡೆದ ಶಿಕ್ಷಕರು ಗುರುತಿಸಿ ಅವರಿಗೆ ವಾರಕ್ಕೆ ಒಂದು ದಿನ ವಿಶೇಷ ಆಪ್ತ ಸಮಾಲೋಚನಾ ನಡೆಸಬೇಕು. ಶಾಲಾ ಕಾಲೇಜುಗಳು ಈ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಸೂಚಿಸಿದರು.</p>.<p>ತಾಲ್ಲೂಕು ಮಟ್ಟದಲ್ಲಿ ಮಕ್ಕಳ ಮೇಲ್ವಿಚಾರಣೆ ಸಮಿತಿ ರಚಿಸಿ. ಆತ್ಮಹತ್ಯೆಗೆ ಯತ್ನಿಸುವ ಮಕ್ಕಳ ಕುರಿತು ವಿಶೇಷ ಕಾಳಜಿ ವಹಿಸಿ, ಜೀವ ಉಳಿಸುವುದು. ಹದಿಹರೆಯದ ಮಕ್ಕಳಿಗೆ ಸೂಕ್ತ ತಿಳಿವಳಿಕೆ ಮತ್ತು ಅವರ ಮನಃಪರಿರ್ವತನೆ ಮಾಡಬೇಕು ಎಂದರು.</p>.<p> ಡಿಡಿಪಿಐ ಲೋಕೇಶ್, ಡಿಎಚ್ಒ ಡಾ.ಕೆ.ಮೋಹನ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಂಜುಳಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>