<p>ಪ್ರಜಾವಾಣಿ ವಾರ್ತೆ</p>.<p>ನಾಗಮಂಗಲ: ‘ವಿದ್ಯಾರ್ಥಿಗಳು ಓದುವ ಮತ್ತು ಬರೆಯುವ ಜ್ಞಾನ ಬೆಳೆಸಿಕೊಳ್ಳುವ ಜೊತೆಗೆ ಬದುಕಿಗೆ ಅಗತ್ಯವಾದ ಮಾನವೀಯ ಮೌಲ್ಯ ಮತ್ತು ಗುಣಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು’ ಎಂದು ನಲ್ಕುಂದಿ ಶಾಲೆಯ ಮುಖ್ಯಶಿಕ್ಷಕ ಜೈಸ್ವಾಮಿ ಹೇಳಿದರು.</p>.<p>ತಾಲ್ಲೂಕಿನ ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ‘ನಮ್ಮ ವಿದ್ಯಾರ್ಥಿ ನಮ್ಮ ಮಾತು’ ಎಂಬ ವಿಶೇಷ ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಶಿಕ್ಷಣಕ್ಕೆ ಅಗತ್ಯವಾದಷ್ಟು ಮಾತ್ರವೇ ಸಮೂಹ ಮಾಧ್ಯಮಗಳನ್ನು ಬಳಕೆ ಮಾಡಿಕೊಂಡರೆ ಉತ್ತಮ. ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದುವ ಜೊತೆಗೆ ಗುರುಭಕ್ತಿ, ಶ್ರದ್ಧೆ, ಆಸಕ್ತಿ, ಸ್ವಯಂ ಶಿಸ್ತಿನ ಗುಣಗಳನ್ನು ಮೈಗೂಡಿಸಿಕೊಂಡು ಸಾಧನೆಯ ಮಾರ್ಗದಲ್ಲಿ ಸಾಗಬೇಕು’ ಎಂದು ಹೇಳಿದರು.</p>.<p>ದೊಂದೇಮಾದಹಳ್ಳಿ ಶಾಲೆ ಮುಖ್ಯಶಿಕ್ಷಕ ಸುನೀಲ್ ಮಾತನಾಡಿದರು.</p>.<p>ನಂತರ ನಲ್ಕುಂದಿ, ತೊರೆಮಲ್ಲನಾಯಕನಹಳ್ಳಿ, ದೊಡ್ಡಚಿಕ್ಕನಹಳ್ಳಿ, ದೊಡ್ಡಜಕ್ಕನಹಳ್ಳಿ, ದೊಂದೇಮಾದಹಳ್ಳಿ ಶಾಲೆ ಮುಖ್ಯಶಿಕ್ಷಕರನ್ನು ಸನ್ಮಾನಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಸಿಆರ್ಪಿಗಳಾದ ಕೆಂಪೇಗೌಡ, ವೆಂಕಟೇಶ್, ಮುಖ್ಯಶಿಕ್ಷಕರಾದ ಸುನೀಲ್, ಗುರುರಾಜ್, ಸನೀತಾ, ವರಾದೇವಿ, ಹರದನಹಳ್ಳಿಯ ಮುಖ್ಯ ಶಿಕ್ಷಕ ಚಿಕ್ಕಬೋರಯ್ಯ, ಸಾದಿಕ್ ಅಹಮ್ಮದ್, ಪರಶಿವಮೂರ್ತಿ, ರಾಜ್ ಕುಮಾರ್, ಟಿ.ಎಂ.ಶ್ರುತಿ, ಸಚಿನ್, ಎಸ್ಡಿಎಂಸಿ ಅಧ್ಯಕ್ಷ ಡಿ.ಕೆ.ನರಸಿಂಹಮೂರ್ತಿ ಮತ್ತು ಸದಸ್ಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ನಾಗಮಂಗಲ: ‘ವಿದ್ಯಾರ್ಥಿಗಳು ಓದುವ ಮತ್ತು ಬರೆಯುವ ಜ್ಞಾನ ಬೆಳೆಸಿಕೊಳ್ಳುವ ಜೊತೆಗೆ ಬದುಕಿಗೆ ಅಗತ್ಯವಾದ ಮಾನವೀಯ ಮೌಲ್ಯ ಮತ್ತು ಗುಣಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು’ ಎಂದು ನಲ್ಕುಂದಿ ಶಾಲೆಯ ಮುಖ್ಯಶಿಕ್ಷಕ ಜೈಸ್ವಾಮಿ ಹೇಳಿದರು.</p>.<p>ತಾಲ್ಲೂಕಿನ ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ‘ನಮ್ಮ ವಿದ್ಯಾರ್ಥಿ ನಮ್ಮ ಮಾತು’ ಎಂಬ ವಿಶೇಷ ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಶಿಕ್ಷಣಕ್ಕೆ ಅಗತ್ಯವಾದಷ್ಟು ಮಾತ್ರವೇ ಸಮೂಹ ಮಾಧ್ಯಮಗಳನ್ನು ಬಳಕೆ ಮಾಡಿಕೊಂಡರೆ ಉತ್ತಮ. ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದುವ ಜೊತೆಗೆ ಗುರುಭಕ್ತಿ, ಶ್ರದ್ಧೆ, ಆಸಕ್ತಿ, ಸ್ವಯಂ ಶಿಸ್ತಿನ ಗುಣಗಳನ್ನು ಮೈಗೂಡಿಸಿಕೊಂಡು ಸಾಧನೆಯ ಮಾರ್ಗದಲ್ಲಿ ಸಾಗಬೇಕು’ ಎಂದು ಹೇಳಿದರು.</p>.<p>ದೊಂದೇಮಾದಹಳ್ಳಿ ಶಾಲೆ ಮುಖ್ಯಶಿಕ್ಷಕ ಸುನೀಲ್ ಮಾತನಾಡಿದರು.</p>.<p>ನಂತರ ನಲ್ಕುಂದಿ, ತೊರೆಮಲ್ಲನಾಯಕನಹಳ್ಳಿ, ದೊಡ್ಡಚಿಕ್ಕನಹಳ್ಳಿ, ದೊಡ್ಡಜಕ್ಕನಹಳ್ಳಿ, ದೊಂದೇಮಾದಹಳ್ಳಿ ಶಾಲೆ ಮುಖ್ಯಶಿಕ್ಷಕರನ್ನು ಸನ್ಮಾನಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಸಿಆರ್ಪಿಗಳಾದ ಕೆಂಪೇಗೌಡ, ವೆಂಕಟೇಶ್, ಮುಖ್ಯಶಿಕ್ಷಕರಾದ ಸುನೀಲ್, ಗುರುರಾಜ್, ಸನೀತಾ, ವರಾದೇವಿ, ಹರದನಹಳ್ಳಿಯ ಮುಖ್ಯ ಶಿಕ್ಷಕ ಚಿಕ್ಕಬೋರಯ್ಯ, ಸಾದಿಕ್ ಅಹಮ್ಮದ್, ಪರಶಿವಮೂರ್ತಿ, ರಾಜ್ ಕುಮಾರ್, ಟಿ.ಎಂ.ಶ್ರುತಿ, ಸಚಿನ್, ಎಸ್ಡಿಎಂಸಿ ಅಧ್ಯಕ್ಷ ಡಿ.ಕೆ.ನರಸಿಂಹಮೂರ್ತಿ ಮತ್ತು ಸದಸ್ಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>