<p><strong>ಮಂಡ್ಯ:</strong> 2025-26ರ ಹಂಗಾಮಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರೈತರಿಗೆ ಕಾರ್ಖಾನೆಗಳು ಪಾವತಿಸಬೇಕಾದ ಎಫ್.ಆರ್.ಪಿ ದರ ಹೊರತುಪಡಿಸಿ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದಿಂದ ಪ್ರತಿ ಟನ್ಗೆ ₹50 ಹಾಗೂ ಸಕ್ಕರೆ ಕಾರ್ಖಾನೆ ವತಿಯಿಂದಲೂ ಸಹ ಪ್ರತಿ ಟನ್ಗೆ ₹50 ಹಣವನ್ನು ಹೆಚ್ಚುವರಿಯಾಗಿ ಪಾವತಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಂಗಾಮಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ನಿಗದಿಪಡಿಸಿರುವ ಹೆಚ್ಚುವರಿ ಕಬ್ಬಿನ ಬೆಲೆಯನ್ನು ಬಿಡುಗಡೆ ಮಾಡುವ ಕುರಿತು ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ರೈತರಿಗೆ ಒಟ್ಟಾಗಿ ಪ್ರತಿ ಟನ್ಗೆ ಹೆಚ್ಚುವರಿಯಾಗಿ ₹100 ಹಣ ಪಾವತಿ ಮಾಡಲು ಕ್ರಮ ವಹಿಸಲಾಗಿದೆ. 2025-26ನೇ ಸಾಲಿನ ಹಂಗಾಮಿ ಕಬ್ಬು ಸರಬರಾಜು ಮಾಡಿದ ರೈತರಿಗೆ ಒಟ್ಟು ₹10 ಕೋಟಿ ಆರ್ಥಿಕ ನೆರವನ್ನು ಮಂಡ್ಯ ಜಿಲ್ಲೆಯಲ್ಲಿ ಸರ್ಕಾರದ ಕಡೆಯಿಂದ ನೀಡಲಾಗುತ್ತಿದೆ ಎಂದು ಹೇಳಿದರು.</p>.<p>ಸದರಿ ಆದೇಶದಂತೆ ಅನುದಾನ ಬಿಡುಗಡೆ ಮಾಡಲು ಅಗತ್ಯ ಕ್ರಮವಹಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.</p>.<p>ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರತೀಕ್ ಹೆಗ್ಡೆ ಹಾಗೂ ಸಕ್ಕರೆ ಕಾರ್ಖಾನೆಯ ಅಧಿಕಾರಿಗಳು, ಜಿಲ್ಲಾ ಖಜಾನೆ ಅಧಿಕಾರಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> 2025-26ರ ಹಂಗಾಮಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರೈತರಿಗೆ ಕಾರ್ಖಾನೆಗಳು ಪಾವತಿಸಬೇಕಾದ ಎಫ್.ಆರ್.ಪಿ ದರ ಹೊರತುಪಡಿಸಿ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದಿಂದ ಪ್ರತಿ ಟನ್ಗೆ ₹50 ಹಾಗೂ ಸಕ್ಕರೆ ಕಾರ್ಖಾನೆ ವತಿಯಿಂದಲೂ ಸಹ ಪ್ರತಿ ಟನ್ಗೆ ₹50 ಹಣವನ್ನು ಹೆಚ್ಚುವರಿಯಾಗಿ ಪಾವತಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಂಗಾಮಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ನಿಗದಿಪಡಿಸಿರುವ ಹೆಚ್ಚುವರಿ ಕಬ್ಬಿನ ಬೆಲೆಯನ್ನು ಬಿಡುಗಡೆ ಮಾಡುವ ಕುರಿತು ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ರೈತರಿಗೆ ಒಟ್ಟಾಗಿ ಪ್ರತಿ ಟನ್ಗೆ ಹೆಚ್ಚುವರಿಯಾಗಿ ₹100 ಹಣ ಪಾವತಿ ಮಾಡಲು ಕ್ರಮ ವಹಿಸಲಾಗಿದೆ. 2025-26ನೇ ಸಾಲಿನ ಹಂಗಾಮಿ ಕಬ್ಬು ಸರಬರಾಜು ಮಾಡಿದ ರೈತರಿಗೆ ಒಟ್ಟು ₹10 ಕೋಟಿ ಆರ್ಥಿಕ ನೆರವನ್ನು ಮಂಡ್ಯ ಜಿಲ್ಲೆಯಲ್ಲಿ ಸರ್ಕಾರದ ಕಡೆಯಿಂದ ನೀಡಲಾಗುತ್ತಿದೆ ಎಂದು ಹೇಳಿದರು.</p>.<p>ಸದರಿ ಆದೇಶದಂತೆ ಅನುದಾನ ಬಿಡುಗಡೆ ಮಾಡಲು ಅಗತ್ಯ ಕ್ರಮವಹಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.</p>.<p>ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರತೀಕ್ ಹೆಗ್ಡೆ ಹಾಗೂ ಸಕ್ಕರೆ ಕಾರ್ಖಾನೆಯ ಅಧಿಕಾರಿಗಳು, ಜಿಲ್ಲಾ ಖಜಾನೆ ಅಧಿಕಾರಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>