<p><strong>ಭಾರತೀನಗರ:</strong> ಸೂಳೆಕೆರೆಯ ನೂರಾರು ಎಕರೆಯಷ್ಟು ಜಾಗವನ್ನು ಅಕ್ಕಪಕ್ಕದ ರೈತರು ಒತ್ತುವರಿ ಮಾಡಿಕೊಂಡಿದ್ದು, ಮೊದಲು ಒತ್ತುವರಿಯನ್ನು ತೆರವುಗೊಳಿಸಿ ಆನಂತರ ಜೀರ್ಣೋದ್ಧಾರ ಕೈಗೊಳ್ಳುವಂತೆ ರೈತರು ಆಗ್ರಹಿಸಿದರು.</p>.<p>ಸಮೀಪದ ಚಿಕ್ಕಅರಸಿನಕೆರೆ ಕಾಲಭೈರವೇಶ್ವರ ದೇವಾಲಯದ ಆವರಣದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಮಂಗಳವಾರ ನಡೆದ ಸೂಳೆಕೆರೆ ಜೀರ್ಣೋದ್ಧಾರ ಹಾಗೂ ನಾಲೆಗಳ ಅಭಿವೃದ್ಧಿ ಕಾಮಗಾರಿ ಕುರಿತು ರೈತ ಮುಖಂಡರ ಜೊತೆ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಶಾಸಕ ಉದಯ್ ಸಮ್ಮುಖದಲ್ಲಿ ರೈತರು ಈ ಒತ್ತಾಯ ಮಾಡಿದರು.</p>.<p>ಕಳೆದ ಹತ್ತಾರು ವರ್ಷಗಳ ಹಿಂದೆಯೇ ಕೆರೆ ಒತ್ತುವರಿ ಮಾಡಿಕೊಂಡಿದ್ದು, ಈ ಹಿಂದಿನ ಯಾವ ಸರ್ಕಾರಗಳೂ ಕೆರೆ ಉಳಿವಿಗೆ ಕ್ರಮಕೈಗೊಂಡಿಲ್ಲ. ಈಗಲಾದರೂ 400 ಎಕರೆಗೂ ಹೆಚ್ಚು ಒತ್ತುವರಿಯಾಗಿರುವ ಕೆರೆಗೆ ಸೇರಿ ಜಾಗವನ್ನು ತೆರವುಗೊಳಿಸಿ, ಆನಂತರ ಅಭಿವೃದ್ಧಿಪಡಿಸಿ ಎಂದು ಸಲಹೆ ನೀಡಿದರು.</p>.<p>ಸಭೆ ಉದ್ಘಾಟಿಸಿದ ಶಾಸಕ ಕೆ.ಎಂ.ಉದಯ್ ಮಾತನಾಡಿ, ಸೂಳೆಕೆರೆ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಮೊದಲು ಒತ್ತುವರಿಯಾಗಿರುವ ಕೆರೆ ಜಾಗ ಬಿಡಿಸಿ ನಂತರ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.</p>.<p>ಸೂಳೆಕೆರೆ ಅಚ್ಚುಕಟ್ಟು ವ್ಯಾಪ್ತಿಯ ರೈತರು ಹಲವು ವರ್ಷಗಳಿಂದ ಶಿಥಿಲ ನಾಲೆಗಳಿಂದಾಗಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರೈತರ ಸಲಹೆ ಅಗತ್ಯ. ರೈತರ ಸಲಹೆಗಳಿಗೆ ಅನುಗುಣವಾಗಿ ಕೆಲಸ ಮಾಡಲು ಬದ್ಧ ಎಂದು ಹೇಳಿದರು.</p>.<p>ಸೂಳೆಕೆರೆಯ ವಿಸ್ತೀರ್ಣ 845 ಎಕೆರೆ ಇದ್ದು, ಕೆಲವರು ಇದನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ತೆರವಿಗೆ ಕ್ರಮವಹಿಸುತ್ತೇನೆ. ಸೂಳೆಕೆರೆ ಅಭಿವೃದ್ಧಿ ಕಾಮಗಾರಿಗೆ ಅಂದಾಜು ಮೊತ್ತ ಸುಮಾರು ₹34 ಕೋಟಿ ಮತ್ತು ಸೂಳೆಕೆರೆ ನಾಲೆಗಳ ಅಭಿವೃದ್ಧಿಗೆ ಅಂದಾಜು ಮೊತ್ತ ₹47.75 ಕೋಟಿ ಬಿಡುಗಡೆಯಾಗಿದೆ. ಈ ಹಣದಲ್ಲಿ ಉತ್ತರ ಮತ್ತು ದಕ್ಷಿಣ ಎರಡು ಭಾಗದ ನಾಲೆಗಳ ಅಭಿವೃದ್ಧಿ ಕಾಮಗಾರಿಯೂ ನಡೆಯಲಿದೆ ಎಂದು ತಿಳಿಸಿದರು.</p>.<p>ಜಿ.ಪಂ. ಮಾಜಿ ಅಧ್ಯಕ್ಷ ಬಿ.ಬಸವರಾಜು ಮಾತನಾಡಿದರು. ನೀರಾವರಿ ಇಲಾಖೆಯ ಅಧಿಕಾರಿಗಳು ಶಾಸಕ ಕೆ.ಎಂ. ಉದಯ್ ಅವರನ್ನು ಅಭಿನಂದಿಸಿ, ಗೌರವಿಸಿದರು.</p>.<p>ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ನಂಜುಂಡೇಗೌಡ, ಎಇಇ ಪ್ರಶಾಂತ್, ಎಇ ಅವಿನಾಶ್, ಮನ್ಮುಲ್ ನಿರ್ದೇಶಕ ಹರೀಶ್ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮಮ್ಮ, ಮುಖಂಡರಾದ ಅಜ್ಜಹಳ್ಳಿ ರಾಮಕೃಷ್ಣ, ಚಂದ್ರಶೇಖರ್, ರಘು, ಶಿವಲಿಂಗಯ್ಯ, ದೇವರಹಳ್ಳಿ ದೊಡ್ಡೇಗೌಡ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾರತೀನಗರ:</strong> ಸೂಳೆಕೆರೆಯ ನೂರಾರು ಎಕರೆಯಷ್ಟು ಜಾಗವನ್ನು ಅಕ್ಕಪಕ್ಕದ ರೈತರು ಒತ್ತುವರಿ ಮಾಡಿಕೊಂಡಿದ್ದು, ಮೊದಲು ಒತ್ತುವರಿಯನ್ನು ತೆರವುಗೊಳಿಸಿ ಆನಂತರ ಜೀರ್ಣೋದ್ಧಾರ ಕೈಗೊಳ್ಳುವಂತೆ ರೈತರು ಆಗ್ರಹಿಸಿದರು.</p>.<p>ಸಮೀಪದ ಚಿಕ್ಕಅರಸಿನಕೆರೆ ಕಾಲಭೈರವೇಶ್ವರ ದೇವಾಲಯದ ಆವರಣದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಮಂಗಳವಾರ ನಡೆದ ಸೂಳೆಕೆರೆ ಜೀರ್ಣೋದ್ಧಾರ ಹಾಗೂ ನಾಲೆಗಳ ಅಭಿವೃದ್ಧಿ ಕಾಮಗಾರಿ ಕುರಿತು ರೈತ ಮುಖಂಡರ ಜೊತೆ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಶಾಸಕ ಉದಯ್ ಸಮ್ಮುಖದಲ್ಲಿ ರೈತರು ಈ ಒತ್ತಾಯ ಮಾಡಿದರು.</p>.<p>ಕಳೆದ ಹತ್ತಾರು ವರ್ಷಗಳ ಹಿಂದೆಯೇ ಕೆರೆ ಒತ್ತುವರಿ ಮಾಡಿಕೊಂಡಿದ್ದು, ಈ ಹಿಂದಿನ ಯಾವ ಸರ್ಕಾರಗಳೂ ಕೆರೆ ಉಳಿವಿಗೆ ಕ್ರಮಕೈಗೊಂಡಿಲ್ಲ. ಈಗಲಾದರೂ 400 ಎಕರೆಗೂ ಹೆಚ್ಚು ಒತ್ತುವರಿಯಾಗಿರುವ ಕೆರೆಗೆ ಸೇರಿ ಜಾಗವನ್ನು ತೆರವುಗೊಳಿಸಿ, ಆನಂತರ ಅಭಿವೃದ್ಧಿಪಡಿಸಿ ಎಂದು ಸಲಹೆ ನೀಡಿದರು.</p>.<p>ಸಭೆ ಉದ್ಘಾಟಿಸಿದ ಶಾಸಕ ಕೆ.ಎಂ.ಉದಯ್ ಮಾತನಾಡಿ, ಸೂಳೆಕೆರೆ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಮೊದಲು ಒತ್ತುವರಿಯಾಗಿರುವ ಕೆರೆ ಜಾಗ ಬಿಡಿಸಿ ನಂತರ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.</p>.<p>ಸೂಳೆಕೆರೆ ಅಚ್ಚುಕಟ್ಟು ವ್ಯಾಪ್ತಿಯ ರೈತರು ಹಲವು ವರ್ಷಗಳಿಂದ ಶಿಥಿಲ ನಾಲೆಗಳಿಂದಾಗಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರೈತರ ಸಲಹೆ ಅಗತ್ಯ. ರೈತರ ಸಲಹೆಗಳಿಗೆ ಅನುಗುಣವಾಗಿ ಕೆಲಸ ಮಾಡಲು ಬದ್ಧ ಎಂದು ಹೇಳಿದರು.</p>.<p>ಸೂಳೆಕೆರೆಯ ವಿಸ್ತೀರ್ಣ 845 ಎಕೆರೆ ಇದ್ದು, ಕೆಲವರು ಇದನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ತೆರವಿಗೆ ಕ್ರಮವಹಿಸುತ್ತೇನೆ. ಸೂಳೆಕೆರೆ ಅಭಿವೃದ್ಧಿ ಕಾಮಗಾರಿಗೆ ಅಂದಾಜು ಮೊತ್ತ ಸುಮಾರು ₹34 ಕೋಟಿ ಮತ್ತು ಸೂಳೆಕೆರೆ ನಾಲೆಗಳ ಅಭಿವೃದ್ಧಿಗೆ ಅಂದಾಜು ಮೊತ್ತ ₹47.75 ಕೋಟಿ ಬಿಡುಗಡೆಯಾಗಿದೆ. ಈ ಹಣದಲ್ಲಿ ಉತ್ತರ ಮತ್ತು ದಕ್ಷಿಣ ಎರಡು ಭಾಗದ ನಾಲೆಗಳ ಅಭಿವೃದ್ಧಿ ಕಾಮಗಾರಿಯೂ ನಡೆಯಲಿದೆ ಎಂದು ತಿಳಿಸಿದರು.</p>.<p>ಜಿ.ಪಂ. ಮಾಜಿ ಅಧ್ಯಕ್ಷ ಬಿ.ಬಸವರಾಜು ಮಾತನಾಡಿದರು. ನೀರಾವರಿ ಇಲಾಖೆಯ ಅಧಿಕಾರಿಗಳು ಶಾಸಕ ಕೆ.ಎಂ. ಉದಯ್ ಅವರನ್ನು ಅಭಿನಂದಿಸಿ, ಗೌರವಿಸಿದರು.</p>.<p>ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ನಂಜುಂಡೇಗೌಡ, ಎಇಇ ಪ್ರಶಾಂತ್, ಎಇ ಅವಿನಾಶ್, ಮನ್ಮುಲ್ ನಿರ್ದೇಶಕ ಹರೀಶ್ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮಮ್ಮ, ಮುಖಂಡರಾದ ಅಜ್ಜಹಳ್ಳಿ ರಾಮಕೃಷ್ಣ, ಚಂದ್ರಶೇಖರ್, ರಘು, ಶಿವಲಿಂಗಯ್ಯ, ದೇವರಹಳ್ಳಿ ದೊಡ್ಡೇಗೌಡ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>