ಕೆ.ಆರ್.ಪೇಟೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಹಾಲಿ ಸಂಸದರಾಗಿದ್ದ ಎಲ್.ಆರ್.ಶಿವರಾಮೇಗೌಡರಿಗೆ ಟಿಕೆಟ್ ನೀಡುವಂತೆ ಕಾಂಗ್ರೆಸ್ ಮುಖಂಡರು ಕೇಳಿಕೊಂಡೆವು. ಆದರೆ ಜೆಡಿಎಸ್ನವರು ಒಪ್ಪಲಿಲ್ಲ. ದೇವೇಗೌಡರೇ ಸ್ಪರ್ಧಿಸಲಿ, ಅತ್ಯಧಿಕ ಬಹುಮತದಿಂದ ಗೆಲ್ಲಿಸಿಕೊಡುತ್ತೇವೆ ಎಂದು ಕೇಳಿಕೊಂಡರೂ ಅವರು ಒಪ್ಪಲಿಲ್ಲ. ನಮ್ಮ ಮಾತು ಕೇಳದೆ ನಿಖಿಲ್ ಅವರನ್ನು ಅಭ್ಯರ್ಥಿ ಮಾಡಿದರು’ ಎಂದರು.