<p><strong>ಶ್ರೀರಂಗಪಟ್ಟಣ:</strong> ತಾಲ್ಲೂಕಿನ ಮಹದೇವಪುರ ಬೋರೆಯಲ್ಲಿರುವ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಬೆಳಗಿನೊಳಗು ಬಳಗ ಮತ್ತು ಮೈಸೂರಿನ ಸಂಚಲನ ಸಂಸ್ಥೆ ಆಯೋಜಿಸಿರುವ ‘ಕುಣಿಯೋಣು ಬಾರಾ’ ಮಕ್ಕಳ ಬೇಸಿಗೆ ಶಿಬಿರದ ನಿಮಿತ್ತ ಶಿಬಿರಾರ್ಥಿಗಳು ಶನಿವಾರ 50ಕ್ಕೂ ಹೆಚ್ಚು ಗಿಡಗಳನ್ನು ನೆಟ್ಟರು.</p>.<p>ಶಾಲೆಯ ಆವರಣದಲ್ಲಿ ಹಲಸು, ಹೊಂಗೆ, ಬೇವು, ಸಂಪಿಗೆ, ಅರಳಿ, ರಕ್ತ ಚಂದನ, ಮಹಾಗನಿ ಇತರ ಗಿಡಗಳನ್ನು ನೆಟ್ಟು ನೀರೆರೆದರು. ತಾ.ಪಂ. ಮಾಜಿ ಸದಸ್ಯ ಎಸ್.ಕಾಳೇಗೌಡ, ಎಂಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಬಸವರಾಜು ಕೂಡ ಗಿಡ ನೆಡುವ ಕಾರ್ಯಕ್ಕೆ ಕೈ ಜೋಡಿಸಿದರು.</p>.<p>‘ಗಿಡಗಳನ್ನು ನೆಟ್ಟು ಬೆಳೆಸಿದರೆ ನೆರಳು, ಹೂ, ಹಣ್ಣು, ರಾಸುಗಳಿಗೆ ಮೇವು, ಕಟ್ಟಿಗೆ ಮತ್ತು ಆಮ್ಲಜನಕ ಸಿಗುತ್ತದೆ. ಹಾಗಾಗಿ ಸ್ಥಳಾವಕಾಶ ಇರುವ ಕಡೆ ಗಿಡಗಳನ್ನು ನೆಟ್ಟು ಬೆಳೆಸಬೇಕು’ ಎಂದು ಎಸ್. ಕಾಳೇಗೌಡ ಸಲಹೆ ನೀಡಿದರು.</p>.<p>ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಸುಪ್ತವಾಗಿರುವ ಸೃಜನಶೀಲ ಕಲೆಗಳನ್ನು ಬೆಳಕಿಗೆ ತರಲು ಸಹಕಾರಿಯಾಗಿವೆ ಎಂದು ಅವರು ಹೇಳಿದರು.</p>.<p>ಗ್ರಾ.ಪಂ. ಉಪಾಧ್ಯಕ್ಷೆ ನಿಂಗಮ್ಮ ಮಹದೇವು, ಸದಸ್ಯ ಎಂ.ಈ. ಜಗದೀಶ್, ಶಿಬಿರದ ನಿರ್ದೇಶಕ ದೀಪಕ್ ಮೈಸೂರು, ಸಂಚಾಲಕ ವಿ. ಅನಿಲ್ಕುಮಾರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ತಾಲ್ಲೂಕಿನ ಮಹದೇವಪುರ ಬೋರೆಯಲ್ಲಿರುವ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಬೆಳಗಿನೊಳಗು ಬಳಗ ಮತ್ತು ಮೈಸೂರಿನ ಸಂಚಲನ ಸಂಸ್ಥೆ ಆಯೋಜಿಸಿರುವ ‘ಕುಣಿಯೋಣು ಬಾರಾ’ ಮಕ್ಕಳ ಬೇಸಿಗೆ ಶಿಬಿರದ ನಿಮಿತ್ತ ಶಿಬಿರಾರ್ಥಿಗಳು ಶನಿವಾರ 50ಕ್ಕೂ ಹೆಚ್ಚು ಗಿಡಗಳನ್ನು ನೆಟ್ಟರು.</p>.<p>ಶಾಲೆಯ ಆವರಣದಲ್ಲಿ ಹಲಸು, ಹೊಂಗೆ, ಬೇವು, ಸಂಪಿಗೆ, ಅರಳಿ, ರಕ್ತ ಚಂದನ, ಮಹಾಗನಿ ಇತರ ಗಿಡಗಳನ್ನು ನೆಟ್ಟು ನೀರೆರೆದರು. ತಾ.ಪಂ. ಮಾಜಿ ಸದಸ್ಯ ಎಸ್.ಕಾಳೇಗೌಡ, ಎಂಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಬಸವರಾಜು ಕೂಡ ಗಿಡ ನೆಡುವ ಕಾರ್ಯಕ್ಕೆ ಕೈ ಜೋಡಿಸಿದರು.</p>.<p>‘ಗಿಡಗಳನ್ನು ನೆಟ್ಟು ಬೆಳೆಸಿದರೆ ನೆರಳು, ಹೂ, ಹಣ್ಣು, ರಾಸುಗಳಿಗೆ ಮೇವು, ಕಟ್ಟಿಗೆ ಮತ್ತು ಆಮ್ಲಜನಕ ಸಿಗುತ್ತದೆ. ಹಾಗಾಗಿ ಸ್ಥಳಾವಕಾಶ ಇರುವ ಕಡೆ ಗಿಡಗಳನ್ನು ನೆಟ್ಟು ಬೆಳೆಸಬೇಕು’ ಎಂದು ಎಸ್. ಕಾಳೇಗೌಡ ಸಲಹೆ ನೀಡಿದರು.</p>.<p>ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಸುಪ್ತವಾಗಿರುವ ಸೃಜನಶೀಲ ಕಲೆಗಳನ್ನು ಬೆಳಕಿಗೆ ತರಲು ಸಹಕಾರಿಯಾಗಿವೆ ಎಂದು ಅವರು ಹೇಳಿದರು.</p>.<p>ಗ್ರಾ.ಪಂ. ಉಪಾಧ್ಯಕ್ಷೆ ನಿಂಗಮ್ಮ ಮಹದೇವು, ಸದಸ್ಯ ಎಂ.ಈ. ಜಗದೀಶ್, ಶಿಬಿರದ ನಿರ್ದೇಶಕ ದೀಪಕ್ ಮೈಸೂರು, ಸಂಚಾಲಕ ವಿ. ಅನಿಲ್ಕುಮಾರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>