<p><strong>ಮಂಡ್ಯ</strong>: ‘ರೈತ, ದಲಿತ, ಕಾರ್ಮಿಕ, ಮಹಿಳಾ ಸಂಘಟನೆಗಳ ಹಾಗೂ ಗ್ರಾಮ ಪಂಚಾಯಿತಿಗಳ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಕೆಆರ್ಎಸ್ ಅಣೆಕಟ್ಟೆ ಬಳಿ ‘ಕಾವೇರಿ ಆರತಿ’ ನಡೆಸುವ ಪೂರ್ವಭಾವಿ ಸಭೆ ನಡೆಸಿ, ನಮ್ಮ ತಾಳ್ಮೆ ಪರೀಕ್ಷೆ ಮಾಡುತ್ತಿದೆ’ ಎಂದು ರೈತ ಸಂಘದ ನಾಯಕಿ ಸುನಂದಾ ಜಯರಾಂ ಕಿಡಿಕಾರಿದ್ದಾರೆ.</p><p>ಸಭೆ ನಡೆಸಿರುವುದು ಖಂಡನೀಯ. ವಾಮಮಾರ್ಗದ ಮೂಲಕ ಈ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹೊರಟಿರುವುದನ್ನು ನಾವು ಸಹಿಸುವುದಿಲ್ಲ. ಸಮಯಕ್ಕೆ ತಕ್ಕ ಹಾಗೆ ತಮಗೆ ಬೇಕಿರುವ ವ್ಯಕ್ತಿಗಳಿಗೆ ರೈತ ಚಳವಳಿಯ ಗುರುತಾದ ಹಸಿರು ಟವೆಲ್ ಹಾಕಿಸಿ ಸಭೆ ನಡೆಸಿರುವುದು ಸರ್ಕಾರವು ತನಗೆ ತಾನೇ ಮೋಸ ಮಾಡಿಕೊಂಡಂತಿದೆ ಎಂದು ಆಕ್ಷೇಪಿಸಿದ್ದಾರೆ.</p><p>ಜೂನ್ 26ರಂದು ಕೋರ್ಟಿನಲ್ಲಿ ಈ ವಿಷಯ ಚರ್ಚೆಗೆ ಬರುವ ಕಾರಣ ತುರ್ತಾಗಿ ಈ ಸಭೆ ನಡೆಸಿರುವುದು ಅಧಿಕಾರದ ಮದ ಹಾಗೂ ದರ್ಪದ ದ್ಯೋತಕವಾಗಿದೆ. ಈ ಸಭೆ ನಡೆಸಿದ ಮಾತ್ರಕ್ಕೆ ಅಮ್ಯೂಸ್ಮೆಂಟ್ ಪಾರ್ಕ್ ಮತ್ತು ಕಾವೇರಿ ಆರತಿ ಯೋಜನೆಯನ್ನು ಮಾಡುತ್ತೇವೆ ಎನ್ನುವುದು ಸುಳ್ಳು. ಜೊತೆಗೆ ಇದು ನಡೆಯಲು ಸಾಧ್ಯವೇ ಇಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.2–3 ದಿನಗಳಲ್ಲಿ ‘ಕಾವೇರಿ ಆರತಿ’ ಕಾರ್ಯಕ್ರಮದ ಸ್ವರೂಪ ಪ್ರಕಟಣೆ: ಡಿಕೆಶಿ .ಆಡಳಿತದಲ್ಲಿ ಕನ್ನಡ ಕಡ್ಡಾಯ: ಸೂಚನೆ ಉಲ್ಲಂಘಿಸಿದರೆ ಶಿಸ್ತು ಕ್ರಮ; ಸಿಎಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ರೈತ, ದಲಿತ, ಕಾರ್ಮಿಕ, ಮಹಿಳಾ ಸಂಘಟನೆಗಳ ಹಾಗೂ ಗ್ರಾಮ ಪಂಚಾಯಿತಿಗಳ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಕೆಆರ್ಎಸ್ ಅಣೆಕಟ್ಟೆ ಬಳಿ ‘ಕಾವೇರಿ ಆರತಿ’ ನಡೆಸುವ ಪೂರ್ವಭಾವಿ ಸಭೆ ನಡೆಸಿ, ನಮ್ಮ ತಾಳ್ಮೆ ಪರೀಕ್ಷೆ ಮಾಡುತ್ತಿದೆ’ ಎಂದು ರೈತ ಸಂಘದ ನಾಯಕಿ ಸುನಂದಾ ಜಯರಾಂ ಕಿಡಿಕಾರಿದ್ದಾರೆ.</p><p>ಸಭೆ ನಡೆಸಿರುವುದು ಖಂಡನೀಯ. ವಾಮಮಾರ್ಗದ ಮೂಲಕ ಈ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹೊರಟಿರುವುದನ್ನು ನಾವು ಸಹಿಸುವುದಿಲ್ಲ. ಸಮಯಕ್ಕೆ ತಕ್ಕ ಹಾಗೆ ತಮಗೆ ಬೇಕಿರುವ ವ್ಯಕ್ತಿಗಳಿಗೆ ರೈತ ಚಳವಳಿಯ ಗುರುತಾದ ಹಸಿರು ಟವೆಲ್ ಹಾಕಿಸಿ ಸಭೆ ನಡೆಸಿರುವುದು ಸರ್ಕಾರವು ತನಗೆ ತಾನೇ ಮೋಸ ಮಾಡಿಕೊಂಡಂತಿದೆ ಎಂದು ಆಕ್ಷೇಪಿಸಿದ್ದಾರೆ.</p><p>ಜೂನ್ 26ರಂದು ಕೋರ್ಟಿನಲ್ಲಿ ಈ ವಿಷಯ ಚರ್ಚೆಗೆ ಬರುವ ಕಾರಣ ತುರ್ತಾಗಿ ಈ ಸಭೆ ನಡೆಸಿರುವುದು ಅಧಿಕಾರದ ಮದ ಹಾಗೂ ದರ್ಪದ ದ್ಯೋತಕವಾಗಿದೆ. ಈ ಸಭೆ ನಡೆಸಿದ ಮಾತ್ರಕ್ಕೆ ಅಮ್ಯೂಸ್ಮೆಂಟ್ ಪಾರ್ಕ್ ಮತ್ತು ಕಾವೇರಿ ಆರತಿ ಯೋಜನೆಯನ್ನು ಮಾಡುತ್ತೇವೆ ಎನ್ನುವುದು ಸುಳ್ಳು. ಜೊತೆಗೆ ಇದು ನಡೆಯಲು ಸಾಧ್ಯವೇ ಇಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.2–3 ದಿನಗಳಲ್ಲಿ ‘ಕಾವೇರಿ ಆರತಿ’ ಕಾರ್ಯಕ್ರಮದ ಸ್ವರೂಪ ಪ್ರಕಟಣೆ: ಡಿಕೆಶಿ .ಆಡಳಿತದಲ್ಲಿ ಕನ್ನಡ ಕಡ್ಡಾಯ: ಸೂಚನೆ ಉಲ್ಲಂಘಿಸಿದರೆ ಶಿಸ್ತು ಕ್ರಮ; ಸಿಎಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>