ಕೆಲವೆಡೆ ಬೆಳಿಗ್ಗೆ 10 ಗಂಟೆವರೆಗೆ ದಿನಸಿ ಅಂಗಡಿಗಳು ತೆರೆದಿದ್ದವು. ಲಾಕ್ಡೌನ್ ಇರುತ್ತದೆ ಎಂದು ತಿಳಿದ ಹಲವರು ಶನಿವಾರವೇ ಬೇಕಾದ ಸಾಮಾಗ್ರಿಗಳನ್ನು ಖರೀದಿಸಿದ್ದರು. ನಗರದ ಪೇಟೆ ಬೀದಿ, ಮಹಾವೀರ ವೃತ್ತ, ವಿವಿ ರಸ್ತೆ, ಆರ್ಪಿ ರಸ್ತೆ, ವಿನೋಬಾ ರಸ್ತೆ, ಹೊಸಹಳ್ಳಿ ವೃತ್ತ, ನೂರಡಿ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿನ ಅಂಗಡಿಗಳು ಮುಚ್ಚಿದ್ದವು. ಮಾರುಕಟ್ಟೆಗೆ ತೆರಳುವ ರಸ್ತೆಯಲ್ಲಿ ಹೂವು ಹಣ್ಣು ವ್ಯಾಪಾರಿಗಳು ಅಂಗಡಿ ತೆರೆದಿದ್ದರೂ, ದೇವಸ್ಥಾನಗಳು, ಸಭೆ ಸಮಾರಂಭಗಳು ನಡೆಯದ ಕಾರಣ ಗ್ರಾಹಕರಿಲ್ಲದೆ ಪರದಾಡಿದರು.