ಮಂಡ್ಯದ ಬೆಲ್ಲಕ್ಕೆ ಎಲ್ಲೆಡೆ ಉತ್ತಮ ಬೇಡಿಕೆ ಇದ್ದು, ಕೇಂದ್ರ ಪುರಸ್ಕøತ ಆತ್ಮನಿರ್ಭರ ಭಾರತ ಯೋಜನೆಯಡಿ ಒಂದು ಜಿಲ್ಲೆ ಒಂದು ಉತ್ಪನ್ನ ಕಾರ್ಯಕ್ರಮದಡಿ ರಾಸಾಯನಿಕ ಮುಕ್ತ ಬೆಲ್ಲ ಉತ್ಪಾದಿಸಲು ಮಂಡ್ಯ ಜಿಲ್ಲೆ ಆಯ್ಕೆ ಆಗಿದೆ. ಹಾಗಾಗಿ, ಇದರ ಲಾಭ ಹೆಚ್ಚಿನ ಸಂಖ್ಯೆಯ ರೈತರಿಗೆ ದೊರೆಯಬೇಕು. ರಾಸಾಯನಿಕ ಬಳಸದೇ ಗುಣಮಟ್ಟದ ಬೆಲ್ಲವನ್ನು ಉತ್ಪಾದನೆ ಮಾಡಿದ್ದೇ ಆದಲ್ಲಿ ರೈತರಿಗೆ ಉತ್ತಮ ಬೆಲೆ ಸಿಗಲಿದೆ ಎಂದು ಹೇಳಿದರು.