<p><strong>ಮಂಡ್ಯ</strong>: ತಾಲ್ಲೂಕಿನ ಆಲಕೆರೆ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ತಗ್ಗಹಳ್ಳಿ ಗ್ರಾಮ ಪಂಚಾಯಿತಿಯ ಹೆಚ್ಚುವರಿ ಪ್ರಭಾರ ಪಿಡಿಒ ಆಗಿದ್ದ ಸಿ.ಶ್ರೀನಿವಾಸಯ್ಯ ಅವರನ್ನು ಕರ್ತವ್ಯಲೋಪ ಆರೋಪದ ಮೇರೆಗೆ ಅಮಾನತುಗೊಳಿಸಿ ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದೇಶ ಹೊರಡಿಸಿದ್ದಾರೆ. </p><p>ತಗ್ಗಹಳ್ಳಿ ಗ್ರಾ.ಪಂ. ಹೆಚ್ಚುವರಿ ಪ್ರಭಾರ ಪಿಡಿಒ ಆಗಿದ್ದ ಸಂದರ್ಭದಲ್ಲಿ ಮೂರೇ ದಿನಗಳಲ್ಲಿ ಯಾವುದೇ ಸಾಮಗ್ರಿ ಖರೀದಿ ಮಾಡದೇ ₹54 ಲಕ್ಷಕ್ಕೂ ಹೆಚ್ಚು ಹಣವನ್ನು ಏಜೆನ್ಸಿಯೊಂದಕ್ಕೆ ಅಕ್ರಮವಾಗಿ ಪಾವತಿಸಲು ಯತ್ನಿಸಿರುವ ಆರೋಪ ಕೇಳಿ ಬಂದಿತ್ತು. </p><p>ಈ ಕುರಿತು ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ₹45 ಲಕ್ಷ ವರ್ಗಾವಣೆಗೆ ಮೇಲಧಿಕಾರಿಗಳು ತಡೆಯೊಡ್ಡಿದ್ದರು. ಗ್ರಾಮ ಪಂಚಾಯಿತಿಯ ಬ್ಯಾಂಕ್ ಖಾತೆಯನ್ನು ಬಂದ್ ಮಾಡಿಸಿದ್ದರು. </p><p>ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದ ಸಾಮಗ್ರಿಗಳು ಮತ್ತು ಬೀದಿದೀಪಗಳ ಖರೀದಿಗೆಂದು ಲೆಕ್ಕ ತೋರಿಸಿ, ಏಜೆನ್ಸಿಗೆ ಆನ್ಲೈನ್ ಮೂಲಕ ಹಣ ಪಾವತಿಸಲು ಯತ್ನಿಸಿರುವ ಆರೋಪ ಕೇಳಿಬಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ತಾಲ್ಲೂಕಿನ ಆಲಕೆರೆ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ತಗ್ಗಹಳ್ಳಿ ಗ್ರಾಮ ಪಂಚಾಯಿತಿಯ ಹೆಚ್ಚುವರಿ ಪ್ರಭಾರ ಪಿಡಿಒ ಆಗಿದ್ದ ಸಿ.ಶ್ರೀನಿವಾಸಯ್ಯ ಅವರನ್ನು ಕರ್ತವ್ಯಲೋಪ ಆರೋಪದ ಮೇರೆಗೆ ಅಮಾನತುಗೊಳಿಸಿ ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದೇಶ ಹೊರಡಿಸಿದ್ದಾರೆ. </p><p>ತಗ್ಗಹಳ್ಳಿ ಗ್ರಾ.ಪಂ. ಹೆಚ್ಚುವರಿ ಪ್ರಭಾರ ಪಿಡಿಒ ಆಗಿದ್ದ ಸಂದರ್ಭದಲ್ಲಿ ಮೂರೇ ದಿನಗಳಲ್ಲಿ ಯಾವುದೇ ಸಾಮಗ್ರಿ ಖರೀದಿ ಮಾಡದೇ ₹54 ಲಕ್ಷಕ್ಕೂ ಹೆಚ್ಚು ಹಣವನ್ನು ಏಜೆನ್ಸಿಯೊಂದಕ್ಕೆ ಅಕ್ರಮವಾಗಿ ಪಾವತಿಸಲು ಯತ್ನಿಸಿರುವ ಆರೋಪ ಕೇಳಿ ಬಂದಿತ್ತು. </p><p>ಈ ಕುರಿತು ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ₹45 ಲಕ್ಷ ವರ್ಗಾವಣೆಗೆ ಮೇಲಧಿಕಾರಿಗಳು ತಡೆಯೊಡ್ಡಿದ್ದರು. ಗ್ರಾಮ ಪಂಚಾಯಿತಿಯ ಬ್ಯಾಂಕ್ ಖಾತೆಯನ್ನು ಬಂದ್ ಮಾಡಿಸಿದ್ದರು. </p><p>ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದ ಸಾಮಗ್ರಿಗಳು ಮತ್ತು ಬೀದಿದೀಪಗಳ ಖರೀದಿಗೆಂದು ಲೆಕ್ಕ ತೋರಿಸಿ, ಏಜೆನ್ಸಿಗೆ ಆನ್ಲೈನ್ ಮೂಲಕ ಹಣ ಪಾವತಿಸಲು ಯತ್ನಿಸಿರುವ ಆರೋಪ ಕೇಳಿಬಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>