ಹೋಟೆಲ್ಗಳು, ಕ್ಯಾಂಟೀನ್ಗಳು ಹಾಗೂ ರಸ್ತೆ ಬದಿಯ ಪಾನಿಪುರಿ ಗಾಡಿಗಳು ಸ್ವಚ್ಛತೆಯನ್ನು ಕಾಪಾಡಬೇಕು. ಕುಡಿಯಲು ಬಿಸಿನೀರು ಹಾಗೂ ಕೈಗೆ ಸ್ಯಾನಿಟೈಸರ್ ನೀಡಬೇಕು. ಮಾಸ್ಕ್ ಧರಿಸದೇ ಅಡ್ಡಾಡುವವರಿಗೆ ಕಡ್ಡಾಯವಾಗಿ ದಂಡ ವಿಧಿಸಲಾಗುವುದು ಎಂದರು. ಪರಿಸರ ಎಂಜಿನಿಯರ್ ರುದ್ರೇಗೌಡ, ಆರೋಗ್ಯ ಪರಿವೀಕ್ಷಕರಾದ ಅಶೋಕ್, ನರಸಿಂಹಶೆಟ್ಟಿ, ಕೆ.ಎಸ್.ರಾಜೇಶ್, ಅರವಿಂದ ಕಾರಂತ್, ಧರ್ಮೇಂದ್ರ ಸಿರ್ವಿ, ಕೆ.ಪಿ.ಜಯಂತ್, ಕೆ.ಆರ್.ಚಂದ್ರಶೇಖರ್ ಭಾಗವಹಿಸಿದ್ದರು.