<p>ಪಾಂಡವಪುರ: ಅಕ್ರಮ ಗಣಿಗಾರಿಕೆಯ ಕಲ್ಲು ಕ್ರಷರ್ ಮೇಲೆ ಡಿಢೀರ್ ದಾಳಿ ನಡೆಸಿದ ತಹಶೀಲ್ದಾರ್ ಅವರಿಗೆ ಅಡ್ಡಿಪಡಿಸಿದ ವ್ಯಕ್ತಿಯ ಮೇಲೆ ಗುರುವಾರ ಪ್ರಕರಣ ದಾಖಲಾಗಿದೆ.</p>.<p>ಬೇಬಿಬೆಟ್ಟದಲ್ಲಿ ಅಕ್ರಮ ಕಲ್ಲು ಕ್ರಷರ್ ನಡೆಯುತ್ತಿದೆ ಎಂಬ ಮಾಹಿತಿಯಿಂದಾಗಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಅವರ ಸೂಚನೆಯ ಮೇರೆಗೆ ತಹಶೀಲ್ದಾರ್ ಪ್ರಮೋದ್ ಎಲ್.ಪಾಟೀಲ್ ಅವರು ಬೇಬಿ ಬೆಟ್ಟದ ಕಲ್ಲು ಗಣಿಗಾರಿಕೆಗೆ ಸ್ಥಳಕ್ಕೆ ತೆರಳುತ್ತಿದ್ದರು. ಈ ವೇಳೆ ಲಾರಿಯೊಂದು ಕಲ್ಲು ಸಾಗಿಸುತ್ತಿತ್ತು.</p>.<p>ತಹಶೀಲ್ದಾರ್ ಪ್ರಮೋದ್ ಎಲ್.ಪಾಟೀಲ್ ಅವರು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಸನ್ಮತಿ ಕ್ರಷರ್ ಮೇಲೆ ದಾಳಿ ಮಾಡಿದ್ದಾರೆ.</p>.<p>ಈ ವೇಳೆ ಸನ್ಮತಿ ಕ್ರಷರ್ ಮಾಲೀಕ ಜಯರಾಮ್ ಅವರ ಪುತ್ರ ಜಯಂತ್ ‘ನೀವು ಯಾರು ಇಲ್ಲಿಗೆ ಏಕೆ ಬಂದಿದ್ದೀರಿ? ಇಲ್ಲಿಂದ ಹೊರಟು ಹೋಗಿ’ ಎಂದು ತಹಶೀಲ್ದಾರ್ ಹೇಳಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ.</p>.<p>ತಹಶೀಲ್ದಾರ್ ಅವರ ಕರೆಯ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದಾಗ ಸನ್ಮತಿ ಕ್ರಷರ್ನ ಜಯಂತ್ ಪರಾರಿಯಾಗಿದ್ದಾನೆ. ಈ ಸಂಬಂಧ ತಹಶೀಲ್ದಾರ್ ನೀಡಿರುವ ದೂರನ್ನು ದಾಖಲಿಸಿಕೊಂಡಿರುವ ಪಟ್ಟಣದ ಪೊಲೀಸರು ಕ್ರಮಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಾಂಡವಪುರ: ಅಕ್ರಮ ಗಣಿಗಾರಿಕೆಯ ಕಲ್ಲು ಕ್ರಷರ್ ಮೇಲೆ ಡಿಢೀರ್ ದಾಳಿ ನಡೆಸಿದ ತಹಶೀಲ್ದಾರ್ ಅವರಿಗೆ ಅಡ್ಡಿಪಡಿಸಿದ ವ್ಯಕ್ತಿಯ ಮೇಲೆ ಗುರುವಾರ ಪ್ರಕರಣ ದಾಖಲಾಗಿದೆ.</p>.<p>ಬೇಬಿಬೆಟ್ಟದಲ್ಲಿ ಅಕ್ರಮ ಕಲ್ಲು ಕ್ರಷರ್ ನಡೆಯುತ್ತಿದೆ ಎಂಬ ಮಾಹಿತಿಯಿಂದಾಗಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಅವರ ಸೂಚನೆಯ ಮೇರೆಗೆ ತಹಶೀಲ್ದಾರ್ ಪ್ರಮೋದ್ ಎಲ್.ಪಾಟೀಲ್ ಅವರು ಬೇಬಿ ಬೆಟ್ಟದ ಕಲ್ಲು ಗಣಿಗಾರಿಕೆಗೆ ಸ್ಥಳಕ್ಕೆ ತೆರಳುತ್ತಿದ್ದರು. ಈ ವೇಳೆ ಲಾರಿಯೊಂದು ಕಲ್ಲು ಸಾಗಿಸುತ್ತಿತ್ತು.</p>.<p>ತಹಶೀಲ್ದಾರ್ ಪ್ರಮೋದ್ ಎಲ್.ಪಾಟೀಲ್ ಅವರು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಸನ್ಮತಿ ಕ್ರಷರ್ ಮೇಲೆ ದಾಳಿ ಮಾಡಿದ್ದಾರೆ.</p>.<p>ಈ ವೇಳೆ ಸನ್ಮತಿ ಕ್ರಷರ್ ಮಾಲೀಕ ಜಯರಾಮ್ ಅವರ ಪುತ್ರ ಜಯಂತ್ ‘ನೀವು ಯಾರು ಇಲ್ಲಿಗೆ ಏಕೆ ಬಂದಿದ್ದೀರಿ? ಇಲ್ಲಿಂದ ಹೊರಟು ಹೋಗಿ’ ಎಂದು ತಹಶೀಲ್ದಾರ್ ಹೇಳಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ.</p>.<p>ತಹಶೀಲ್ದಾರ್ ಅವರ ಕರೆಯ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದಾಗ ಸನ್ಮತಿ ಕ್ರಷರ್ನ ಜಯಂತ್ ಪರಾರಿಯಾಗಿದ್ದಾನೆ. ಈ ಸಂಬಂಧ ತಹಶೀಲ್ದಾರ್ ನೀಡಿರುವ ದೂರನ್ನು ದಾಖಲಿಸಿಕೊಂಡಿರುವ ಪಟ್ಟಣದ ಪೊಲೀಸರು ಕ್ರಮಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>