ಮದ್ದೂರು ತಾಲ್ಲೂಕಿನ ದೇಶಹಳ್ಳಿ ಗ್ರಾಮದ ಕೆರೆಯಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನ ಮಾಡಲು ನೀರಿನ ಸಂಗ್ರಹಕ್ಕಾಗಿ ಸುಮಾರು 6 ತಿಂಗಳಿಂದ ಮೇಜರ್ ವಾಟರ್ ಟ್ಯಾಂಕ್ ನಿರ್ಮಿಸ ಲಾಗುತ್ತಿದೆ. ಟ್ಯಾಂಕ್ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ. ಸರಿಯಾದ ಕ್ರಮದಲ್ಲಿ ನಿರ್ವಹಣೆ (ಕ್ಯೂರಿಂಗ್) ಮಾಡದಿರುವುದರಿಂದ ಟ್ಯಾಂಕ್ ಕೆಲವೇ ವರ್ಷಗಳಲ್ಲಿ ಕುಸಿಯುವ ಭೀತಿ ಎದುರಾಗಿದೆ. ಈ ಜಿಲ್ಲಾಡಳಿತ ಮಧ್ಯಪ್ರವೇಶಿಸಿ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಮುಂದಾಗಲಿ ಎನ್ನುತ್ತಾರೆ ಗೊಲ್ಲರದೊಡ್ಡಿ ಗ್ರಾಮದ ಮುಖಂಡರಾದ ಅಶೋಕ, ಜಗಾನಂದ, ಬೋರೇಗೌಡ, ದಾಸಪ್ಪ, ಉಮೆಶ್.