<p><strong>ಪಾಂಡವಪುರ:</strong> ನಕಲಿ ಅಂಗವಿಕಲ ಪ್ರಮಾಣ ಪತ್ರ ನೀಡಿ ಕೆಲಸ ಗಿಟ್ಟಿಸಿದ ಆರೋಪ ಎದುರಿಸುತ್ತಿರುವ ಪಟ್ಟಣದ ಉರ್ದು ಶಾಲೆಯ ಶಿಕ್ಷಕ ಕೆ.ಚಂದ್ರಶೇಖರ (ಅಲಿಯಾಸ್ ಗಡ್ಡಚಂದ್ರ) ಅವರನ್ನು ರಾಜ್ಯ ಮಟ್ಟದ ವೈದ್ಯಕೀಯ ಮಂಡಳಿಯಿಂದ ಪರೀಕ್ಷೆಗೊಳಪಡಿಸಲು ರಾಜ್ಯ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತರು ಸೂಚಿಸಿದ್ದಾರೆ.</p>.<p>ಹಲವು ದಿನಗಳ ಹಿಂದೆಯೇ ಸಾಮಾಜಿಕ ಕಾರ್ಯಕರ್ತ ಕೋ.ಪು.ಗುಣಶೇಖರ್ ಎಂಬುವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಶಿಕ್ಷಣ ಇಲಾಖೆ ಮತ್ತು ಲೋಕಾಯುಕ್ತಕ್ಕೆ ದೂರು ನೀಡಿದ್ದರು.</p>.<p>ಶಿಕ್ಷಕನಿಗೆ ನಕಲು ಪ್ರಮಾಣ ಪತ್ರ ನೀಡಿದ್ದ ಮಿಮ್ಸ್ ಮತ್ತು ಮೈಸೂರಿನ ಕೆ.ಆರ್.ಆಸ್ಪತ್ರೆ ವೈದ್ಯರ ವಿರುದ್ದವೂ ದೂರು ಸಲ್ಲಿಸಲಾಗಿತ್ತು.</p>.<p>ಕೆ.ಚಂದ್ರಶೇಖರ್ ಅವರು ತಾನು ಅಂಗವಿಕಲನೆಂದು ಹೇಳಿ ವೈದ್ಯರ ಸಹಾಯದಿಂದ ನಕಲಿ ಪ್ರಮಾಣ ಪತ್ರವನ್ನು ಸೃಷ್ಟಿಸಿ ಶಿಕ್ಷಣ ಇಲಾಖೆಯನ್ನು ವಂಚಿಸಿ ಶಿಕ್ಷಕ ಹುದ್ದೆ ಪಡೆದಿದ್ದಾರೆ ಗುಣಶೇಖರ್ ಆರೋಪಿಸಿದ್ದರು.</p>.<p>ಶಿಕ್ಷಕ ಕೆ.ಚಂದ್ರಶೇಖರ್ (ಅಲಿಯಾಸ್ ಗಡ್ಡ ಚಂದ್ರ) ಅವರ ವಿರುದ್ಧ ಆರೋಪ ದೃಢಪಟ್ಟಲ್ಲಿ 2 ವರ್ಷ ಜೈಲು ಹಾಗೂ ₹1ಲಕ್ಷ ದಂಡ ವಿಧಿಸಲಾಗುತ್ತದೆ ಎಂದು ಡಿ.27ರಂದು ರಾಜ್ಯ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ಆಯುಕ್ತರು ಆದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ:</strong> ನಕಲಿ ಅಂಗವಿಕಲ ಪ್ರಮಾಣ ಪತ್ರ ನೀಡಿ ಕೆಲಸ ಗಿಟ್ಟಿಸಿದ ಆರೋಪ ಎದುರಿಸುತ್ತಿರುವ ಪಟ್ಟಣದ ಉರ್ದು ಶಾಲೆಯ ಶಿಕ್ಷಕ ಕೆ.ಚಂದ್ರಶೇಖರ (ಅಲಿಯಾಸ್ ಗಡ್ಡಚಂದ್ರ) ಅವರನ್ನು ರಾಜ್ಯ ಮಟ್ಟದ ವೈದ್ಯಕೀಯ ಮಂಡಳಿಯಿಂದ ಪರೀಕ್ಷೆಗೊಳಪಡಿಸಲು ರಾಜ್ಯ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತರು ಸೂಚಿಸಿದ್ದಾರೆ.</p>.<p>ಹಲವು ದಿನಗಳ ಹಿಂದೆಯೇ ಸಾಮಾಜಿಕ ಕಾರ್ಯಕರ್ತ ಕೋ.ಪು.ಗುಣಶೇಖರ್ ಎಂಬುವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಶಿಕ್ಷಣ ಇಲಾಖೆ ಮತ್ತು ಲೋಕಾಯುಕ್ತಕ್ಕೆ ದೂರು ನೀಡಿದ್ದರು.</p>.<p>ಶಿಕ್ಷಕನಿಗೆ ನಕಲು ಪ್ರಮಾಣ ಪತ್ರ ನೀಡಿದ್ದ ಮಿಮ್ಸ್ ಮತ್ತು ಮೈಸೂರಿನ ಕೆ.ಆರ್.ಆಸ್ಪತ್ರೆ ವೈದ್ಯರ ವಿರುದ್ದವೂ ದೂರು ಸಲ್ಲಿಸಲಾಗಿತ್ತು.</p>.<p>ಕೆ.ಚಂದ್ರಶೇಖರ್ ಅವರು ತಾನು ಅಂಗವಿಕಲನೆಂದು ಹೇಳಿ ವೈದ್ಯರ ಸಹಾಯದಿಂದ ನಕಲಿ ಪ್ರಮಾಣ ಪತ್ರವನ್ನು ಸೃಷ್ಟಿಸಿ ಶಿಕ್ಷಣ ಇಲಾಖೆಯನ್ನು ವಂಚಿಸಿ ಶಿಕ್ಷಕ ಹುದ್ದೆ ಪಡೆದಿದ್ದಾರೆ ಗುಣಶೇಖರ್ ಆರೋಪಿಸಿದ್ದರು.</p>.<p>ಶಿಕ್ಷಕ ಕೆ.ಚಂದ್ರಶೇಖರ್ (ಅಲಿಯಾಸ್ ಗಡ್ಡ ಚಂದ್ರ) ಅವರ ವಿರುದ್ಧ ಆರೋಪ ದೃಢಪಟ್ಟಲ್ಲಿ 2 ವರ್ಷ ಜೈಲು ಹಾಗೂ ₹1ಲಕ್ಷ ದಂಡ ವಿಧಿಸಲಾಗುತ್ತದೆ ಎಂದು ಡಿ.27ರಂದು ರಾಜ್ಯ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ಆಯುಕ್ತರು ಆದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>