ತಹಶೀಲ್ದಾರ್ ಶ್ವೇತಾ ಎನ್.ರವೀಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ‘ಮುಖ್ಯಶಿಕ್ಷಕಿ ವಿರುದ್ಧ ಕ್ರಮ ಜರುಗಿಸದಿದ್ದರೆ ಶಾಲೆ ಬಂದ್ ಮಾಡಲಾಗುವುದು’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಡಿಡಿಪಿಐ ಟಿ.ಎನ್.ಜವರೇಗೌಡ ಶುಕ್ರವಾರ ಶಿಕ್ಷಕಿಯ ಅಮಾನತು ಕೋರಿ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದ್ದರು. ಇದರ ಆಧಾರದ ಮೇಲೆ ಆಯುಕ್ತರಾದ ಡಾ.ಆರ್.ವಿಶಾಲ್ ಅಮಾನತುಗೊಳಿಸಿದ್ದಾರೆ.