ವಳಗೆರೆದೊಡ್ಡಿ, ಕರಡಹಳ್ಳಿ, ಲಿಂಗಾಣಪುರ, ಮೇಗಳಾಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಮಕ್ಕಳ ದಾಖಲಾತಿ ಇಲ್ಲದೆ ಮುಚ್ಚಿದ್ದ ಶಾಲೆಗಳು ಮತ್ತೆ ಆರಂಭವಾಗಿವೆ. ದಾಖಲಾತಿ ಕಡಿಮೆ ಇರುವ ಕಡೆಗಳಿಗೆ ತಂಡ ತೆರಳಿ ವಿದ್ಯಾರ್ಥಿ, ಪೋಷಕರಿಗೆ ಶಿಕ್ಷಣದ ಮಹತ್ವ ತಿಳಿಸಲಾಗುತ್ತಿದೆ. ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮನೆ ಮನೆಗೆ ರಾತ್ರಿ ಸಮಯದಲ್ಲಿ ಭೇಟಿ ನೀಡಿ ವಿಷಯವಾರು ಕುರಿತು ವಿದ್ಯಾರ್ಥಿಗಳಲ್ಲಿನ ಕಲಿಕಾಮಟ್ಟ ಗುರುತಿಸಲಾಗುತ್ತಿದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಒತ್ತು ನೀಡಲು ಶಾಲೆಯಲ್ಲಿ ವಾಸ್ತವ್ಯ ಹೂಡಿ ಯೋಜನೆ ರೂಪಿಸಲಾಗುತ್ತಿದೆ. ಮನರಂಜನೆ ಕಡಿಮೆ ಮಾಡಿ ಕಲಿಕೆಗೆ ಪ್ರೋತ್ಸಾಹ ತುಂಬುವ ಕೆಲಸ ಮಾಡಲಾಗುತ್ತಿದೆ.