<p><strong>ಮಂಡ್ಯ: </strong>‘ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದ್ದು, ನಿವೃತ್ತಿ ನಂತರವೂ ಮಕ್ಕಳಿಗೆ ಜ್ಞಾನ ಹಂಚುವ ಕಾರ್ಯವನ್ನು ನಿರಂತರವಾಗಿ ಮಾಡಬೇಕು’ ಎಂದು ಶಾಸಕ ಕೆ.ಟಿ.ಶ್ರೀಕಂಠೇಗೌಡ ಹೇಳಿದರು.</p>.<p>ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರ ಬಳಗದ ವತಿಯಿಂದ ನಗರದ ಕರ್ನಾಟಕ ಸಂಘದ ಕುವೆಂಪು ಬಯಲು ರಂಗಮಂದಿರದಲ್ಲಿ ನಡೆದ ನಿವೃತ್ತ ಮುಖ್ಯ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಸರ್ಕಾರಿ ಸೇವೆಯಲ್ಲಿ 35 ವರ್ಷಗಳ ಕಾಲ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವುದು ಸುಲಭದ ಮಾತಲ್ಲ. ಅವರ ಸಾಧನೆ ಹೆಚ್ಚಿದೆ. ಮುಂದೆಯೂ ಮಕ್ಕಳಿಗೆ ಮಾರ್ಗದರ್ಶನ ಮಾಡುವುದನ್ನು ಮುಂದುವರಿಸಬೇಕು. ನಿವೃತ್ತ ಜೀವನವನ್ನು ಉತ್ತಮವಾಗಿ ಕಳೆಯಬೇಕು’ ಎಂದು ಹೇಳಿದರು.</p>.<p>ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯ ಪ್ರಕಾಶಗೌಡ ಮಾತನಾಡಿ, ಶಿಕ್ಷಕರು ನಿವೃತ್ತಿಯಾದರೂ ಸಹ ಸುತ್ತಮುತ್ತಲ ಮಕ್ಕಳು ಚೆನ್ನಾಗಿ ವ್ಯಾಸಂಗ ಮಾಡಲು ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.</p>.<p>ನಿವೃತ್ತರಾದ ಶಿಕ್ಷಕರಾದ ಶಿವರಾಮು, ಕೆ.ಬಿ.ಅಶೋಕ್ಕುಮಾರ್, ಜವರೇಗೌಡ, ಜಯಶಂಕರ್, ಚಿಕ್ಕನಾಗೇಗೌಡ ಅವರನ್ನು ಸನ್ಮಾನಿಸಲಾಯಿತು.</p>.<p>ಶಾಸಕ ಎಂ. ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಶಂಭೂಗೌಡ, ಉಪಾಧ್ಯಕ್ಷ ಟಿ. ಕೃಷ್ಣಯ್ಯ, ಜಿ.ಎನ್. ಶಿವರುದ್ರಪ್ಪ, ಮುಖ್ಯ ಶಿಕ್ಷಕರ ಸಂಘದ ಎ.ಎಸ್. ದೇವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>‘ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದ್ದು, ನಿವೃತ್ತಿ ನಂತರವೂ ಮಕ್ಕಳಿಗೆ ಜ್ಞಾನ ಹಂಚುವ ಕಾರ್ಯವನ್ನು ನಿರಂತರವಾಗಿ ಮಾಡಬೇಕು’ ಎಂದು ಶಾಸಕ ಕೆ.ಟಿ.ಶ್ರೀಕಂಠೇಗೌಡ ಹೇಳಿದರು.</p>.<p>ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರ ಬಳಗದ ವತಿಯಿಂದ ನಗರದ ಕರ್ನಾಟಕ ಸಂಘದ ಕುವೆಂಪು ಬಯಲು ರಂಗಮಂದಿರದಲ್ಲಿ ನಡೆದ ನಿವೃತ್ತ ಮುಖ್ಯ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಸರ್ಕಾರಿ ಸೇವೆಯಲ್ಲಿ 35 ವರ್ಷಗಳ ಕಾಲ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವುದು ಸುಲಭದ ಮಾತಲ್ಲ. ಅವರ ಸಾಧನೆ ಹೆಚ್ಚಿದೆ. ಮುಂದೆಯೂ ಮಕ್ಕಳಿಗೆ ಮಾರ್ಗದರ್ಶನ ಮಾಡುವುದನ್ನು ಮುಂದುವರಿಸಬೇಕು. ನಿವೃತ್ತ ಜೀವನವನ್ನು ಉತ್ತಮವಾಗಿ ಕಳೆಯಬೇಕು’ ಎಂದು ಹೇಳಿದರು.</p>.<p>ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯ ಪ್ರಕಾಶಗೌಡ ಮಾತನಾಡಿ, ಶಿಕ್ಷಕರು ನಿವೃತ್ತಿಯಾದರೂ ಸಹ ಸುತ್ತಮುತ್ತಲ ಮಕ್ಕಳು ಚೆನ್ನಾಗಿ ವ್ಯಾಸಂಗ ಮಾಡಲು ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.</p>.<p>ನಿವೃತ್ತರಾದ ಶಿಕ್ಷಕರಾದ ಶಿವರಾಮು, ಕೆ.ಬಿ.ಅಶೋಕ್ಕುಮಾರ್, ಜವರೇಗೌಡ, ಜಯಶಂಕರ್, ಚಿಕ್ಕನಾಗೇಗೌಡ ಅವರನ್ನು ಸನ್ಮಾನಿಸಲಾಯಿತು.</p>.<p>ಶಾಸಕ ಎಂ. ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಶಂಭೂಗೌಡ, ಉಪಾಧ್ಯಕ್ಷ ಟಿ. ಕೃಷ್ಣಯ್ಯ, ಜಿ.ಎನ್. ಶಿವರುದ್ರಪ್ಪ, ಮುಖ್ಯ ಶಿಕ್ಷಕರ ಸಂಘದ ಎ.ಎಸ್. ದೇವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>