ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು, ಹಲವು ವರ್ಷಗಳಿಂದ ಕೆಲವೇ ವ್ಯಕ್ತಿಗಳು ಪಂಚಾಯಿತಿಯಲ್ಲಿ ಅಧಿಕಾರ ಹಿಡಿಯುತ್ತಿದ್ದು, ಗ್ರಾಮದ ಅಭಿವೃದ್ಧಿ ಹಿಂದುಳಿದಿದೆ. ಗ್ರಾಮದಲ್ಲಿ ಮೂಲ ಸೌಕರ್ಯಗಳ ಕೊರತೆ ಕಂಡಿರುವ ನನಗೆ ಚುನಾವಣೆಯಲ್ಲಿ ಗೆದ್ದು ಜನರ ಸೇವೆ ಮಾಡುವ ಹಂಬಲವಿದೆ. ಅಲ್ಲದೆ, ರಾಜಕೀಯಕ್ಕೆ ಪ್ರಜ್ಞಾವಂತ ವಿದ್ಯಾ ವಂತರ ಅವಶ್ಯಕತೆಯಿದ್ದು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯಕ್ಕೆ ಬರಬೇಕಾಗಿದೆ ಎಂದು ಹೇಳಿದರು.