ಬುಗತಗಹಳ್ಳಿ ಬಳಿಯ ಸರ್ಕಾರಿ ರೇಷ್ಮೆ ಮಾರುಕಟ್ಟೆಯಲ್ಲಿ ಬೆಳಿಗ್ಗೆ 10.30ಕ್ಕೆ ಆರಂಭವಾಗಬೇಕಿದ್ದ ಹರಾಜು ಪ್ರಕ್ರಿಯೆ ತಾಂತ್ರಿಕ ಕಾರಣದಿಂದ ತಡವಾಯಿತು. ಇದರಿಂದ, ದಿಢೀರ್ ರಸ್ತೆಗೆ ಇಳಿದ ರೈತರು ರೇಷ್ಮೆ ಗೂಡು ಸುರಿದು ರಸ್ತೆ ತಡೆಗೆ ಮುಂದಾದರು. ಕೂಡಲೇ ಸ್ಥಳಕ್ಕೆ ಬಂದ ಸಿಪಿಐ ಬಿ.ಎಸ್.ಶ್ರೀಧರ್, ಪಿಎಸ್ಐ ಶ್ರವಣ ಸ ದಾಸರಡ್ಡಿ ರೈತರನ್ನು ಮನವೊಲಿಸಿ ಮಾರುಕಟ್ಟೆಗೆ ಕರೆದುಕೊಂಡು ಬಂದು ಅಧಿಕಾರಿಗಳೊಂದಿಗೆ ಸಮಸ್ಯೆ ಬಗ್ಗೆ ಚರ್ಚಿಸಿದರು.