ದೇಗುಲವು ಕಾವೇರಿ ನದಿ ತೀರದಲ್ಲಿದ್ದು, ಹೊಯ್ಸಳ ಅರಸರ ಕಾಲದಲ್ಲಿ ನಿರ್ಮಾಣಗೊಂಡಿದ್ದು, ಭೂ ದೇವಿ ಸಮೇತ ಇರುವ ವರಾಹನಾಥನ ವಿಗ್ರಹವಿದೆ. ಉತ್ಸವ ಮೂರ್ತಿ ಇಲ್ಲದೆ ಇರುವುದರಿಂದ ಭಕ್ತರು ದೇವರ ಪಲ್ಲಕ್ಕಿ ಉತ್ಸವ, ಮೆರವಣಿಗೆ ಸೇವೆಗಳನ್ನು, ಹರಕೆಗಳನ್ನು ಪೂರೈಸಿಕೊಳ್ಳಲು ಆಗುತ್ತಿರಲಿಲ್ಲ. ಭಕ್ತರಿಗೆ ಅನುಕೂಲವಾಗುವಂತೆ ಉತ್ಸವ ಮೂರ್ತಿಗಳನ್ನು ಏ.29ರಂದು ಪ್ರತಿಷ್ಠಾಪಿಸಲಾಗುತ್ತಿದೆ. ಅದೇ ದಿನ ಸುಮಾರು ₹ 25 ಕೋಟಿ ವೆಚ್ಚದಲ್ಲಿ ದೇವಸ್ಥಾನದ ವಿಸ್ತರಣಾ ಕಾಮಗಾರಿಗೂ ಶಿಲಾನ್ಯಾಸ ನಡೆಯಲಿದೆ.