<p><strong>ನಾಗಮಂಗಲ:</strong> ‘ಮನಸ್ಸುಗಳ ಬೆಸುಗೆಯನ್ನು ಸಾಕ್ಷೀಕರಿಸುವ ಮಾಂಗಲ್ಯ ಧಾರಣೆಯೊಂದಿಗೆ ಕಾಲಿಡುವ ದಾಂಪತ್ಯ ಜೀವನದಲ್ಲಿ ಎದುರಾಗುವ ಕಷ್ಟ-ಸುಖಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಧರ್ಮವಿರಲಿ’ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ನವ ಜೋಡಿಗಳಿಗೆ ಶುಭ ಹಾರೈಸಿದರು.</p>.ಆದಿಚುಂಚನಗಿರಿ ಜಾತ್ರೆ: ಶ್ರದ್ಧಾಭಕ್ತಿಯ ಚಂದ್ರಮೌಳೇಶ್ವರ ರಥೋತ್ಸವ.<p>ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀಮಠದ ಬಿಜಿಎಸ್ ಸಭಾ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ 10 ಜೋಡಿಗಳ ಸರಳ ವಿವಾಹ ಹಾಗೂ ಹಿರಿಯ ದಂಪತಿಗಳಿಗೆ ಗೌರವ ಸಮರ್ಪಣೆ ಸಮಾರಂಭದ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿ ಮಾತನಾಡಿದರು.</p><p>ಗೃಹಸ್ಥಾಶ್ರಮ ಬಹಳ ಗಟ್ಟಿಯಾಗಿರುವ ನೆಲದಲ್ಲಿ ಮಾತ್ರ ಸಂಸ್ಕಾರ, ಸಂಸ್ಕೃತಿಯೂ ಕೂಡ ಭದ್ರವಾಗಿರುತ್ತದೆ. ಶ್ರೀಕ್ಷೇತ್ರದಲ್ಲಿ ವರ್ಷವಿಡೀ ಸರಳ ವಿವಾಹ ಮಹೋತ್ಸವ ನಡೆಯುತ್ತಿದ್ದರೂ ಭೈರವೈಕ್ಯ ಶ್ರೀಗಳ ಸಂಕಲ್ಪದಂತೆ ಜಾತ್ರಾ ಮಹೋತ್ಸವದಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ ಎಂದರು. </p>.ಆದಿಚುಂಚನಗಿರಿ ಜಾತ್ರೆ ಇಂದಿನಿಂದ: ಮಾರ್ಚ್ 2ರಂದು ಸರ್ವಧರ್ಮ ಸಮ್ಮೇಳನ.<p>ಬೆಳಿಗ್ಗೆಯಿಂದಲೇ ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ಹೋಮ-ಹವನಾದಿ ಪೂಜಾ ಕೈಂಕರ್ಯಗಳು ಜರುಗಿದವು. ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಸಮಾರಂಭದ ಹಿನ್ನೆಲೆಯಲ್ಲಿ ಶ್ರೀಮಠ ಸೇರಿದಂತೆ ಬಿಜಿಎಸ್ ಸಭಾ ಭವನವನ್ನು ವಿದ್ಯುತ್ ದೀಪಾಲಂಕಾರ ಮತ್ತು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.</p><p>ವಧು-ವರರಿಗೆ ಮಂತ್ರಾಕ್ಷತೆ ಹಾಕಿ ಫಲ ತಾಂಬೂಲ ನೀಡಿ ಶ್ರೀಗಳು ಹರಸಿದರು. ಹೆಣ್ಣಿಗೆ ಸೀರೆ, ರವಿಕೆ, ತಾಳಿ, ಕಾಲುಂಗುರ ಹಾಗೂ ಮುತ್ತೈದೆಯರಿಗೆ ಸಲ್ಲುವ ಬಾಗಿನ ನೀಡಲಾಯಿತು. ಗಂಡಿಗೆ ಪೇಟ, ಪಂಚೆ, ಶರ್ಟ್ ವಿತರಿಸಿದರು. </p><p>ಶ್ರೀಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಶ್ರೀಮಠದ ಚೈತನ್ಯನಾಥ ಸ್ವಾಮೀಜಿ, ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ, ಪಾಂಡವಪುರದ ಪುಸ್ತಕಮನೆಯ ಎಂ. ಅಂಕೇಗೌಡ, ಇತಿಹಾಸ ತಜ್ಞ ಪ್ರೊ.ಕೆ. ಪುಟ್ಟರಂಗಪ್ಪ ಮುಂತಾದ ಗಣ್ಯರು ಮತ್ತು ಭಕ್ತರು ಪಾಲ್ಗೊಂಡಿದ್ದರು. </p>.ಮೌಲ್ಯಯುತ ಶಿಕ್ಷಣ ಇಂದಿನ ಅಗತ್ಯ: ಆದಿಚುಂಚನಗಿರಿ ಶ್ರೀ.<h2>ಹಿರಿಯ ದಂಪತಿಗೆ ಸನ್ಮಾನ</h2><p>ವಿವಾಹವಾಗಿ 50 ವರ್ಷ ದಾಂಪತ್ಯ ಜೀವನ ಪೂರೈಸಿದ ದಂಪತಿಗಳನ್ನು ನಿರ್ಮಲಾನಂದನಾಥ ಸ್ವಾಮೀಜಿ ಅವರು ಮೈಸೂರು ಪೇಟ, ಶಾಲು ಹಾಕಿ ಸನ್ಮಾನಿಸಿದರು. ಮಂಡ್ಯ, ಹಾಸನ, ಮೈಸೂರು, ರಾಮನಗರ ಹಾಗೂ ತುಮಕೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ 260 ಹಿರಿಯ ದಂಪತಿಗಳು ಆಗಮಿಸಿದ್ದು ವಿಶೇಷವಾಗಿತ್ತು.</p>.ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: HD ಕುಮಾರಸ್ವಾಮಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ:</strong> ‘ಮನಸ್ಸುಗಳ ಬೆಸುಗೆಯನ್ನು ಸಾಕ್ಷೀಕರಿಸುವ ಮಾಂಗಲ್ಯ ಧಾರಣೆಯೊಂದಿಗೆ ಕಾಲಿಡುವ ದಾಂಪತ್ಯ ಜೀವನದಲ್ಲಿ ಎದುರಾಗುವ ಕಷ್ಟ-ಸುಖಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಧರ್ಮವಿರಲಿ’ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ನವ ಜೋಡಿಗಳಿಗೆ ಶುಭ ಹಾರೈಸಿದರು.</p>.ಆದಿಚುಂಚನಗಿರಿ ಜಾತ್ರೆ: ಶ್ರದ್ಧಾಭಕ್ತಿಯ ಚಂದ್ರಮೌಳೇಶ್ವರ ರಥೋತ್ಸವ.<p>ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀಮಠದ ಬಿಜಿಎಸ್ ಸಭಾ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ 10 ಜೋಡಿಗಳ ಸರಳ ವಿವಾಹ ಹಾಗೂ ಹಿರಿಯ ದಂಪತಿಗಳಿಗೆ ಗೌರವ ಸಮರ್ಪಣೆ ಸಮಾರಂಭದ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿ ಮಾತನಾಡಿದರು.</p><p>ಗೃಹಸ್ಥಾಶ್ರಮ ಬಹಳ ಗಟ್ಟಿಯಾಗಿರುವ ನೆಲದಲ್ಲಿ ಮಾತ್ರ ಸಂಸ್ಕಾರ, ಸಂಸ್ಕೃತಿಯೂ ಕೂಡ ಭದ್ರವಾಗಿರುತ್ತದೆ. ಶ್ರೀಕ್ಷೇತ್ರದಲ್ಲಿ ವರ್ಷವಿಡೀ ಸರಳ ವಿವಾಹ ಮಹೋತ್ಸವ ನಡೆಯುತ್ತಿದ್ದರೂ ಭೈರವೈಕ್ಯ ಶ್ರೀಗಳ ಸಂಕಲ್ಪದಂತೆ ಜಾತ್ರಾ ಮಹೋತ್ಸವದಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ ಎಂದರು. </p>.ಆದಿಚುಂಚನಗಿರಿ ಜಾತ್ರೆ ಇಂದಿನಿಂದ: ಮಾರ್ಚ್ 2ರಂದು ಸರ್ವಧರ್ಮ ಸಮ್ಮೇಳನ.<p>ಬೆಳಿಗ್ಗೆಯಿಂದಲೇ ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ಹೋಮ-ಹವನಾದಿ ಪೂಜಾ ಕೈಂಕರ್ಯಗಳು ಜರುಗಿದವು. ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಸಮಾರಂಭದ ಹಿನ್ನೆಲೆಯಲ್ಲಿ ಶ್ರೀಮಠ ಸೇರಿದಂತೆ ಬಿಜಿಎಸ್ ಸಭಾ ಭವನವನ್ನು ವಿದ್ಯುತ್ ದೀಪಾಲಂಕಾರ ಮತ್ತು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.</p><p>ವಧು-ವರರಿಗೆ ಮಂತ್ರಾಕ್ಷತೆ ಹಾಕಿ ಫಲ ತಾಂಬೂಲ ನೀಡಿ ಶ್ರೀಗಳು ಹರಸಿದರು. ಹೆಣ್ಣಿಗೆ ಸೀರೆ, ರವಿಕೆ, ತಾಳಿ, ಕಾಲುಂಗುರ ಹಾಗೂ ಮುತ್ತೈದೆಯರಿಗೆ ಸಲ್ಲುವ ಬಾಗಿನ ನೀಡಲಾಯಿತು. ಗಂಡಿಗೆ ಪೇಟ, ಪಂಚೆ, ಶರ್ಟ್ ವಿತರಿಸಿದರು. </p><p>ಶ್ರೀಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಶ್ರೀಮಠದ ಚೈತನ್ಯನಾಥ ಸ್ವಾಮೀಜಿ, ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ, ಪಾಂಡವಪುರದ ಪುಸ್ತಕಮನೆಯ ಎಂ. ಅಂಕೇಗೌಡ, ಇತಿಹಾಸ ತಜ್ಞ ಪ್ರೊ.ಕೆ. ಪುಟ್ಟರಂಗಪ್ಪ ಮುಂತಾದ ಗಣ್ಯರು ಮತ್ತು ಭಕ್ತರು ಪಾಲ್ಗೊಂಡಿದ್ದರು. </p>.ಮೌಲ್ಯಯುತ ಶಿಕ್ಷಣ ಇಂದಿನ ಅಗತ್ಯ: ಆದಿಚುಂಚನಗಿರಿ ಶ್ರೀ.<h2>ಹಿರಿಯ ದಂಪತಿಗೆ ಸನ್ಮಾನ</h2><p>ವಿವಾಹವಾಗಿ 50 ವರ್ಷ ದಾಂಪತ್ಯ ಜೀವನ ಪೂರೈಸಿದ ದಂಪತಿಗಳನ್ನು ನಿರ್ಮಲಾನಂದನಾಥ ಸ್ವಾಮೀಜಿ ಅವರು ಮೈಸೂರು ಪೇಟ, ಶಾಲು ಹಾಕಿ ಸನ್ಮಾನಿಸಿದರು. ಮಂಡ್ಯ, ಹಾಸನ, ಮೈಸೂರು, ರಾಮನಗರ ಹಾಗೂ ತುಮಕೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ 260 ಹಿರಿಯ ದಂಪತಿಗಳು ಆಗಮಿಸಿದ್ದು ವಿಶೇಷವಾಗಿತ್ತು.</p>.ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: HD ಕುಮಾರಸ್ವಾಮಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>