ಜೂನ್ 30ರಂದು ಸುಮಲತಾ ಅವರು ನಾಗಮಂಗಲ ತಾಲ್ಲೂಕು ಬ್ರಹ್ಮದೇವರಹಳ್ಳಿ ಭೇಟಿ ನೀಡಿ ವಿವಿಧ ಕಾಮಗಾರಿಗೆ ಚಾಲನೆ ನೀಡಿದ್ದರು. ಅವರೊಂದಿಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಪಾಲ್ಗೊಂಡಿದ್ದರು. ಜೊತೆಗೆ ಮಂಡ್ಯ ರೈತ ಸಭಾಂಗಣದಲ್ಲಿ ಕೊರೊನಾ ವಾರಿಯರ್ಸ್ಗಳಿಗೆ ಅಭಿನಂದಿಸಿದ್ದರು. ಅವರಿಗೆ ಬೆಂಬಲಿಗರು ಹಾಗೂ ಅಧಿಕಾರಿಗಳು ಸಾಥ್ ಕೊಟ್ಟಿದ್ದರು. ಪಾಂಡವಪುರ ಸರ್ಕಾರಿ ಶಾಲೆಯ ಕಾಂಪೌಂಡ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದರು.